Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಿಜಯ ಏಕಾದಶಿ ಯಾವಾಗ? ಇಷ್ಟಾರ್ಥ ಸಿದ್ಧಿಗೆ ಈ ದಿನ ಏನು ಮಾಡಬೇಕು?
ಫಾಲ್ಗುಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಏಕಾದಶಿಯನ್ನು ವಿಜಯ ಏಕಾದಶಿಯಂದು ಆಚರಿಸಲಾಗುವುದು, ಈ ವರ್ಷ ವಿಜಯ ಏಕಾದಶಿಯನ್ನು ಫೆಬ್ರವರಿ 24ರಂದು ವಿಜಯ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಈ ಏಕಾದಶಿಯ ಮಹತ್ವವೇನು? ವಿಜಯ ಏಕಾದಶಿಯ ಆಚರಣೆ ಹೇಗೆ ಎಂದು ನೋಡೋಣ:

ವಿಜಯ ಏಕಾದಶಿ ದಿನಾಂಕ ಮತ್ತು ಸಮಯ
ಏಕಾದಶಿ ತಿಥಿ ಪ್ರಾರಂಭ ಫೆಬ್ರವರಿ 23, ಮಧ್ಯಾಹ್ನ 1:55ಕ್ಕೆ ಪ್ರಾರಂಭ
ಏಕಾದಶಿ ತಿಥಿ ಮುಕ್ತಾಯ ಫೆಬ್ರವರಿ 24 ಮಧ್ಯಾಹ್ನ 1:44ಕ್ಕೆ
ಪಾರಣ ಸಮಯ ಫೆಬ್ರವರಿ 25 ಬೆಳಗ್ಗೆ 06:49ರಿಂದ 09:07ರೊಳಗೆ ಉಪವಾಸ ಮುರಿಯಿರಿ
ಉದಯ ತಿಥಿ ಪ್ರಕಾರ ವಿಜಯ ಏಕಾದಶಿಯನ್ನು ಫೆಬ್ರವರಿ 25ರಂದು ಆಚರಿಸಲಾಗುವುದು
ವಿಜಯ ಏಕಾದಶಿಯ ಪೂಜಾ ನಿಯಮಗಳು
ವಿಜಯ ಏಕಾದಶಿಯಂದು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ ಪೂಜಾ ಕೋಣೆಯನ್ನು ಸ್ವಚ್ಛಗೊಳಿಸಿ
ನಂತರ ಮನೆ ಬಾಗಿಲಿಗೆ ಮಾವಿನ ತೋರಣಗಳನ್ನು ಕಟ್ಟಿ, ಕಲಶವನ್ನು ಅಲಂಕರಿಸಿ
ವಿಷ್ಣು ಮೂರ್ತಿಯನ್ನು ಹೊಸ ವಸ್ತ್ರ ಹಾಗೂ ಹೂವುಗಳಿಂದ ಅಲಂಕರಿಸಿ
ಉಪವಾಸವಿದ್ದು ಸಂಕಲ್ಪ ತೆಗೆದುಕೊಳ್ಳಿ
ನಂತರ ಶ್ರೀ ವಿಷ್ಣುವಿನ ಪೂಜೆಯನ್ನು ವಿಷ್ಣು ಮಂತ್ರಗಳನ್ನು ಪಠಿಸುತ್ತಾ ಹೇಳಿ.
ವಿಜಯ ಏಕಾದಶಿಯ ಮಹತ್ವವೇನು?
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಾವು ಏನು ಬಯಸಿದ್ದೇವೋ ಅದರಲ್ಲಿ ಯಶಸ್ಸು ದೊರೆಯಲಿದೆ ಎಂದು ಹೇಳಲಾಗುವುದು.
ಹಾಗಾಗಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಬಯಸುವವರು, ವೃತ್ತಿ ಬದುಕಿನಲ್ಲಿ ಸಾಧನೆ ಬಯಸುವವರು ವಿಜಯ ಏಕಾದಶಿ ಮಾಡಿದರೆ ಉತ್ತಮ ಫಲ ಪಡೆಯಲು ಸಾಧ್ಯವಾಗುವುದು
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಮ್ಮಲ್ಲಿರುವ ಗೊಂದಲಗಳು ಬಗೆಹರಿಯಲಿದೆ, ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದು.
ವಿಜಯ ಏಕಾದಶಿಯಂದು ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸುವಾಗ ಈ ಮಂತ್ರಗಳನ್ನು ಪಠಿಸಿ
ವಿಷ್ಣು ಮೂಲ ಮಂತ್ರ:
ಓಂ ನಮೋ ಭಗವತೇ ವಾಸುದೇವಾಯ
ವಿಷ್ಣು ಗಾಯತ್ರಿ ಮಂತ್ರ
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
- ವಿಜಯ ದಶಮಿ ಆಚರಣೆ ಮಾಡುವುದರಿಂದ ಶ್ರೀವಿಷ್ಣುವಿನ ಕೃಪೆಯಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗಲಿದೆ
- ವ್ಯಕ್ತಿ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಅದು ದೂರಾಗಲಿದೆ
- ವೃತ್ತಿ ಬದುಕಿನಲ್ಲಿನ ಸಮಸ್ಯೆಗಳು ಬಗೆಹರಿಯಲಿದೆ
- ನಾವು ಕೆಲಸದಲ್ಲಿ ಏನಾದರು ಯಶಸ್ಸು ಸಿಗಬೇಕು ಅಥವಾ ನಾವು ಇಷ್ಟಡುತ್ತಿರುವ ಕೆಲಸಕ್ಕೆ ಪ್ರಯತ್ನ ಪಡುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಆಸೆ ನೆರವೇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











