Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಯುಗಾದಿಯಂದು ಈ 6 ರುಚಿ ಸವಿಯಬೇಕು ಎನ್ನುವುದರ ಹಿಂದಿರುವ ಧಾರ್ಮಿಕ ಅರ್ಥವೇನು?
ಯುಗಾದಿಯಂದು ಬೇವು-ಬೆಲ್ಲ ಇರಲೇಬೇಕು. ಬೇವು ಬೆಲ್ಲದ ಜೊತೆಗೆ ಇನ್ನೂ 4 ಬಗೆಯ ರುಚಿ ಸವಿಯಬೇಕೆಂದು ಹೇಳಲಾಗುವುದು. ಪ್ರತಿಯೊಂದು ರುಚಿ ಅದರದ್ದೇ ಆದ ಭಾವನೆ ನೀಡುವುದು ಎಂದು ಹೇಳಲಾಗುವುದು. ಈ ಯಗಾದಿಯನ್ನು ಯಾವ 6 ರುಚಿ ಸವಿಯಬೇಕು, ಆ ರುಚಿಗಳು ಜೀವನದ ಯಾವ ಅಂಶಗಳನ್ನು ಹೇಳುತ್ತದೆ ಎಂದು ನೋಡೋಣ ಬನ್ನಿ:

ಬೇವು-ಕಹಿ
ಬೇವು-ಬೆಲ್ಲ ಸವಿಯುವ ಮೂಲಕ ಯುಗಾದಿ ಹಬ್ಬವನ್ನು ಆಚರಿಸುತ್ತೇವೆ. ಬೇವು ಎಂದರೆ ಕಹಿ. ಬೇವು ಔಷಧೀಯ ಗುಣವಿರುವ ಎಲೆ, ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಗಳಿವೆ. ಇನ್ನು ಬದುಕಿನಲ್ಲಿ ಬರಿ ಸಿಹಿಯಲ್ಲಿ ಕಹಿಯೂ ಇರುತ್ತದೆ, ಅದನ್ನು ಸಹಿಸಿಕೊಂಡು ಹೋಗಬೇಕು, ಕಷ್ಟ ಬಂದಾಗ ಕುಗ್ಗಬಾರದು, ಪ್ರತಿಯೊಂದು ಕಷ್ಟವನ್ನು ಎದುರಿಸಬೇಕು, ಆವಾಗ ಬದುಕು ಸಿಹಿಯಾಗುತ್ತದೆ, ಬದುಕು ಚೆನ್ನಾಗಿರುತ್ತದೆ ಎಂಬ ಭಾವನೆಯನ್ನು ಈ ರುಚಿ ಸೂಚಿಸುತ್ತದೆ.
ಬೆಲ್ಲ-ಸಿಹಿಯ
ಬದುಕಿನಲ್ಲಿ ಸಂತೋಷವಾಗಿರಬೇಕೆಂದು ಬಯಸುತ್ತೇವೆ, ಈ ಬೆಲ್ಲ ಸಿಹಿ, ಕಷ್ಟದ ನಂತರ ಸುಖ ಬಂದೇ ಬರುತ್ತದೆ, ನೋವು ದೂರಾಗಿ ಸಂತೋಷ ಹೆಚ್ಚಾಗುವುದು ಎಂಬ ಆಶಯವನ್ನು ತಿಳಿಸುತ್ತದೆ. ನಾವು ಹೊಸತನದ ಬದಲಾವಣೆಯನ್ನು ಸ್ವೀಕರಿಸಬೇಕು. ಬದುಕನ್ನು ನಗು ನಗುತ್ತಾ ಸ್ವೀಕರಿಸಬೇಕು ಎಂಬ ಭಾವನೆಯನ್ನು ಇದು ಮೂಡಿಸುತ್ತದೆ.
