Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಪಾದಗಳಲ್ಲಿ ಸಮಸ್ಯೆಯೇ? ಇಲ್ಲಿದೆ ಪರಿಹಾರ

ಪಾದಗಳ ಆರೈಕೆ ಸರಿಯಾಗಿ ಮಾಡದಿದ್ದರೆ ಕಾಯಿಲೆಗೆ ಔಷಧಿ ತೆಗೆದುಕೊಳ್ಳುತ್ತಿದ್ದರೆ ಹೀಗೆ ನಾನಾ ಕಾರಣಗಳಿಂದ ಪಾದಗಳಲ್ಲಿ ಸಮಸ್ಯೆ ಕಂಡು ಬರುತ್ತದೆ. ಅದರಲ್ಲೂ ಈ ಕೆಳಗಿನ ಸಮಸ್ಯೆಗಳು ಕಂಡು ಬಂದರೆ ಪರಿಹಾರವೇನು ಎಂದು ನೋಡೋಣ ಬನ್ನಿ.
1. ಪಾದಗಳಲ್ಲಿ ಬಿರುಕು: ಪಾದಗಳಲ್ಲಿ ಬಿರುಕು ಉಂಟಾದರೆ ರಕ್ತ ಬರಬಹುದು ಮತ್ತು ಕಾಲು ತುಂಬಾ ನೋವಾಗುತ್ತದೆ. ಈ ರೀತಿಯ ಬಿರುಕು ಉಂಟಾದರೆ ಕಾಲುಗಳನ್ನು ಚೆನ್ನಾಗಿ ತೊಳೆದು ಎಣ್ಣೆ ಹಚ್ಚಿ ಮಸಾಜ್ ಮಾಡಬೇಕು. ತುಂಬಾ ದೂಳಿನಲ್ಲಿ ಓಡಾಡಬಾರದು ಮತ್ತು ಕಾಲಿಗೆ ಸಾಕ್ಸ್ ಹಾಕಿದರೆ ಒಳ್ಳೆಯದು. ಈ ರೀತಿ ಮಾಡಿದರೆ ಪಾದಗಳಲ್ಲಿ ಬಿರುಕು ಕಂಡು ಬರುವುದಿಲ್ಲ.
2. ಬೆರಳುಗಳ ನಡುವಿನ ಚರ್ಮ ಕೊಳೆಯುವುದು: ತುಂಬಾ ಹೊತ್ತು ನೀರಿನಲ್ಲಿ ನಿಂತು ಕೆಲಸ ಮಾಡುವವರಿಗೆ ಮತ್ತು ತುಂಬಾ ಬೆವರುವವರಲ್ಲಿ ಎರಡು ಬೆರಳುಗಳ ಮಧ್ಯೆ ಚರ್ಮವು ಕೊಳೆಯಲಾರಂಭಿಸುತ್ತದೆ. ಈ ರೀತಿ ಸಮಸ್ಯೆ ಇದ್ದರೆ ಹೊರಗಡೆ ಹೋಗಿ ಬಂದ ತಕ್ಷಣ ಕಾಲುಗಳನ್ನು ತೊಳೆದು ಬೆರಳುಗಳ ಮಧ್ಯೆ ಕೂಡ ಟವಲ್ ನಿಂದ ಉಜ್ಜಿ ಮುಲಾಮ್ ಅಥವಾ ಎಣ್ಣೆ ಹಚ್ಚಿ ಬೆರಳುಗಳು ಒಂದಕ್ಕೊಂದು ಅಂಟದಿರಲು ಮಧ್ಯೆದಲ್ಲಿ ಹತ್ತಿಯನ್ನು ಉಂಡೆ ಮಾಡಿ ಇಡಬೇಕು. ಈ ರೀತಿ ಮಾಡಿದರೆ ಈ ರೀತಿಯ ಸಮಸ್ಯೆ ಬೇಗನೆ ಗುಣಮುಖವಾಗುತ್ತದೆ.
3. ಒಣ ತ್ವಚೆ: ತ್ವಚೆಯಲ್ಲಿ ಸ್ವಲ್ಪವೂ ಎಣ್ಣೆ ಪಸೆ ಇಲ್ಲದಿದ್ದರೆ ತ್ವಚೆ ಮತ್ತು ಪಾದ ತುಂಬಾ ಒಣಗುವುದು. ಪಾದ ಒಣಗಿದರೆ ಬಿರುಕಿನ ಸಮಸ್ಯೆಗಳು ಕಂಡು ಬರುತ್ತದೆ. ಆದ್ದರಿಂದ ಪಾದಗಳಿಗೆ ಎಣ್ಣೆಯಿಂದ ಮಸಾಜ್ ಮಾಡಿದರೆ ಒಳ್ಳೆಯದು. ಸ್ನಾನ ಮಾಡುವ ನೀರಿಗೆ ಸ್ವಲ್ಪ ಎಣ್ಣೆ ಹಾಕಿ ಅದರಲ್ಲಿ ಸ್ನಾನ ಮಾಡಿದರೆ ತ್ವಚೆ ಎಣ್ಣೆಯಂಶವನ್ನು ಹೀರಿಕೊಂಡು ತ್ವಚೆ ಒಣಗುವ ಸಮಸ್ಯೆ ಕಡಿಮೆಯಾಗುವುದು.
4. ಚಪ್ಪಲಿ ಕಚ್ಚಿ ಗಾಯ: ಹೊಸ ಚಪ್ಪಲಿ ತಂದಾಗ ಕೆಲವೊಂದು ಚಪ್ಪಲಿಗಳು ಅಥವಾ ಶೂ ಕಾಲಿಗೆ ಕಚ್ಚುತ್ತದೆ. ಅದರಲ್ಲೂ ತುದಿ ಸ್ವಲ್ಪ ಚೂಪಾಗಿರುವ ಶೂ ತಂದರೆ ಮೊದಲ ಒಂದು ವಾರಗಳ ಕಾಲ 3 ಗಂಟೆಯವರೆಗೆ ಮಾತ್ರ ಈ ಶೂ ಬಳಸಿ. ದಿನಾ ಪೂರ್ತಿ ಬಳಸಿದರೆ ಶೂ ಕಚ್ಚಿ ಗಾಯವಾಗುವುದು. ಒಂದು ವಾರದಲ್ಲಿ ಶೂ ಕಾಲಿಗೆ ಸರಿಯಾಗಿರುತ್ತದೆ. ಆಗ ದಿನಪೂರ್ತಿ ಬಳಸಿದರೂ ಎನೂ ಆಗುವುದಿಲ್ಲ.
5. ಬೆರಳುಗಳಲ್ಲಿ ಕೊಳೆ ತುಂಬುವುದು: ದಿನಾ ಶೂ ಹಾಕುವವರು ಉಗುರಗಳ ಬಗ್ಗೆ ಸ್ವಲ್ಪ ಗಮನ ಕೊಡಬೇಕು. ಇಲ್ಲದಿದ್ದರೆ ಉಗುರುಗಳಲ್ಲಿ ಕೊಳೆ ತುಂಬಿಕೊಂಡು ಆ ಉಗುರು ಹಾಳಾಗುತ್ತದೆ. ಆದ್ದರಿಂದ ಉಗುರುಗಳಲ್ಲಿ ಕೊಳೆ ನಿಲ್ಲದಿರಲು ದಿನ ಬ್ರೆಷ್ ಹಾಕಿ ಉಜ್ಜಬೇಕು. ಉಗುರನ್ನು ನೀಟಾಗಿ ಕತ್ತರಿಸಬೇಕು.
ಸಲಹೆ: ಶೂಗಳಿಗೆ ಸ್ವಲ್ಪ ಅಡುಗೆ ಸೋಡಾ ಚಿಮುಕಿಸಿ ಒಣಗಿಸಿ ನಂತರ ಹಾಕಿದರೆ ಶೂ ಕೆಟ್ಟ ವಾಸನೆ ಬೀರುವುದಿಲ್ಲ.



Click it and Unblock the Notifications