Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಕೂದಲಿಗೆ ಬೇಕಾದ ಐದು ಆಯುರ್ವೇದ ಔಷಧಿ ಯಾವುದು?

ಸುಲಭವಾಗಿ ಲಭ್ಯವಿರುವ, ಕೂದಲಿನ ಆರೋಗ್ಯವನ್ನು ದುಪ್ಪಟ್ಟುಗೊಳಿಸುವ ಐದು ಗಿಡಮೂಲಿಕೆಗಳಾವುವೆಂದು ತಿಳಿಯೋಣ.
* ರೀತಾ ಅಥವಾ ಅಂಟವಾಳದ ಕಾಯಿ: ಪುರಾತನ ಕಾಲದಲ್ಲಿ ಹಿಮಾಲಯದಲ್ಲಿ ಬೆಳೆಯುತ್ತಿತ್ತು ಎನ್ನಲಾದ ಈ ಗಿಡಮೂಲಿಕೆಯಿಂದ ಕೂದಲಿಗೆ ಅನೇಕ ಉಪಯೋಗಕರ ಅಂಶವಿದೆ. ಅಂಟವಾಳದಲ್ಲಿ ಕೂದಲನ್ನು ಶುದ್ಧಗೊಳಿಸಿ ರೇಷ್ಮೆಯಂತೆ ಹೊಳಪು ನೀಡುವ ಶಕ್ತಿಯಿದೆ. ಹೆಚ್ಚು ಮಾಲಿನ್ಯ ತುಂಬಿರುವ ಈ ಕಾಲದಲ್ಲಿ ಅಂಟವಾಳದ ಕಾಯಿಯನ್ನು ಉಪಯೋಗಿಸುವುದರಿಂದ ನಿಮ್ಮ ಕೂದಲು ಶುದ್ಧವಾಗಿರುತ್ತೆ.
* ಭೃಂಗರಾಜ: ಪ್ರಾಚೀನ ಭಾರತದಲ್ಲಿ ಹೆಚ್ಚು ಉಪಯೋಗಿಸಲಾಗುತ್ತಿದ್ದ ಭೃಂಗರಾಜ ಈ ಕಾಲಕ್ಕೂ ಪ್ರಸ್ತುತ. ಕೂದಲ ಪೋಷಣೆಗೆ ಆಯುರ್ವೇದ ಪದ್ಧತಿಯಲ್ಲಿ ಹೆಚ್ಚು ಬಳಕೆಯಲ್ಲಿದ್ದ ಈ ಗಿಡಮೂಲಿಕೆಯನ್ನು ಕಪ್ಪು ಕೂದಲು ಪಡೆಯಲು, ಕೂದಲುದುರುವಿಕೆ ಮತ್ತು ಬಾಲನೆರೆ ತಡೆಯಲು ಉಪಯೋಗಿಸಲಾಗುತ್ತದೆ. ಕೊಬ್ಬರಿ ಅಥವಾ ಬಾದಾಮಿ ಎಣ್ಣೆಯೊಂದಿಗೆ ಇದನ್ನು ಬಿಸಿ ಮಾಡಿ ತಲೆಗೆ ಮಸಾಜ್ ಮಾಡಿಕೊಳ್ಳುವುದರಿಂದ ಹೆಚ್ಚು ಲಾಭವನ್ನು ಹೊಂದಬಹುದು.
* ಮೆಂತ್ಯೆ: ಎರಡು ರೀತಿಯಲ್ಲಿ ಮೆಂತ್ಯೆ ನಿಮ್ಮ ಕೂದಲಿನ ಸಮಸ್ಯೆ ತಡೆಯಬಲ್ಲದು. ಇದನ್ನು ಹಚ್ಚಿಕೊಳ್ಳುವುದರಿಂದ ಮತ್ತು ತಿನ್ನುವುದರಿಂದ, ಎರಡರಿಂದಲೂ ಇದರ ಉಪಯೋಗ ಹೊಂದಬಹುದು. ಮೆಂತ್ಯೆ ಕಾಳನ್ನು ಪೇಸ್ಟ್ ಮಾಡಿ ತಲೆಗೆ ಪ್ಯಾಕ್ ಹಾಕಿಕೊಳ್ಳಬಹುದು ಅಥವಾ ಮೆಂತ್ಯೆ ಸೊಪ್ಪನ್ನು ತಿಂದರೂ ಕೂದಲಿನ ಬುಡದಲ್ಲಿ ರಕ್ತಸಂಚಲ ಹೆಚ್ಚಾಗಿ ಕೂದಲು ಬೆಳವಣಿಗೆ ಹೊಂದುತ್ತದೆ.
* ಮೆಹಂದಿ: ಕೂದಲಿಗೆ ನೈಸರ್ಗಿಕ ಬಣ್ಣ ನೀಡುವ ಮೆಹಂದಿ ಕೂದಲುದುರುವಿಕೆ ವಿರುದ್ಧ ಹೋರಾಡುವಲ್ಲಿ ಹೆಚ್ಚು ಸಹಕಾರಿ. ಇದನ್ನು ಮೊಸರು ಮತ್ತು ನಿಂಬೆರಸದೊಂದಿಗೆ ಬೆರೆಸಿ ಹಚ್ಚಿಕೊಂಡರೆ ತಲೆಹೊಟ್ಟಿನ ಸಮಸ್ಯೆಯೂ ದೂರವಾಗುತ್ತದೆ. ಮೆಹಂದಿ ಕೂದಲಿನ ಬುಡವನ್ನೂ ಗಟ್ಟಿಗೊಳಿಸುತ್ತದೆ.
* ಲೋಳೆಸರ: ಕೇವಲ ಕೂದಲಿಗಷ್ಟೇ ಅಲ್ಲ, ಲೋಳೆಸರ ಒಟ್ಟಾರೆ ಸೌಂದರ್ಯಕ್ಕೂ ಉಪಯೋಗ. ಚರ್ಮಕ್ಕಾಗಿರಲಿ, ಕೂದಲಿಗಾಗಿರಲಿ, ಲೋಳೆಸರ ಆರೋಗ್ಯಕರ. ಕೂದಲು ತುಂಬಾ ತೆಳ್ಳಗಾಗುತ್ತಿದ್ದರೆ ಲೋಳೆಸರ ಉತ್ತಮ ಪರಿಹಾರ ನೀಡಬಲ್ಲದು.



Click it and Unblock the Notifications