ಕಾಳು ಮೆಣಸು-ಖಾರ
ಕಾಳು ಮೆಣಸು ಕೋಪವನ್ನು ಸೂಚಿಸುವುದು. ಪ್ರತಿಯೊಬ್ಬ ಮನುಷ್ಯನಲ್ಲಿ ಕೋಪವಿರುತ್ತದೆ, ನಾವು ಸಾರಿಗೆ ಕಾಳು ಮೆಣಸು ಸ್ವಲ್ಪ ಬಳಸುತ್ತೇವೆ ಅದೇ ರೀತಿ ಕೋಪವಿರಬೇಕು, ಆದರೆ ಕಡಿಮೆ ಇರಬೇಕು ಎಂದು ಹೇಳಲಾಗುವುದು. ಕೋಪದ ಕೈಗೆ ಬುದ್ಧಿ ಕೊಡಬಾರದು ಅಂತಾರೆ. ಕೋಪದಿಂದ ಏನೇ ಮಾಡಿದರೂ ಅದರಿಂದ ತೊಂದರೆಯಾಗುತ್ತದೆ. ಕೋಪ ಕಡಿಮೆಯಾದರೆ ಬದುಕು ತುಂಬಾ ಚೆನ್ನಾಗಿರಲಿದೆ.
ಉಪ್ಪು
ಉಪ್ಪು ಇಲ್ಲದ ಅಡುಗೆ ರುಚಿಸುವುದೇ ಇಲ್ಲ, ಉಪ್ಪು ಭಯವನ್ನು ಸೂಚಿಸುತ್ತದೆ. ಯಾವುದೇ ಕಾರ್ಯ ಮಾಡುವಾಗ ಸ್ವಲ್ಪ ಭಯವಿರಬೇಕು, ಆದರೆ . ಎಲ್ಲಿ ಎಳ್ಳಷ್ಟು ಭಯವನ್ನು ಹೊಂದಿರುವುದಿಲ್ಲವೋ ಅಲ್ಲಿ ವ್ಯಕ್ತಿ ತಪ್ಪು ಮಾಡುತ್ತಾನೆ ಎಂದು ಹೇಳಲಾಗುವುದು. ಉಪ್ಪನ್ನು ರುಚಿಗೆ ತಕ್ಕಂತೆ ಬಲಸುತ್ತವೆ, ಆದರಂತೆ ವ್ಯಕ್ತಿ ತನ್ನ ಬದುಕಿನಲ್ಲಿ ಎಲ್ಲವೂ ಉಪ್ಪಿನಂತೆ ಪರಿಗಣಿಸಿದರೆ ಬದುಕು ಸುಂದರವಾಗಿರುತ್ತದೆ ಎಂದು ಹೇಳಲಾಗುವುದು.
ಹುಣಸೆ ಹಣ್ಣು
ಹುಳಿಯಾದ ಹುಣಸೆ ಹಣ್ಣು ಅತ್ಯುತ್ತಮ ಜೀರ್ಣಕಾರಿ ಆಹಾರ. ಇದು ನೀಡುವ ಧಾರ್ಮಿಕ ಸಂಗತಿ ಏನೆಂದರೆ ವ್ಯಕ್ತಿ ತನ್ನ ಜೀವನದಲ್ಲಿ ಬರುವ ಎಲ್ಲಾ ವಿಷಯ ಅಥವಾ ಸಂದರ್ಭಗಳನ್ನು ಸೂಕ್ತ ರೀತಿಯಲ್ಲಿ ಸ್ವೀಕರಿಸುವುದರ ಮೂಲಕ ಜೀರ್ಣಿಸಿಕೊಳ್ಳಬೇಕು. ಈ ರೀತಿಯ ಗುಣವಿದ್ದರೆ ಎಂಥ ಪರಿಸ್ಥಿತಿಯನ್ನೂ ನಿಭಾಯಿಸಲು ಸಾಧ್ಯವಾಗುವುದು.
ಮಾವು
ಇದು ಆಶ್ಚರ್ಯದ ಭಾವನೆಯ ಸಂಕೇತ. ಬೇವು ಬೆಲ್ಲದ ಜೊತೆಗೆ ಮಾವಿನ ಕಾಯಿಯ ರುಚಿಯು ಸೇರಿಕೊಂಡರೆ ಸೂಪರ್ ಆಗಿರುತ್ತದೆ. ಹಾಗೆಯೇ ಬದುಕಿನಲ್ಲಿ ಕೆಲ ಅಚ್ಚರಿಗಳು ಬದುಕನ್ನು ಮತ್ತಷ್ಟು ಸುಂದರಗೊಳಿಸುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications