Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ನವದಂಪತಿ ನವರಾತ್ರಿ ಆಚರಣೆ ಹೇಗೆ ಮಾಡಿದರೆ ಒಳ್ಳೆಯದು?
ನವರಾತ್ರಿ ಎಂಬುವುದು 9 ದಿನಗಳ ಆಚರಣೆ. ಈ ಸಮಯದಲ್ಲಿ ಸರಸ್ವತಿ, ದುರ್ಗೆ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಇನ್ನು ನವರಾತ್ರಿಯಲ್ಲಿ ನವ ದಂಪತಿಗಳು ನವರಾತ್ರಿ ಆಚರಣೆ ಮಾಡುವುದರಿಂದ ಅವರ ದಾಂಪತ್ಯ ಜೀವನ ಚೆನ್ನಾಗಿರಲಿದೆ, ನವರಾತ್ರಿಯನ್ನು ಆಚರಣೆ ಮಾಡುವಾಗ ಈ ಅಂಶಗಳ ಕಡೆ ಗಮನಹರಿಸಿ:
* ಮೊದಲು ಮನೆಯನ್ನು ಸ್ವಚ್ಛಗೊಳಿಸಬೇಕು. ಮನೆಯನ್ನು ಸ್ವಚ್ಛವಾಗಿ ಇಡದಿದ್ದರೆ ಲಕ್ಷ್ಮಿ ಬರುವುದಿಲ್ಲ ಎಂದು ಹೇಳಲಾಗುವುದು.
* ಘಟಸ್ಥಾಪನ ಸಮಯದಲ್ಲಿ ಕಲಶ ಇರಿಸಬೇಕು. ವೀಳ್ಯೆದೆಲೆ, ಅಡಿಗೆ, ನಾಣ್ಯ, ಧಾನ್ಯಗಳನ್ನು ಹಾಕಿ ಕಲಶದ ಮೇಲೆ ತೆಂಗಿನಕಾಯಿ ಇರಿಸಿ ನಂತರ ಕೆಂಪು ದಾರದಿಂದ ಕಲಶವನ್ನು ಸುತ್ತಬೇಕು. ಈ ಕಲಶ 9 ದಿನಗಳು ಇರಬೇಕು.

* ಕಲಶವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಲಶದ ಮೇಲೆ ಇಡಬೇಕು. ಈ ತೆಂಗಿನಕಾಯಿಯನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬಹುದು.
* ಧಾನ್ಯ ಬೆಳೆಯುವುದು: ಮಣ್ಣಿನ ಮಡಿಕೆಗೆ ಮಣ್ಣು ತುಂಬಿ ಅದರಲ್ಲಿ ನವ ಧಾನ್ಯಗಳನ್ನು ಹಾಕಿಡಿ, ಆ ಧಾನ್ಯಗಳು ಮೊಳಕೆ ಬರುತ್ತದೆ, ಅದನ್ನು ಕೊನೆಯ ದಿನ ಪ್ರಸಾದವನ್ನಾಗಿ ಬಳಸಬೇಕು.
* ದೇವಿಗೆ ಈ ವಸ್ತುಗಳನ್ನು ಅರ್ಪಿಸಿ: ದೇವಿಗೆ ಕೆಂಪು ಬಳೆಗಳು, ಸಿಂದೂರ, ಕುಂಕುಮ, ಮೆಹಂದಿ ಹೀಗೆ ಅಲಂಕಾರಿಕ ವಸ್ತುಗಳನ್ನು ಅರ್ಪಿಸಿ, ಇದರಿಂದ ದೇವಿ ವೈವಾಹಿಕ ಜೀವನದಲ್ಲಿ ಇಷ್ಟಾರ್ಥ ನೆರವೇರಿಸುತ್ತಾಳೆ ಎಂದು ಹೇಳಲಾಗುವುದು.
* ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು: ನವರಾತ್ರಿಯಲ್ಲಿ ಅಖಂಡ ಜ್ಯೋತಿ ಬೆಳಗಿದರೆ ಒಳ್ಳೆಯದು, ಈ ಜ್ಯೋತಿ ನಿರಂತರ ಉರಿಯಬೇಕು, ಹಗಲು-ರಾತ್ರಿ ಈ ದೀಪ ಆರದಂತೆ ನೋಡಿಕೊಳ್ಳಬೇಕು. ಈ ರೀತಿ ಅಖಂಡ ಜ್ಯೋತಿ ಬೆಳಗವುದರಿಂದ ಎಲ್ಲಾ ಋಣಾತ್ಮಕ ಶಕ್ತಿ ದೂರಾಗುವುದು.
* ಲವಂಗ: ದೇವಿಗೆ ಆರತಿ ಬೆಳಗುವಾಗ ಕರ್ಪೂರ ಜೊತೆಗೆ ವೀಳ್ಯೆದೆಲೆಯಲ್ಲಿ ಲವಂಗ, ಜೇನು ತುಪ್ಪ ಹಾಕಿ ಅರ್ಪಿಸಿ. ಈ ರೀತಿ ಆರತಿ ಬೆಳಗಯವುದರಿಂದ ಮನೆಗೆ ಒಳಿತಾಗುವುದು.
ಪತಿ-ಪತ್ನಿ ಈ ದಿನಗಳಲ್ಲಿ ಸೇರಬಾರದು
ನವದಂಪತಿ ದುರ್ಗೆಯ ಆರಾಧನೆ ಮಾಡುವಾಗ ಸರಸ-ಸಲ್ಲಾಪ ಮಾಡಬಾರದು. ಶ್ರದ್ಧೆಯಿಂದ ದೇವಿಯನ್ನು ಆರಾಧಿಸಬೇಕು. 9 ದಿನಗಳು ಭಕ್ತಿಯಿಂದ ಅವಳನ್ನು ಆರಾಧನೆ ಮಾಡಿದರೆ ದೇವಿ ನಿಮಗೆ ಸಂತಾನ ಭಾಗ್ಯ ನೀಡುತ್ತಾಳೆ ಅಲ್ಲದೆ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications