Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಈ ವಾರ (ಜನವರಿ 19ರವರೆಗೆ)ಈ 5 ರಾಶಿಯವರು ಸ್ವಲ್ಪ ಜಾಗ್ರತೆ
ಈ ವಾರದ ರಾಶಿಫಲ ಪ್ರಕಾರ ಕೆಲ ರಾಶಿಯವರು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲವರು ವೃತ್ತಿ ಬದುಕಿನಲ್ಲಿ, ಇನ್ನು ಕೆಲವರು ಕುಟುಂಬ ವಿಷಯದಲ್ಲಿ ಅಥವಾ ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಬೇಕು, ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:

ವೃಷಭ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ, ನಿಮ್ಮ ಕೆಲಸದಲ್ಲಿ ಅಡೆತಡೆ ಉಂಟಾಗಲಿದೆ, ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ, ನಿಮಗೆವಹಿಸಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ, ಆರ್ರತಿಕವಾಗಿ ಕೂಡ ಈ ಅವಧಿಯಲ್ಲಿ ಎಚ್ಚರಿಕೆವಹಿಸಬೇಕು, ಖರ್ಚು ಹೆಚ್ಚಿರಬಹುದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಮಿಥಿನ ರಾಶಿಯವರಿಗೆ ಈ ಅವಧಿಯಲ್ಲಿ ಏರಳಿತವಿರಲಿದೆ, ಕೆಲಸದ ಜಾಗದಲ್ಲಿ ಕೆಲವರು ಪಿತೂರಿ ಮಾಡಬಹುದು, ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಿ. ನಿಮ್ಮ ಕೆಲಸವನ್ನು ನೀವೇ ಮಾಡಿ ಮುಗಿಸಲು ಪ್ರಯತ್ನಿಸಬೇಕು, ಬೇರೆಯವರನ್ನು ನಂಬಿ ಕೂರಬೇಡಿ. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾನೇ ಲಾಭದಾಯಕವಾಗಿರಲಿದೆ. ಹಣಕಾಸಿನಲ್ಲಿ ಸ್ವಲ್ಪ ಸುಧಾರಣೆ ಕಂಡು ಬರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ಮಾನಸಿಕ ಒತ್ತಡ ಹೆಚ್ಚಿರಬಹುದು, ಆದರೆ ಅತಿಯಾದ ಮಾನಸಿಕ ಒತ್ತಡ ದೈಹಿಕ ಸಮಸ್ಯೆಯನ್ನು ಉಂಟು ಮಾಡಬಹುದು, ಹಾಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ, ಖರ್ಚು ಹೆಚ್ಚಿರಲಿದೆ, ಈ ಬಗ್ಗೆ ಜಾಗ್ರತೆವಹಿಸಿ, ಈ ಅವಧಿಯಲ್ಲಿ ಅಪಾಯಕಾರಿ ಹೂಡಿಕೆ ತಪ್ಪಿಸುವಂತೆ ಸಲಹೆ ನೀಡಲಾಗುವುದು. ಮನೆಯ ಕಡೆ ಕೂಡ ಗಮನಹರಿಸುವುದು ಒಳ್ಳೆಯದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ. ನೀವು ನಿಮ್ಮ ಕೆಲಸ ಕಾರ್ಯದಲ್ಲಿ ಕೆಲ ಅಡೆತಡೆ ಉಂಟಾಗಬಹುದು. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆದರೆ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಈ ವಾರ ಸ್ವಲ್ಪ ಗೊಂದಲ ಉಂಟಾಗಬಹುದು, ಆದರೆ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗುವುದು. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ. ಇನ್ನು ವೈವಾಹಿಕ ಬದುಕಿನ ಕಡೆಗೆ ಕೂಡ ಗಮನಹರಿಸಬೇಕು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications