Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಷಾಢ ಅಮವಾಸ್ಯೆ ಯಾವಾಗ: ನೀವು ಎದುರಿಸುತ್ತಿರುವ ಕಷ್ಟಗಳಿಂದ ಪಾರಾಗಲು ಈ ದಿನ ಮಾಡಬೇಕಾದ 3 ಪರಿಹಾರ
ಆಷಾಢ ಅಮವಾಸ್ಯೆ ಯಾವಾಗ ಎಂಬ ಗೊಂದಲ ಕೆಲವರಲ್ಲಿದೆ, ಸಾಮಾಜಿಕ ತಾಣದಲ್ಲಿ ಆಷಾಢ ಅಮವಾಸ್ಯೆ ಜುಲೈ 5ಕ್ಕೆ ಎಂದು ನೋಡಿ ಕೆಲವರಿಗೆ ಹೌದಾ ಅನಿಸಿರಲೂಬಹುದು, ಆದರೆ ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆ ಜುಲೈ 5ಕ್ಕಲ್ಲ. ಉತ್ತರ ಭಾರತದ ಕಡೆ ಆಷಾಢ ಅಮವಾಸ್ಯೆಯನ್ನು ಜುಲೈ 5ಕ್ಕೆ ಆಚರಿಸಲಾಗುತ್ತಿದೆ.
ಆಷಾಢ ಅಮವಾಸ್ಯೆಗೆ ತುಂಬಾನೇ ಮಹತ್ವವಿದೆ, ಈ ದಿನದಂದು ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಅದರಲ್ಲಿ ಪಿತೃಗಳಿಗೆ ತರ್ಪಣ ಅರ್ಪಿಸುವುದು ತುಂಬಾನೇ ಮುಖ್ಯವಾಗಿದೆ.

ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆ ಯಾವಾಗ? ಈ ದಿನ ಮಾಡುವ ಪ್ರಮುಖ ಧಾರ್ಮಿಕ ಕಾರ್ಯಗಳೇನು? ಏಕೆ ಈ ಅಮವಾಸ್ಯೆ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ ಎಂದು ನೋಡೋಣ ಬನ್ನಿ:
ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆ ಯಾವಾಗ?
ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆಯನ್ನು ಆಗಸ್ಟ್ 4ರಂದು ಆಚರಿಸಲಾಗುವುದು. ಅಮವಾಸ್ಯೆ ತಿಥಿ ಆಗಸ್ಟ್ 3ಕ್ಕೆ ಪ್ರಾರಂಭವಾಗಿ ಆಗಸ್ಟ್ 4 ಮಧ್ಯಾಹ್ನ 03:51ಕ್ಕೆ ಮುಕ್ತಾಯವಾಗಲಿದೆ.
ಆಷಾಢ ಅಮವಾಸ್ಯೆಯಂದು ಈ ಧಾರ್ಮಿಕ ಕಾರ್ಯಗಳಿಗೆ ತುಂಬಾನೇ ಮಹತ್ವವಿದೆ
ತರ್ಪಣ ನೀಡಲಾಗುವುದು
ಆಷಾಢ ಅಮವಾಸ್ಯೆಯಂದು ತರ್ಪಣ ನೀಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ದಿನ ತೀರಿ ಹೋದ ಪಿತೃಗಳಿಗೆ ತರ್ಪಣ ನೀಡುವುದರಿಂದ ಅವರಿಗೆ ಮೋಕ್ಷ ಸಿಗುತ್ತದೆ, ಮೋಕ್ಷ ಸಿಗುವುದರಿಂದ ಅವರು ಸಂತುಷ್ಟರಾಗಿ ನಮ್ಮನ್ನು ಹರಿಸುತ್ತಾರೆ, ಇದರಿಂದ ನಮಗೆ ಒಳಿತಾಗುವುದು ಎಂಬುವುದು ಬಲವಾದ ನಂಬಿಕೆ.
ಪಿತೃದೋಷವಿದ್ದರೆ ಸಂತಾನ ಭಾಗ್ಯ ಇಲ್ಲದಿರುವುದು, ಆರ್ಥಿಕ ಸಮಸ್ಯೆ, ಮನೆಯಲ್ಲಿ ನೆಮ್ಮದಿ ಇಲ್ಲದಿರುವುದು ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಈ ದಿನ ಪಿತೃ ತರ್ಪಣ ಮಾಡಿದರೆ ಇಂಥ ಎಲ್ಲಾ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುವುದು . ಮನೆಯಲ್ಲಿ ನೆಮ್ಮದಿ ಇರಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ.
ಶನಿ ದೋಷ ನಿವಾರಣೆಗೂ ಈ ದಿನ ತುಂಬಾ ಮುಖ್ಯವಾಗಿದೆ
ಶನಿ ದೈಯ್ಯ, ಶನಿ ದೋಷ ಇರುವವರು ಈ ದಿನ ಕೆಲವೊಂದು ಪರಿಹಾರ ಮಾಡಿದರೆ ಕೆಟ್ಟ ಪರಿಣಾಮ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ದಿನ ಆಲದ ಮರದ ಕೆಳಗಡೆ ಸಾಸಿವೆಯೆಣ್ಣೆಯ ದೀಪ ಹಚ್ಚಬೇಕು, ಹಾಗೂ ಹನುಮಾನ್ ಚಾಲೀಸ ಪಠಿಸಬೇಕು. ಹೀಗೆ ಮಾಡುವುದರಿಂದ ಶನಿಯ ಕೋಪ ಕಡಿಮೆಯಾಗುವುದು, ಕಷ್ಟಗಳು ತುಂಬಾನೇ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಕಾಳಸರ್ಪ ದೋಷಕ್ಕೆ ಪರಿಹಾರ
ಕುಂಡಲಿಯಲ್ಲಿ ಕಾಳ ಸರ್ಪ ದೋಷವಿದ್ದರೆ ವಿವಾಹ ಸಂಬಂಧ ಕೂಡಿ ಬರದಿರುವುದು, ಮದುವೆಯಾದರೆ ಸಂತಾನ ಭಾಗ್ಯ ಇಲ್ಲದಿರುವುದು, ವ್ಯವಹಾರದಲ್ಲಿ, ವೃತ್ತಿ ಬದುಕಿನಲ್ಲಿ ತೊಂದರೆ ಅನುಭವಿಸುವುದು ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಇದರ ನಿವಾರಣೆಗೆ ಈ ದಿನ ಪರಿಹಾರ ಮಾಡಿಸಿದರೆ ಹೆಚ್ಚು ಪರಿಣಾಮಕಾರಿ ಎಂದು ಹೇಳಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications