Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವದಂಪತಿ ನವರಾತ್ರಿ ಆಚರಣೆ ಹೇಗೆ ಮಾಡಿದರೆ ಒಳ್ಳೆಯದು?
ನವರಾತ್ರಿ ಎಂಬುವುದು 9 ದಿನಗಳ ಆಚರಣೆ. ಈ ಸಮಯದಲ್ಲಿ ಸರಸ್ವತಿ, ದುರ್ಗೆ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಇನ್ನು ನವರಾತ್ರಿಯಲ್ಲಿ ನವ ದಂಪತಿಗಳು ನವರಾತ್ರಿ ಆಚರಣೆ ಮಾಡುವುದರಿಂದ ಅವರ ದಾಂಪತ್ಯ ಜೀವನ ಚೆನ್ನಾಗಿರಲಿದೆ, ನವರಾತ್ರಿಯನ್ನು ಆಚರಣೆ ಮಾಡುವಾಗ ಈ ಅಂಶಗಳ ಕಡೆ ಗಮನಹರಿಸಿ:
* ಮೊದಲು ಮನೆಯನ್ನು ಸ್ವಚ್ಛಗೊಳಿಸಬೇಕು. ಮನೆಯನ್ನು ಸ್ವಚ್ಛವಾಗಿ ಇಡದಿದ್ದರೆ ಲಕ್ಷ್ಮಿ ಬರುವುದಿಲ್ಲ ಎಂದು ಹೇಳಲಾಗುವುದು.
* ಘಟಸ್ಥಾಪನ ಸಮಯದಲ್ಲಿ ಕಲಶ ಇರಿಸಬೇಕು. ವೀಳ್ಯೆದೆಲೆ, ಅಡಿಗೆ, ನಾಣ್ಯ, ಧಾನ್ಯಗಳನ್ನು ಹಾಕಿ ಕಲಶದ ಮೇಲೆ ತೆಂಗಿನಕಾಯಿ ಇರಿಸಿ ನಂತರ ಕೆಂಪು ದಾರದಿಂದ ಕಲಶವನ್ನು ಸುತ್ತಬೇಕು. ಈ ಕಲಶ 9 ದಿನಗಳು ಇರಬೇಕು.

* ಕಲಶವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಲಶದ ಮೇಲೆ ಇಡಬೇಕು. ಈ ತೆಂಗಿನಕಾಯಿಯನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬಹುದು.
* ಧಾನ್ಯ ಬೆಳೆಯುವುದು: ಮಣ್ಣಿನ ಮಡಿಕೆಗೆ ಮಣ್ಣು ತುಂಬಿ ಅದರಲ್ಲಿ ನವ ಧಾನ್ಯಗಳನ್ನು ಹಾಕಿಡಿ, ಆ ಧಾನ್ಯಗಳು ಮೊಳಕೆ ಬರುತ್ತದೆ, ಅದನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬೇಕು.
* ದೇವಿಗೆ ಈ ವಸ್ತುಗಳನ್ನು ಅರ್ಪಿಸಿ: ದೇವಿಗೆ ಕೆಂಪು ಬಳೆಗಳು, ಸಿಂದೂರ, ಕುಂಕುಮ, ಮೆಹಂದಿ ಹೀಗೆ ಅಲಂಕಾರಿಕ ವಸ್ತುಗಳನ್ನು ಅರ್ಪಿಸಿ, ಇದರಿಂದ ದೇವಿ ವೈವಾಹಿಕ ಜೀವನದಲ್ಲಿ ಇಷ್ಟಾರ್ಥ ನೆರವೇರಿಸುತ್ತಾಳೆ ಎಂದು ಹೇಳಲಾಗುವುದು.
* ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು: ನವರಾತ್ರಿಯಲ್ಲಿ ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು, ಈ ಜ್ಯೋತಿ ನಿರಂತರ ಉರಿಯಬೇಕು, ಹಗಲು-ರಾತ್ರಿ ಈ ದೀಪ ಆರದಂತೆ ನೋಡಿಕೊಳ್ಳಬೇಕು. ಈ ರೀತಿ ಅಖಂಡ ಜ್ಯೋತಿ ಬೆಳಗವುದರಿಂದ ಎಲ್ಲಾ ಋಣಾತ್ಮಕ ಶಕ್ತಿ ದೂರಾಗುವುದು.
* ಲವಂಗ: ದೇವಿಗೆ ಆರತಿ ಬೆಳಗುವಾಗ ಕರ್ಪೂರ ಜೊತೆಗೆ ವೀಳ್ಯೆದೆಲೆಯಲ್ಲಿ ಲವಂಗ, ಜೇನು ತುಪ್ಪ ಹಾಕಿ ಅರ್ಪಿಸಿ. ಈ ರೀತಿ ಆರತಿ ಬೆಳಗಯವುದರಿಂದ ಮನೆಗೆ ಒಳಿತಾಗುವುದು.
ಪತಿ-ಪತ್ನಿ ಈ ದಿನಗಳಲ್ಲಿ ಸೇರಬಾರದು
ನವದಂಪತಿ ದುರ್ಗೆಯ ಆರಾಧನೆ ಮಾಡುವಾಗ ಸರಸ-ಸಲ್ಲಾಪ ಮಾಡಬಾರದು. ಶ್ರದ್ಧೆಯಿಂದ ದೇವಿಯನ್ನು ಆರಾಧಿಸಬೇಕು. 9 ದಿನಗಳು ಭಕ್ತಿಯಿಂದ ಅವಳನ್ನು ಆರಾಧನೆ ಮಾಡಿದರೆ ದೇವಿ ನಿಮಗೆ ಸಂತಾನ ಭಾಗ್ಯ ನೀಡುತ್ತಾಳೆ ಅಲ್ಲದೆ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications









