Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಅಕಾಲಿಕ ನೆರಿಗೆ ತಡೆಗಟ್ಟಲು 6 ಸೂಪರ್ ಟಿಪ್ಸ್
ಅಕಾಲಿಕ ನೆರೆಗೂದಲಿನ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ನೂರಕ್ಕೆ 80ರಷ್ಟು ಜನರಲ್ಲಿ ಕಂಡು ಬರುತ್ತಿದೆ. ಕೆಲವರಿಗಂತೂ ಬಾಲ್ಯದಲ್ಲಿಯೇ ಕೂದಲು ಬೆಳ್ಳಗಾಗುವುದು. ಕೆಮಿಕಲ್ ಇರುವ ಶ್ಯಾಂಪೂಗಳ ಬಳಕೆ, ಪೋಷಕಾಂಶದ ಕೊರತೆ, ಕೂದಲಿನ ಆರೈಕೆ ಸರಿಯಾಗಿ ಮಾಡದಿರುವುದು ಈ ಎಲ್ಲಾ ಕಾರಣಗಳಿಂದ ಕೂದಲು ಬೆಳ್ಳಗಾಗುವುದು.
ಚಿಕ್ಕ ಪ್ರಾಯದಲ್ಲಿ ಕೂದಲು ಬೆಳ್ಳಗಾದರೆ ಮುಜುಗರ ಉಂಟಾಗುವುದು. ಹಾಗಂತ ಅದನ್ನು ಮರೆ ಮಾಚಲು ಕೂದಲಿಗೆ ಡೈ ಮಾಡುವುದು ಅಥವಾ ಬಣ್ಣ ಹಚ್ಚುವುದು ಈ ರೀತಿಯ ತಪ್ಪುಗಳನ್ನು ಮಾತ್ರ ಮಾಡಬೇಡಿ. ಏಕೆಂದರೆ ಈ ರೀತಿಯೆಲ್ಲಾ ಮಾಡಿದರೆ ಕೂದಲು ಮತ್ತಷ್ಟು ಬೆಳ್ಳಗಾಗುವುದು.
ಅಕಾಲಿಕ ನೆರಿಗೆಯನ್ನು ತಡೆಗಟ್ಟಿ, ಕೂದಲನ್ನು ಕಪ್ಪಗಾಗಿಸಲು ಈ ಕೆಳಗಿನ ನೈಸರ್ಗಿಕವಾದ ವಿಧಾನಗಳನ್ನು ಅನುಸರಿಸುವುದು ಒಳ್ಳೆಯದು:

ಮದರಂಗಿಯಿಂದ ಹೇರ್ ಪ್ಯಾಕ್
ಟೀ ಡಿಕಾಷನ್ ಗೆ ಮೆಹಂದಿ ಪುಡಿಯನ್ನು ಹಾಕಿ ಕಲೆಸಿ, ಅದಕ್ಕೆ ಸ್ವಲ್ಪ ರಸ ಹಿಂಡಿ 2-3 ಗಂಟೆಗಳ ಕಾಲ ಇಡಿ( ಒಂದು ರಾತ್ರಿ ಇಟ್ಟರೆ ಮತ್ತಷ್ಟು ಒಳ್ಳೆಯದು). ನಂತರ ಈ ಮೆಹಂದಿಯನ್ನು ತಲೆಗೆ ಹಚ್ಚಿ ಒಂದು ಗಂಟೆಯ ಬಳಿಕ ತಲೆ ತೊಳೆಯಿರಿ. ತಲೆಯನ್ನು ಒಣಗಿಸಿದ ಬಳಿಕ ತಲೆಗೆ ಎಣ್ಣೆ ಹಚ್ಚಿ. ಈ ರೀತಿ ಮಾಡಿದರೆ ಕೂದಲು ಕಪ್ಪಾಗಿ ಕಾಣುವುದು.

ಬ್ಲ್ಯಾಕ್ ಟೀ
ಬ್ಲ್ಯಾಕ್ ಟೀ ಮಾಡಿ ಅದನ್ನು ಕೂದಲಿಗೆ ಹಚ್ಚಿ 1-2 ಗಂಟೆ ಇಟ್ಟು ನಂತರ ತೊಳೆಯಿರಿ. ಇದನ್ನು ಹಚ್ಚಿ ತಲೆ ತೊಳೆಯುವಾಗ ಶ್ಯಾಂಪೂ ಬಳಸಬೇಡಿ. ಈ ರೀತಿ ಮಾಡಿದರೆ ಕೂದಲು ಕಪ್ಪಗಾಗುವುದು, ಇತರ ಕೂದಲು ಬೆಳ್ಳಗಾಗುವುದನ್ನು ತಡೆಯಬಹುದು.

ಕರಿಬೇವಿನ ಎಲೆ
ಕರಿಬೇವನ್ನು ಸಾರಿಗೆ ಹಾಕಿ ತಿನ್ನಿ. ಕರಿಬೇವನ್ನು ಎಣ್ಣೆಗೆ ಹಾಕಿ ಕಾಯಿಸಿ, ಆ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುತ್ತಾ ಬಂದರೆ ಕೂದಲಿನ ಬುಡ ಸ್ಟ್ರಾಂಗ್ ಆಗುವುದು, ಅಕಾಲಿಕ ನೆರಿಗೆ ಕೂಡ ಉಂಟಾಗುವುದಿಲ್ಲ.

ಹೇರ್ ಆಯಿಲ್
ತೆಂಗಿನೆಣ್ಣೆಗೆ ಕರಿಬೇವಿನ ಎಲೆ ಮತ್ತು ನೆಲ್ಲಿಕಾಯಿ ಹಾಕಿ ಕುದಿಸಿ, ಅದರಿಂದ ಎಣ್ಣೆ ತಯಾರಿಸಿ, ಆ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುತ್ತಾ ಬನ್ನಿ. ಈ ರೀತಿ ಮಾಡುತ್ತಾ ಬಂದರೆ ಕೂದಲು ಬೆಳ್ಳಗಾಗುವುದನ್ನು ತಡೆಯಬಹುದು.

ದೊಡ್ಡ ಕೀರೆ ಸೊಪ್ಪು(ಅರಿವೆ ಸೊಪ್ಪು)
ಅರಿವೆ ಸೊಪ್ಪನ್ನು ಕೊಡಗಿನಲ್ಲಿ ಕೀರೆ ಸೊಪ್ಪು ಎಂದು ಕರೆಯುತ್ತಾರೆ. ಕೆಂಪು ಕೀರೆಯ ಸೊಪ್ಪು ಅಕಾಲಿಕ ನೆರಿಗೆ ತಡೆಗಟ್ಟುವಲ್ಲಿ ತುಂಬಾ ಸಹಕಾರಿ. ಇದರ ರಸವನ್ನು ಹಿಂಡಿ ತಲೆಗೆ ಹಚ್ಚಿದರೆ ಒಳ್ಳೆಯದು.

ಆಮ್ಲ ಹೇರ್ ಪ್ಯಾಕ್(ನೆಲ್ಲಿಕಾಯಿಯ ಪುಡಿ)
ನೆಲ್ಲಿ ಕಾಯಿಯ ಪುಡಿಯ ಹೇರ್ ಪ್ಯಾಕ್ ದೊರೆಯುತ್ತದೆ. ನೆಲ್ಲಿಕಾಯಿ ಪುಡಿಯನ್ನು ಮೊಸರಿಗೆ ಹಾಕಿ ಕಲೆಸಿ ಕೂದಲಿಗೆ ಹಚ್ಚಿದರೆ ಅಕಾಲಿಕ ನೆರಿಗೆ ಬರುವುದನ್ನು ತಡೆಗಟ್ಟಬಹುದು.



Click it and Unblock the Notifications