Latest Updates
-
'ವೆಡ್ ಇನ್ ಇಂಡಿಯಾ': ಕಡಿಮೆ ಬಜೆಟ್ನಲ್ಲಿ ಅದ್ಧೂರಿ ಮದುವೆಗೆ ಇಲ್ಲಿದೆ 3 ದಿನಗಳ ಮಾಸ್ಟರ್ ಪ್ಲಾನ್! -
ನಿಮ್ಮ ಮನೆಯ ಫ್ಯಾನ್ ಸುರಕ್ಷಿತವೇ? ದೊಡ್ಡ ಅವಘಡ ತಪ್ಪಿಸಲು ಈ 5 ನಿಮಿಷದ ಚೆಕ್ ಮರೆಯದಿರಿ -
ಎಚ್ಚರ! ಬೆಂಗಳೂರಿನಲ್ಲಿ ಶಿಶು ಆಹಾರದ ಮೇಲೆ FSSAI ದಾಳಿ: ನಿಮ್ಮ ಮಗುವಿನ ಆಹಾರ ಸುರಕ್ಷಿತವೇ? -
ಇಂದಿನ ಪೆಟ್ರೋಲ್, ಡೀಸೆಲ್ ದರ ಸ್ಥಿರ: ನಿಮ್ಮ ನಗರದ ಬೆಲೆ ತಿಳಿಯಿರಿ ಮತ್ತು ಮಳೆಗಾಲದ ಮೈಲೇಜ್ ಟಿಪ್ಸ್ ಇಲ್ಲಿದೆ -
ಡೆಂಗ್ಯೂ ಭೀತಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಕ್ರಮಗಳನ್ನು ಮರೆಯದಿರಿ! -
ರಾಜಸ್ಥಾನ UCC: ಲಿವ್-ಇನ್ ಮತ್ತು ಮದುವೆ ಜೋಡಿಗಳೇ ಎಚ್ಚರ, ಈ ದಾಖಲೆಗಳು ಸಿದ್ಧವಿರಲಿ! -
ಮಳೆಗಾಲದ ಎಚ್ಚರಿಕೆ: ಅಪಾರ್ಟ್ಮೆಂಟ್ ಸೋರಿಕೆ ತಡೆಯಲು ಮತ್ತು ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಸರಳ ಉಪಾಯಗಳು -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ₹350 ಕ್ಕಿಂತ ಕಡಿಮೆ ವೆಚ್ಚದಲ್ಲಿ 7 ಹೈ-ಪ್ರೋಟೀನ್ ಬ್ರೇಕ್ಫಾಸ್ಟ್ ಐಡಿಯಾಗಳು! -
ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್: PoP ಮೂರ್ತಿ ನಿಷೇಧ, ಅನುಮತಿ ಪಡೆಯುವುದು ಹೇಗೆ? -
ದೆಹಲಿ ಆರೆಂಜ್ ಅಲರ್ಟ್: ಮಳೆಯಲ್ಲಿ ಮನೆಯಲ್ಲೇ ಫಿಟ್ ಆಗಿರಲು ಈ 20 ನಿಮಿಷದ ವರ್ಕೌಟ್ ಟ್ರೈ ಮಾಡಿ
ಹೊಸ ಚಪ್ಪಲಿ, ಶೂ ಕಡಿತದಿಂದ ಗುಳ್ಳೆಗಳಾಗಿದ್ಯಾ? ಇಲ್ಲಿದೆ ಮನೆಮದ್ದುಗಳು
ಸಾಮಾನ್ಯವಾಗಿ ಹೊಸ ಶೂ ಅಥವಾ ಹೊಸ ಚಪ್ಪಲಿ ಖರೀದಿಸಿ ಹಾಕಿಕೊಂಡಾಗ, ಅದರಿಂದ ಕಡಿತ ಉಟಾಗುವುದು. ಇದು ನಾವು ಖರೀದಿಸಿರುವ ಚಪ್ಪಲಿ ಅಥವಾ ಶೂಗಳ ಸೈಜ್ ಚಿಕ್ಕದಾಗಿರುವುದರಿಂದ ಕಡಿತ ಉಂಟಾಗಿ ಗುಳ್ಳೆಗಳಾಗುತ್ತವೆ. ಇದರಿಂದ ಕೆಲದಿನಗಳ ಕಾಲ ಚಪ್ಪಲಿ ಧರಿಸಲು ಆಗದಷ್ಟು ನೋವು ಉಂಟಾಗುವುದು. ಇಂತಹ ಗುಳ್ಳೆಗಳನ್ನು ಕಡಿಮೆ ಮಾಡಲು ನಂಜುನಿರೋಧಕ ಕ್ರೀಮ್ ಗಳನ್ನು ಬಳಸಬೇಕು ಒಂದು ವೇಳೆ ಕ್ರೀಮ್ ಗಳು ಲಭ್ಯವಿಲ್ಲದಿದ್ದರೆ, ಈ ಕೆಳಗೆ ನೀಡಿರುವ ಮನೆಮದ್ದುಗಳನ್ನು ಸಹ ಪ್ರಯತ್ನಿಸಬಹುದು.
ಚಪ್ಪಲಿ ಕಡಿತದಿಂದ ಉಂಟಾಗಿರುವ ನೋವುಗಳನ್ನು ಕಡಿಮೆ ಮಾಡಲು ಬಳಸಬಹುದಾದ ಮನೆಮದ್ದುಗಳನ್ನು ಈ ಕೆಳಗೆ ನೀಡಲಾಗಿದೆ:

1) ಅಲೋವೆರಾ ಜೆಲ್:
ಈ ಲೋಳೆರಸ ಸಾಕಷ್ಟು ಸೌಂದರ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ತ್ವಚೆ, ಕೂದಲಿನ ಸಮಸ್ಯೆಯಿಂದ ಹಿಡಿದು, ವಿವಿಧ ಪ್ರಯೋಜನಗಳಿಗೆ ಬಳಕೆ ಮಾಡುವ ಅಲೋವೆರಾವನ್ನು ಶೂ ಅಥವಾ ಚಪ್ಪಲಿ ಕಡಿತದಿಂದ ಉಂಟಾಗುವ ಗಾಯವನ್ನು ಕಡಿಮೆ ಮಾಡಲು ಬಳಸಬಹುದು. ಇದರಲ್ಲಿ ಗಾಯವನ್ನು ಗುಣಪಡಿಸುವ ಅನೇಕ ಗುಣಗಳಿದ್ದು, ತಾಜಾ ಅಲೋವೆರಾ ತಿರುಳನ್ನು ಹಚ್ಚುವುದರಿಂದ ತ್ವರಿತ ಪರಿಹಾರ ಸಿಗುತ್ತದೆ.

2) ತೆಂಗಿನ ಎಣ್ಣೆ :
ತೆಂಗಿನ ಎಣ್ಣೆ ಪಾದದಲ್ಲಿ ಆದ ಹುಣ್ಣುಗಳಿಂದ ಪರಿಹಾರ ಪಡೆಯಲು ಸುಲಭವಾದ ಮತ್ತು ಅತ್ಯಂತ ಅನುಕೂಲಕರ ಮಾರ್ಗವಾಗಿದೆ. ತೆಂಗಿನ ಎಣ್ಣೆ ನಿಮ್ಮ ಪಾದಗಳಲ್ಲಿರುವ ಗುಳ್ಳೆಗಳ ನೋವಿನಿಂದ ತಕ್ಷಣ ಪರಿಹಾರ ನೀಡುತ್ತದೆ. ಇದಕ್ಕಾಗಿ ಕೇವಲ ಎಣ್ಣೆಯನ್ನು ಬಿಸಿ ಮಾಡಿ ಮತ್ತು ತಣ್ಣಗಾಗಲು ಬಿಡಿ. ನಂತರ ಹತ್ತಿಯ ಸಹಾಯದಿಂದ ಹಚ್ಚಿ. ತೆಂಗಿನ ಎಣ್ಣೆಯಲ್ಲಿ ಲಾರಿಕ್ ಆಮ್ಲ ಎಂಬ ಒಂದು ರೀತಿಯ ಕೊಬ್ಬಿನ ಆಮ್ಲವಿದ್ದು, ಇದು ಚರ್ಮವನ್ನು ಹೈಡ್ರೇಟ್ ಮಾಡಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3) ಜೇನುತುಪ್ಪ:
ನೈಸರ್ಗಿಕವಾದ ಸಕ್ಕರೆಯ ಅಂಶವನ್ನು ಹೊಂದಿರುವ ಜೇನುತುಪ್ಪವು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು, ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ಇದು ಹಿತವಾದ ಮತ್ತು ಉರಿಯೂತದ ಗುಣಗಳನ್ನು ಹೊಂದಿದ್ದು, ಜೇನುತುವನ್ನು ನೇರವಾಗಿ ಹಚ್ಚುವುದರಿಂದ ಅಥವಾ ಹತ್ತಿಯನ್ನು ಅದ್ದಿ ಹಚ್ಚುವುದರಿಂದ ಚಪ್ಪಲಿ ಕಡಿತದ ಗುಳ್ಲೆಗಳು ಕಡಿಮೆಯಾಗುವುದು. ಜೊತೆಗೆ ಒಡೆದ ತುಟಿಯನ್ನು ಸರಿಪಡಿಸಲು ಸಹ ಬಳಕೆ ಮಾಡಬಹುದು.

4) ಅರಿಶಿನ ಮತ್ತು ಬೇವು:
ಈ ಎರಡೂ ಪದಾರ್ಥಗಳು ನಂಜುನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿವೆ. ನೀವು ಮಾಡಬೇಕಾಗಿರುವುದು ಒಂದು ಹಿಡಿ ಬೇವಿನ ಎಲೆಗಳನ್ನು ಅರಿಶಿನ ಪುಡಿ ಮತ್ತು ನೀರಿನೊಂದಿಗೆ ಬೆರೆಸಿ. ಈ ಮಿಶ್ರಣದ ದಪ್ಪ ಪದರವನ್ನು ಪೀಡಿತ ಪ್ರದೇಶದ ಮೇಲೆ ಹಚ್ಚಿ, ಅರ್ಧ ಗಂಟೆ ಬಿಟ್ಟು ನಂತರ ಉಗುರುಬೆಚ್ಚಗಿನ ನೀರಿನಿಂದ ತೊಳೆಯಿರಿ.

5). ಟೂತ್ ಪೇಸ್ಟ್:
ಶೂ ಅಥವಾ ಚಪ್ಪಲಿ ಕಡಿತದಿಂದಾಗಿ ಆಗಿರುವಂತಹ ಗಾಯವನ್ನು ಗುಣಪಡಿಸಲು ಬಿಳಿ ಟೂಥ್ ಪೇಸ್ಟ್ ತುಂಬಾ ಸಹಾಯವಾಗುವುದು. ನೀವು ಹಲ್ಲುಜ್ಜುವಂತಹ ಬಿಳಿ ಟೂಥ್ ಪೇಸ್ಟ್ ನಲ್ಲಿ ಬೊಕ್ಕೆ ಹಾಗೂ ಗಾಯವನ್ನು ಗುಣಪಡಿಸುವ ಶಕ್ತಿ ಇದೆ. ಕಡಿತದಿಂದ ಉಂಟಾಗಿರುವ ಜಾಗಕ್ಕೆ ಪೇಸ್ಟ್ ಹಚ್ಚಿ, ಒಣಗಿದ ಬಳಿಕ ಅದನ್ನು ತೊಳೆಯಿರಿ. ಇದರಿಂದ ಗಾಯ, ನೋವು ಕಡಿಮೆಯಾಗುವುದು.



Click it and Unblock the Notifications