Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಪರಿಹಾರ
ಕೂದಲು ಉದುರುವುದು ಅನೇಕರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಅನಾರೋಗ್ಯ, ವಿಟಮಿನ್ ಗಳ ಕೊರತೆ, ಕೂದಲಿನ ಆರೈಕೆ ಸರಿಯಾಗಿ ಮಾಡದಿರುವುದು ಅಥವಾ ph ಸಮತೋಲದಲ್ಲಿ ಇಲ್ಲದಿರುವ ಶ್ಯಾಂಪೂಗಳನ್ನು ಬಳಕೆ ಇವುಗಳು ಕೂದಲು ಉದುರಲು ಪ್ರಮುಖ ಕಾರಣಗಳಾಗಿವೆ. ಈ ರೀತಿ ಕೂದಲು ಉದುರುವುದನ್ನು ತಡೆಗಟ್ಟಲು ಆದಷ್ಟು ರಾಸಯನಿಕ ಇರುವ ಶ್ಯಾಂಪೂಗಳನ್ನು ಬಳಸಲು ಹೋಗಬಾರದು. ನೈಸರ್ಗಿಕ ಸಾಧನಗಳಾದ ಸೀಗೆಕಾಯಿ, ಅಂಟವಾಳ (ಅಂಟ್ವಾಳ) ಬಳಸಿ ತಲೆಯನ್ನು ಶುಚಿಗೊಳಿಸುವುದು ಒಳ್ಳೆಯದು. ಸ್ವಾಭಾವಿಕವಾಗಿ ದೊರೆಯುವ ಸಾಧನಗಳಿಂದ ನೀವೆ ಶ್ಯಾಂಪೂ ಕೂಡ ತಯಾರಿಸಿಬಹುದಾಗಿದ್ದು, ಈ ರೀತಿ ತಯಾರಿಸಿದ ಶ್ಯಾಂಪೂ ಕೂದಲಿಗೆ ಬಳಸಿದರೆ ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುವುದು. ನೈಸರ್ಗಿಕ ಶ್ಯಾಂಪೂ ಬಳಸುವ ವಿಧಾನ ನೋಡಿ ಇಲ್ಲಿದೆ.

1. ಅಂಟವಾಳ ಶ್ಯಾಂಪೂ: ಅಂಟವಾಳ ಬಳಸಿ ಕೂದಲಿನ ಪೋಷಣೆ ಮಾಡವುದಷ್ಟೇ ಅಲ್ಲ ತಲೆಯಲ್ಲಿ ಹೇನಿನ ಸಮಸ್ಯೆ ಇದ್ದರೆ ಇದನ್ನು ಬಳಸಿದರೆ ಆ ಸಮಸ್ಯೆಯನ್ನು ಹೋಗಲಾಡಿಸಬಹುದು. 4-5 ಅಂಟವಾಳ ಕಾಯಿಗಳನ್ನು ತೆಗೆದುಕೊಂಡು ಸ್ವಲ್ಪ ಪಾತ್ರೆಯಲ್ಲಿ ನೀರು ಹಾಕಿ ಅದರಲ್ಲಿ ಹಾಕಿ ಒಂದು ರಾತ್ರಿ ಬಿಡಬೇಕು. ನಂತರ ಸ್ನಾನ ಮಾಡುವ 20 ನಿಮಿಷ ಮುನ್ನ ಅಂಟವಾಳ ಚೆನ್ನಾಗಿ ಕೈಯಲ್ಲಿ ಹಿಸುಕಿ, ನಂತರ ನೀರನ್ನು ತಲೆಗೆ ಹಚ್ಚಿ 20 ನಿಮಿಷ ಬಿಡಬೇಕು. ನಂತರ ಸ್ನಾನ ಮಾಡುವಾಗ ತಲೆಯನ್ನು ಚೆನ್ನಾಗಿ ಉಜ್ಜಿ ತೊಳೆದರೆ ಕೂದಲು ನುಣುಪಾಗುವುದು ಮತ್ತು ಕೂದಲು ಉದುರುವುದು ಕಡಿಮೆಯಾಗುತ್ತದೆ.
2. ಅಡುಗೆ ಸೋಡಾ: ಅಡುಗೆ ಸೋಡಾ ಕೂದಲಿನ ಆರೈಕೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದನ್ನು ಬಳಸಿ ಕೂದಲಿನಲ್ಲಿರುವ ಕೊಳೆಯನ್ನು ತೆಗೆಯಬಹುದು. ಒಂದು ಚಮಚ ಅಡುಗೆ ಸೋಡಾವನ್ನು ಒಂದು ಕಪ್ ನೀರಿಗೆ ಹಾಕಿ ಮಿಶ್ರ ಮಾಡಿ ಚೆನ್ನಾಗಿ ಕೂದಲಿಗೆ ಮಸಾಜ್ ಮಾಡಬೇಕು. ನಂತರ ಅದರಿಂದ ಮೆಲ್ಲನೆ ಮಸಾಜ್ ಮಾಡಿ 10 ನಿಮಿಷದ ಬಳಿಕ ತಲೆ ತೊಳೆದರೆ ಕೊಳೆ ಹೋಗುವುದು, ಕೂದಲು ಆರೋಗ್ಯವನ್ನು ಪಡೆಯುತ್ತದೆ. ದಪ್ಪ ಅಥವಾ ಗುಂಗುರು ಕೂದಲು ಇರುವವರಿಗೆ ಸ್ವಲ್ಪ ಅಧಿಕ ಅಡುಗೆ ಸೋಡಾ ಬೇಕಾಗುವುದು. ಈ ರೀತಿ ಮಾಡಿದಾಗ ಕೂದಲು ತುಂಬಾ ಒಣಗಿದಂತೆ ಭಾಸವಾದರೆ ಅರ್ಥ ಬಕೆಟ್ ನೀರಿಗೆ ಒಂದು ಚಮಚ ವಿನಿಗರ್ ಹಾಕಿ ಕಂಡೀಷನರ್ ಆಗಿ ಬಳಸಿದರೆ ಕೂದಲು ಮೃದುವಾಗುವುದು.
3.ವಿನಿಗರ್ ಮತ್ತು ನೀರು: 2 ಚಮಚ ವಿನಿಗರ್ ಅನ್ನು ಹದ ಬಿಸಿ ನೀರಿನಲ್ಲಿ ಕಲೆಸಿ ಅದನ್ನು ತಲೆಗೆ ಮಸಾಜ್ ಮಡಿ 15-20 ನಿಮಿಷ ಬಿಡಬೇಕು. ಅದರಲ್ಲೂ ಆಪಲ್ ವಿನಿಗರ್ ಸೈಡರ್ ಬಳಸಿದರೆ ಒಳ್ಳೆಯದು. ಈ ರೀತಿ ಮಾಡಿದರೆ ಕೂದಲಿನ ಆರೈಕೆ ಒಳ್ಳೆಯದು.
4. ಸೀಗೆಕಾಯಿ: ತಲೆಗೆ ಸೀಗೆಕಾಯಿ ಪುಡಿ ಹಚ್ಚಿ ತೊಳೆದರೆ ಕೂದಲು ಉದುರುವುದು ನಿಂತು ಸೊಂಪಾಗಿ ಬೆಳೆಯುವುದು. ಸೀಗೆಕಾಯಿ ಹಚ್ಚಿದಾಗ ಕೆಲವರಿಗೆ ಕಣ್ಣಿನಲ್ಲಿ ತುರಿಕೆ ಕಂಡು ಬರುತ್ತದೆ. ಆದ್ದರಿಂದ ಕಣ್ಣಿಗೆ ತಾಗಿಸಿದಂತೆ ಹಚ್ಚಿ.
ಸಲಹೆ: ಸ್ನಾನಕ್ಕೆ ಅರ್ಧ ಗಂಟೆ ಮುಂಚೆ ಕೂದಲಿಗೆ ಚೆನ್ನಾಗಿ ಎಣ್ಣೆ ಹಚ್ಚಿ ಮಸಾಜ್ ಮಾಡಿ.



Click it and Unblock the Notifications
