Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಈ ವಾರ (ಜನವರಿ 19ರವರೆಗೆ)ಈ 5 ರಾಶಿಯವರು ಸ್ವಲ್ಪ ಜಾಗ್ರತೆ
ಈ ವಾರದ ರಾಶಿಫಲ ಪ್ರಕಾರ ಕೆಲ ರಾಶಿಯವರು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲವರು ವೃತ್ತಿ ಬದುಕಿನಲ್ಲಿ, ಇನ್ನು ಕೆಲವರು ಕುಟುಂಬ ವಿಷಯದಲ್ಲಿ ಅಥವಾ ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಬೇಕು, ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:

ವೃಷಭ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ, ನಿಮ್ಮ ಕೆಲಸದಲ್ಲಿ ಅಡೆತಡೆ ಉಂಟಾಗಲಿದೆ, ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ, ನಿಮಗೆವಹಿಸಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ, ಆರ್ರತಿಕವಾಗಿ ಕೂಡ ಈ ಅವಧಿಯಲ್ಲಿ ಎಚ್ಚರಿಕೆವಹಿಸಬೇಕು, ಖರ್ಚು ಹೆಚ್ಚಿರಬಹುದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಮಿಥಿನ ರಾಶಿಯವರಿಗೆ ಈ ಅವಧಿಯಲ್ಲಿ ಏರಳಿತವಿರಲಿದೆ, ಕೆಲಸದ ಜಾಗದಲ್ಲಿ ಕೆಲವರು ಪಿತೂರಿ ಮಾಡಬಹುದು, ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಿ. ನಿಮ್ಮ ಕೆಲಸವನ್ನು ನೀವೇ ಮಾಡಿ ಮುಗಿಸಲು ಪ್ರಯತ್ನಿಸಬೇಕು, ಬೇರೆಯವರನ್ನು ನಂಬಿ ಕೂರಬೇಡಿ. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾನೇ ಲಾಭದಾಯಕವಾಗಿರಲಿದೆ. ಹಣಕಾಸಿನಲ್ಲಿ ಸ್ವಲ್ಪ ಸುಧಾರಣೆ ಕಂಡು ಬರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ಮಾನಸಿಕ ಒತ್ತಡ ಹೆಚ್ಚಿರಬಹುದು, ಆದರೆ ಅತಿಯಾದ ಮಾನಸಿಕ ಒತ್ತಡ ದೈಹಿಕ ಸಮಸ್ಯೆಯನ್ನು ಉಂಟು ಮಾಡಬಹುದು, ಹಾಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ, ಖರ್ಚು ಹೆಚ್ಚಿರಲಿದೆ, ಈ ಬಗ್ಗೆ ಜಾಗ್ರತೆವಹಿಸಿ, ಈ ಅವಧಿಯಲ್ಲಿ ಅಪಾಯಕಾರಿ ಹೂಡಿಕೆ ತಪ್ಪಿಸುವಂತೆ ಸಲಹೆ ನೀಡಲಾಗುವುದು. ಮನೆಯ ಕಡೆ ಕೂಡ ಗಮನಹರಿಸುವುದು ಒಳ್ಳೆಯದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ. ನೀವು ನಿಮ್ಮ ಕೆಲಸ ಕಾರ್ಯದಲ್ಲಿ ಕೆಲ ಅಡೆತಡೆ ಉಂಟಾಗಬಹುದು. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆದರೆ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಈ ವಾರ ಸ್ವಲ್ಪ ಗೊಂದಲ ಉಂಟಾಗಬಹುದು, ಆದರೆ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗುವುದು. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ. ಇನ್ನು ವೈವಾಹಿಕ ಬದುಕಿನ ಕಡೆಗೆ ಕೂಡ ಗಮನಹರಿಸಬೇಕು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











