Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕರ್ಪೂರದಲ್ಲಿದೆ ತ್ವಚೆ ಹಾಗೂ ಕೂದಲಿನ ಸಮಸ್ಯೆಗೆ ಪರಿಹಾರ
ಕರ್ಪೂರದಲ್ಲಿ ಅನೇಕ ಔಷಧೀಯ ಗುಣಗಳಿವೆ. ಆದ್ದರಿಂದಲೇ ಇದನ್ನು ತ್ವಚೆ ಹಾಗೂ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಆರ್ಯುವೇದದಲ್ಲಿ ಅನೇಕ ಬ್ಯೂಟಿ ಟ್ರೀಟ್ ಮೆಂಟ್ ಗಳಿವೆ ಕರ್ಪೂರವನ್ನು ಬಳಸುತ್ತಾರೆ.
ಕರ್ಪೂರ ಮೊಡವೆ ಹೋಗಲಾಡಿಸುವಲ್ಲಂತೂ ತುಂಬಾ ಪರಿಣಾಮಕಾರಿ. ಕರ್ಪೂರ ಬಳಸಿ ತ್ವಚೆ, ಕೂದಲಿನ ಆರೈಕೆಯನ್ನು ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ:

ತ್ವಚೆಯಲ್ಲಿ ತುರಿಕೆ ಕಂಡು ಬಂದರೆ
ತ್ವಚೆಯಲ್ಲಿ ವಿಪರೀತ ತುರಿಕೆ ಕಂಡು ಬಂದರೆ ಅದನ್ನು ಕರ್ಪೂರ ಬಳಸಿ ಕಡಿಮೆಮಾಡಬಹುದು. ಕರ್ಪೂರದ ಪೇಸ್ಟ್ ಅನ್ನು ತುರಿಕೆ ಇರುವ ಕಡೆ ಹಚ್ಚಿದರೆ ತಕ್ಷಣ ಕಡಿಮೆಯಾಗುವುದು.

ಗಾಯವನ್ನು ಒಣಗಿಸಲು
ಕೆಲವರಿಗೆ ಗಾಯವಾದರೆ ಬೇಗನೆ ಒಣಗುವುದಿಲ್ಲ, ಅಂತವರು ಕರ್ಪೂರವನ್ನು ನೀರಿನಲ್ಲಿ ಕರಗಿಸಿ ಗಾಯವನ್ನು ಸ್ವಚ್ಛ ಮಾಡುತ್ತಾ ಬಂದರೆ ಗಾಯ ಗುಣವಾಗುವುದು. ಆಗಷ್ಟೇ ಆದ ಗಾಯಕ್ಕೆ ಕರ್ಪೂರ ಹಾಕಬೇಡಿ. ತುಂಬಾ ದಿನವಾದರೂ ಒಣಗಿದ್ದ ಗಾಯವನ್ನು ಒಣಗಿಸಲು ಮಾತ್ರ ಕರ್ಪೂರ ಬಳಸಿ.

ಮೊಡವೆ
ಕರ್ಪೂರದ ಎಣ್ಣೆಯನ್ನು ಮೊಡವೆ ಇರುವ ಕಡೆ ಹಚ್ಚಿದರೆ ಮೊಡವೆ ಒಣಗುವುದು, ಹಾಗೂ ಮೊಡವೆ ಏಳುವುದನ್ನೂ ತಡೆಗಟ್ಟುತ್ತದೆ.

ತ್ವಚೆಯಲ್ಲಿ ಗುಳ್ಳೆಗಳು ಕಂಡುಬಂದರೆ
ಕೆಲವೊಮ್ಮೆ ತ್ವಚೆಯಲ್ಲಿ ತುರಿಕೆಯ ಜೊತೆ ಚಿಕ್ಕ-ಚಿಕ್ಕ ಗುಳ್ಳೆಗಳು ಕಂಡುಬರುತ್ತದೆ, ಆ ಸಮಸ್ಯೆಯನ್ನು ಹೋಗಲಾಡಿಸಲು ಕರ್ಪೂರವನ್ನು ಮೈಗೆ ಲೇಪಿಸಿದರೆ ಸಾಕು.

ಪಾದಗಳು ಬಿರುಕು ಬಿಟ್ಟಿದ್ದರೆ
ಬಿರುಕು ಪಾದಗಳು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಆ ಸಮಸ್ಯೆ ಕಡಿಮೆಯಾಗಿರುವುದಿಲ್ಲ. ಅಂತವರು ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ.
ಪ್ರತೀದಿನ ಕರ್ಪೂರ ಹಾಕಿ ಉಗುರು ಬೆಚ್ಚಗಿನ ನೀರಿನಲ್ಲಿ 5 ನಿಮಿಷ ಪಾದಗಳನ್ನು ನೆನೆಸಿ, ನಂತರ ಸ್ಕ್ರಬ್ ಮಾಡಿ. ಈ ರೀತಿ ಮಾಡುವುದರಿಂದ ಪಾದಗಳಲ್ಲಿ ಬಿರುಕು ಕಡಿಮೆಯಾಗುವುದು.

ಕೂದಲಿನ ಆರೋಗ್ಯಕ್ಕೆ
ಕರ್ಪೂರ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕರ್ಪೂರದ ಎಣ್ಣೆ ಕೂದಲನ್ನು ಮಂದವಾಗಿಸುತ್ತದೆ, ಕೂದಲಿನ ಬುಡವನ್ನು ಬಲವಾಗಿಸುತ್ತದೆ. ಕರ್ಪೂರವನ್ನು ಮೊಸರು ಜೊತೆ ಮಿಕ್ಸ್ ಮಾಡಿ ಹಚ್ಚಿದರೆ ಕೂದಲಿನ ಹೊಳಪು ಹೆಚ್ಚುವುದು.

ಕೂದಲು ಉದುರುವುದನ್ನು ಕಮ್ಮಿ ಮಾಡುತ್ತದೆ
ಕೂದಲು ಉದುರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ತಲೆಯನ್ನು ಕರ್ಪೂರ ಮತ್ತು ಎಣ್ಣೆ ಮಿಕ್ಸ್ ಮಾಡಿ ಮಸಾಜ್ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುವುದು.



Click it and Unblock the Notifications