Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ!
ನವದಂಪತಿ ನವರಾತ್ರಿ ಆಚರಣೆ ಹೇಗೆ ಮಾಡಿದರೆ ಒಳ್ಳೆಯದು?
ನವರಾತ್ರಿ ಎಂಬುವುದು 9 ದಿನಗಳ ಆಚರಣೆ. ಈ ಸಮಯದಲ್ಲಿ ಸರಸ್ವತಿ, ದುರ್ಗೆ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಇನ್ನು ನವರಾತ್ರಿಯಲ್ಲಿ ನವ ದಂಪತಿಗಳು ನವರಾತ್ರಿ ಆಚರಣೆ ಮಾಡುವುದರಿಂದ ಅವರ ದಾಂಪತ್ಯ ಜೀವನ ಚೆನ್ನಾಗಿರಲಿದೆ, ನವರಾತ್ರಿಯನ್ನು ಆಚರಣೆ ಮಾಡುವಾಗ ಈ ಅಂಶಗಳ ಕಡೆ ಗಮನಹರಿಸಿ:
* ಮೊದಲು ಮನೆಯನ್ನು ಸ್ವಚ್ಛಗೊಳಿಸಬೇಕು. ಮನೆಯನ್ನು ಸ್ವಚ್ಛವಾಗಿ ಇಡದಿದ್ದರೆ ಲಕ್ಷ್ಮಿ ಬರುವುದಿಲ್ಲ ಎಂದು ಹೇಳಲಾಗುವುದು.
* ಘಟಸ್ಥಾಪನ ಸಮಯದಲ್ಲಿ ಕಲಶ ಇರಿಸಬೇಕು. ವೀಳ್ಯೆದೆಲೆ, ಅಡಿಗೆ, ನಾಣ್ಯ, ಧಾನ್ಯಗಳನ್ನು ಹಾಕಿ ಕಲಶದ ಮೇಲೆ ತೆಂಗಿನಕಾಯಿ ಇರಿಸಿ ನಂತರ ಕೆಂಪು ದಾರದಿಂದ ಕಲಶವನ್ನು ಸುತ್ತಬೇಕು. ಈ ಕಲಶ 9 ದಿನಗಳು ಇರಬೇಕು.

* ಕಲಶವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಲಶದ ಮೇಲೆ ಇಡಬೇಕು. ಈ ತೆಂಗಿನಕಾಯಿಯನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬಹುದು.
* ಧಾನ್ಯ ಬೆಳೆಯುವುದು: ಮಣ್ಣಿನ ಮಡಿಕೆಗೆ ಮಣ್ಣು ತುಂಬಿ ಅದರಲ್ಲಿ ನವ ಧಾನ್ಯಗಳನ್ನು ಹಾಕಿಡಿ, ಆ ಧಾನ್ಯಗಳು ಮೊಳಕೆ ಬರುತ್ತದೆ, ಅದನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬೇಕು.
* ದೇವಿಗೆ ಈ ವಸ್ತುಗಳನ್ನು ಅರ್ಪಿಸಿ: ದೇವಿಗೆ ಕೆಂಪು ಬಳೆಗಳು, ಸಿಂದೂರ, ಕುಂಕುಮ, ಮೆಹಂದಿ ಹೀಗೆ ಅಲಂಕಾರಿಕ ವಸ್ತುಗಳನ್ನು ಅರ್ಪಿಸಿ, ಇದರಿಂದ ದೇವಿ ವೈವಾಹಿಕ ಜೀವನದಲ್ಲಿ ಇಷ್ಟಾರ್ಥ ನೆರವೇರಿಸುತ್ತಾಳೆ ಎಂದು ಹೇಳಲಾಗುವುದು.
* ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು: ನವರಾತ್ರಿಯಲ್ಲಿ ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು, ಈ ಜ್ಯೋತಿ ನಿರಂತರ ಉರಿಯಬೇಕು, ಹಗಲು-ರಾತ್ರಿ ಈ ದೀಪ ಆರದಂತೆ ನೋಡಿಕೊಳ್ಳಬೇಕು. ಈ ರೀತಿ ಅಖಂಡ ಜ್ಯೋತಿ ಬೆಳಗವುದರಿಂದ ಎಲ್ಲಾ ಋಣಾತ್ಮಕ ಶಕ್ತಿ ದೂರಾಗುವುದು.
* ಲವಂಗ: ದೇವಿಗೆ ಆರತಿ ಬೆಳಗುವಾಗ ಕರ್ಪೂರ ಜೊತೆಗೆ ವೀಳ್ಯೆದೆಲೆಯಲ್ಲಿ ಲವಂಗ, ಜೇನು ತುಪ್ಪ ಹಾಕಿ ಅರ್ಪಿಸಿ. ಈ ರೀತಿ ಆರತಿ ಬೆಳಗಯವುದರಿಂದ ಮನೆಗೆ ಒಳಿತಾಗುವುದು.
ಪತಿ-ಪತ್ನಿ ಈ ದಿನಗಳಲ್ಲಿ ಸೇರಬಾರದು
ನವದಂಪತಿ ದುರ್ಗೆಯ ಆರಾಧನೆ ಮಾಡುವಾಗ ಸರಸ-ಸಲ್ಲಾಪ ಮಾಡಬಾರದು. ಶ್ರದ್ಧೆಯಿಂದ ದೇವಿಯನ್ನು ಆರಾಧಿಸಬೇಕು. 9 ದಿನಗಳು ಭಕ್ತಿಯಿಂದ ಅವಳನ್ನು ಆರಾಧನೆ ಮಾಡಿದರೆ ದೇವಿ ನಿಮಗೆ ಸಂತಾನ ಭಾಗ್ಯ ನೀಡುತ್ತಾಳೆ ಅಲ್ಲದೆ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications