Latest Updates
-
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು!
ನವದಂಪತಿ ನವರಾತ್ರಿ ಆಚರಣೆ ಹೇಗೆ ಮಾಡಿದರೆ ಒಳ್ಳೆಯದು?
ನವರಾತ್ರಿ ಎಂಬುವುದು 9 ದಿನಗಳ ಆಚರಣೆ. ಈ ಸಮಯದಲ್ಲಿ ಸರಸ್ವತಿ, ದುರ್ಗೆ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಇನ್ನು ನವರಾತ್ರಿಯಲ್ಲಿ ನವ ದಂಪತಿಗಳು ನವರಾತ್ರಿ ಆಚರಣೆ ಮಾಡುವುದರಿಂದ ಅವರ ದಾಂಪತ್ಯ ಜೀವನ ಚೆನ್ನಾಗಿರಲಿದೆ, ನವರಾತ್ರಿಯನ್ನು ಆಚರಣೆ ಮಾಡುವಾಗ ಈ ಅಂಶಗಳ ಕಡೆ ಗಮನಹರಿಸಿ:
* ಮೊದಲು ಮನೆಯನ್ನು ಸ್ವಚ್ಛಗೊಳಿಸಬೇಕು. ಮನೆಯನ್ನು ಸ್ವಚ್ಛವಾಗಿ ಇಡದಿದ್ದರೆ ಲಕ್ಷ್ಮಿ ಬರುವುದಿಲ್ಲ ಎಂದು ಹೇಳಲಾಗುವುದು.
* ಘಟಸ್ಥಾಪನ ಸಮಯದಲ್ಲಿ ಕಲಶ ಇರಿಸಬೇಕು. ವೀಳ್ಯೆದೆಲೆ, ಅಡಿಗೆ, ನಾಣ್ಯ, ಧಾನ್ಯಗಳನ್ನು ಹಾಕಿ ಕಲಶದ ಮೇಲೆ ತೆಂಗಿನಕಾಯಿ ಇರಿಸಿ ನಂತರ ಕೆಂಪು ದಾರದಿಂದ ಕಲಶವನ್ನು ಸುತ್ತಬೇಕು. ಈ ಕಲಶ 9 ದಿನಗಳು ಇರಬೇಕು.

* ಕಲಶವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಲಶದ ಮೇಲೆ ಇಡಬೇಕು. ಈ ತೆಂಗಿನಕಾಯಿಯನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬಹುದು.
* ಧಾನ್ಯ ಬೆಳೆಯುವುದು: ಮಣ್ಣಿನ ಮಡಿಕೆಗೆ ಮಣ್ಣು ತುಂಬಿ ಅದರಲ್ಲಿ ನವ ಧಾನ್ಯಗಳನ್ನು ಹಾಕಿಡಿ, ಆ ಧಾನ್ಯಗಳು ಮೊಳಕೆ ಬರುತ್ತದೆ, ಅದನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬೇಕು.
* ದೇವಿಗೆ ಈ ವಸ್ತುಗಳನ್ನು ಅರ್ಪಿಸಿ: ದೇವಿಗೆ ಕೆಂಪು ಬಳೆಗಳು, ಸಿಂದೂರ, ಕುಂಕುಮ, ಮೆಹಂದಿ ಹೀಗೆ ಅಲಂಕಾರಿಕ ವಸ್ತುಗಳನ್ನು ಅರ್ಪಿಸಿ, ಇದರಿಂದ ದೇವಿ ವೈವಾಹಿಕ ಜೀವನದಲ್ಲಿ ಇಷ್ಟಾರ್ಥ ನೆರವೇರಿಸುತ್ತಾಳೆ ಎಂದು ಹೇಳಲಾಗುವುದು.
* ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು: ನವರಾತ್ರಿಯಲ್ಲಿ ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು, ಈ ಜ್ಯೋತಿ ನಿರಂತರ ಉರಿಯಬೇಕು, ಹಗಲು-ರಾತ್ರಿ ಈ ದೀಪ ಆರದಂತೆ ನೋಡಿಕೊಳ್ಳಬೇಕು. ಈ ರೀತಿ ಅಖಂಡ ಜ್ಯೋತಿ ಬೆಳಗವುದರಿಂದ ಎಲ್ಲಾ ಋಣಾತ್ಮಕ ಶಕ್ತಿ ದೂರಾಗುವುದು.
* ಲವಂಗ: ದೇವಿಗೆ ಆರತಿ ಬೆಳಗುವಾಗ ಕರ್ಪೂರ ಜೊತೆಗೆ ವೀಳ್ಯೆದೆಲೆಯಲ್ಲಿ ಲವಂಗ, ಜೇನು ತುಪ್ಪ ಹಾಕಿ ಅರ್ಪಿಸಿ. ಈ ರೀತಿ ಆರತಿ ಬೆಳಗಯವುದರಿಂದ ಮನೆಗೆ ಒಳಿತಾಗುವುದು.
ಪತಿ-ಪತ್ನಿ ಈ ದಿನಗಳಲ್ಲಿ ಸೇರಬಾರದು
ನವದಂಪತಿ ದುರ್ಗೆಯ ಆರಾಧನೆ ಮಾಡುವಾಗ ಸರಸ-ಸಲ್ಲಾಪ ಮಾಡಬಾರದು. ಶ್ರದ್ಧೆಯಿಂದ ದೇವಿಯನ್ನು ಆರಾಧಿಸಬೇಕು. 9 ದಿನಗಳು ಭಕ್ತಿಯಿಂದ ಅವಳನ್ನು ಆರಾಧನೆ ಮಾಡಿದರೆ ದೇವಿ ನಿಮಗೆ ಸಂತಾನ ಭಾಗ್ಯ ನೀಡುತ್ತಾಳೆ ಅಲ್ಲದೆ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications