Latest Updates
-
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ
ವಿಜಯ ಏಕಾದಶಿ ಯಾವಾಗ? ಇಷ್ಟಾರ್ಥ ಸಿದ್ಧಿಗೆ ಈ ದಿನ ಏನು ಮಾಡಬೇಕು?
ಫಾಲ್ಗುಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಏಕಾದಶಿಯನ್ನು ವಿಜಯ ಏಕಾದಶಿಯಂದು ಆಚರಿಸಲಾಗುವುದು, ಈ ವರ್ಷ ವಿಜಯ ಏಕಾದಶಿಯನ್ನು ಫೆಬ್ರವರಿ 24ರಂದು ವಿಜಯ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಈ ಏಕಾದಶಿಯ ಮಹತ್ವವೇನು? ವಿಜಯ ಏಕಾದಶಿಯ ಆಚರಣೆ ಹೇಗೆ ಎಂದು ನೋಡೋಣ:

ವಿಜಯ ಏಕಾದಶಿ ದಿನಾಂಕ ಮತ್ತು ಸಮಯ
ಏಕಾದಶಿ ತಿಥಿ ಪ್ರಾರಂಭ ಫೆಬ್ರವರಿ 23, ಮಧ್ಯಾಹ್ನ 1:55ಕ್ಕೆ ಪ್ರಾರಂಭ
ಏಕಾದಶಿ ತಿಥಿ ಮುಕ್ತಾಯ ಫೆಬ್ರವರಿ 24 ಮಧ್ಯಾಹ್ನ 1:44ಕ್ಕೆ
ಪಾರಣ ಸಮಯ ಫೆಬ್ರವರಿ 25 ಬೆಳಗ್ಗೆ 06:49ರಿಂದ 09:07ರೊಳಗೆ ಉಪವಾಸ ಮುರಿಯಿರಿ
ಉದಯ ತಿಥಿ ಪ್ರಕಾರ ವಿಜಯ ಏಕಾದಶಿಯನ್ನು ಫೆಬ್ರವರಿ 25ರಂದು ಆಚರಿಸಲಾಗುವುದು
ವಿಜಯ ಏಕಾದಶಿಯ ಪೂಜಾ ನಿಯಮಗಳು
ವಿಜಯ ಏಕಾದಶಿಯಂದು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ ಪೂಜಾ ಕೋಣೆಯನ್ನು ಸ್ವಚ್ಛಗೊಳಿಸಿ
ನಂತರ ಮನೆ ಬಾಗಿಲಿಗೆ ಮಾವಿನ ತೋರಣಗಳನ್ನು ಕಟ್ಟಿ, ಕಲಶವನ್ನು ಅಲಂಕರಿಸಿ
ವಿಷ್ಣು ಮೂರ್ತಿಯನ್ನು ಹೊಸ ವಸ್ತ್ರ ಹಾಗೂ ಹೂವುಗಳಿಂದ ಅಲಂಕರಿಸಿ
ಉಪವಾಸವಿದ್ದು ಸಂಕಲ್ಪ ತೆಗೆದುಕೊಳ್ಳಿ
ನಂತರ ಶ್ರೀ ವಿಷ್ಣುವಿನ ಪೂಜೆಯನ್ನು ವಿಷ್ಣು ಮಂತ್ರಗಳನ್ನು ಪಠಿಸುತ್ತಾ ಹೇಳಿ.
ವಿಜಯ ಏಕಾದಶಿಯ ಮಹತ್ವವೇನು?
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಾವು ಏನು ಬಯಸಿದ್ದೇವೋ ಅದರಲ್ಲಿ ಯಶಸ್ಸು ದೊರೆಯಲಿದೆ ಎಂದು ಹೇಳಲಾಗುವುದು.
ಹಾಗಾಗಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಬಯಸುವವರು, ವೃತ್ತಿ ಬದುಕಿನಲ್ಲಿ ಸಾಧನೆ ಬಯಸುವವರು ವಿಜಯ ಏಕಾದಶಿ ಮಾಡಿದರೆ ಉತ್ತಮ ಫಲ ಪಡೆಯಲು ಸಾಧ್ಯವಾಗುವುದು
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಮ್ಮಲ್ಲಿರುವ ಗೊಂದಲಗಳು ಬಗೆಹರಿಯಲಿದೆ, ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದು.
ವಿಜಯ ಏಕಾದಶಿಯಂದು ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸುವಾಗ ಈ ಮಂತ್ರಗಳನ್ನು ಪಠಿಸಿ
ವಿಷ್ಣು ಮೂಲ ಮಂತ್ರ:
ಓಂ ನಮೋ ಭಗವತೇ ವಾಸುದೇವಾಯ
ವಿಷ್ಣು ಗಾಯತ್ರಿ ಮಂತ್ರ
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
- ವಿಜಯ ದಶಮಿ ಆಚರಣೆ ಮಾಡುವುದರಿಂದ ಶ್ರೀವಿಷ್ಣುವಿನ ಕೃಪೆಯಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗಲಿದೆ
- ವ್ಯಕ್ತಿ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಅದು ದೂರಾಗಲಿದೆ
- ವೃತ್ತಿ ಬದುಕಿನಲ್ಲಿನ ಸಮಸ್ಯೆಗಳು ಬಗೆಹರಿಯಲಿದೆ
- ನಾವು ಕೆಲಸದಲ್ಲಿ ಏನಾದರು ಯಶಸ್ಸು ಸಿಗಬೇಕು ಅಥವಾ ನಾವು ಇಷ್ಟಡುತ್ತಿರುವ ಕೆಲಸಕ್ಕೆ ಪ್ರಯತ್ನ ಪಡುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಆಸೆ ನೆರವೇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











