Latest Updates
-
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ!
ಕೂದಲಿನ ಸರ್ವರೋಗಕ್ಕೂ 'ಶುಂಠಿಯ' ಆರೈಕೆ!
ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ, ಮುಂದೆ ಓದಿ...
ಪ್ರತಿಯೊಬ್ಬ ಮಹಿಳೆಯು ಬಯಸುವುದು ಸುಂದರ ಹಾಗೂ ರೇಷ್ಮೆಯಂತಹ ಕೂದಲನ್ನು. ರೇಷ್ಮೆಯಂತಹ ಹೊಳೆಯುವ ಕೂದಲು ಬೇಕಿದ್ದರೆ ಅದಕ್ಕಾಗಿ ಕೂದಲಿನ ಆರೈಕೆಯನ್ನು ಚೆನ್ನಾಗಿ ಮಾಡಿಕೊಳ್ಳಬೇಕು. ಕೂದಲಿನ ಆರೈಕೆ ಮಾಡುವುದು ಎಂದರೆ ಮಾರುಕಟ್ಟೆಯಲ್ಲಿ ಸಿಗುವಂತಹ ಎಲ್ಲಾ ಶಾಂಪೂಗಳನ್ನು ಬಳಸುವುದು ಎಂದರ್ಥವಲ್ಲ. ಕೂದಲು ಸೊಂಪಾಗಿ ಬೆಳೆಯಬೇಕೇ? ಶುಂಠಿ ಹೇರ್ ಪ್ಯಾಕ್ ಪ್ರಯತ್ನಿಸಿ
ಶಾಂಪೂ ಬಳಸಿದರೆ ಅದರಲ್ಲಿರುವ ರಾಸಾಯನಿಕವು ಕೂದಲಿಗೆ ಹಾನಿಯನ್ನು ಉಂಟು ಮಾಡುತ್ತದೆ. ಕೆಲವು ಸಮಯ ಕೂದಲು ಸುಂದರವಾಗಿ ಕಂಡರೂ ಬಳಿಕ ಅದು ತನ್ನ ರೂಪ ಕಳೆದುಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ತಯಾರಿಸಿದ ಹೇರ್ ಪ್ಯಾಕ್ನಿಂದ ಕೂದಲಿನ ಆರೈಕೆ ಮಾಡುವುದು ತುಂಬಾ ಒಳ್ಳೆಯದು. ಕೂದಲಿನ ಆರೈಕೆಗಾಗಿ ಶುಂಠಿಯ ಬಳಕೆ ಬಗ್ಗೆ ನೀವು ಕೇಳಿರಬಹುದು. ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ...

ಕೂದಲು ಉದುರುವಿಕೆ
ಒಂದು ತುಂಡು ಶುಂಠಿಯನ್ನು ತೆಗೆದುಕೊಂಡು ಅದನ್ನು ನೇರವಾಗಿ ತಲೆಬುರುಡೆಗೆ ಉಜ್ಜಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುವುದು. ಶುಂಠಿಯ ರಸ ತಲೆಬುರುಡೆಯಲ್ಲಿ ಹಾಗೆ ಇರಲಿ. 10-15 ನಿಮಿಷ ಬಿಟ್ಟು ತಲೆ ಕೂದಲು ತೊಳೆಯಿರಿ, ನೈಸರ್ಗಿಕ ಕಂಡೀಷನರ್ ಬಳಸಲು ಮರೆಯಬೇಡಿ....

ತಲೆಹೊಟ್ಟು
ಶುಂಠಿಯ ರಸದಲ್ಲಿ ಆ್ಯಂಟಿಬ್ಯಾಕ್ಟೀರಿಯಾ ಗುಣಗಳು ಇವೆ. ಇದು ತಲೆಬುರುಡೆಯಲ್ಲಿ ಮೇದೋಗ್ರಂಥಿಗಳ ಸ್ರಾವವನ್ನು ತಡೆಯುತ್ತದೆ. ಇದರಿಂದ ತಲೆಬುರುಡೆಯು ಸೋಂಕಿನಿಂದ ಮುಕ್ತವಾಗುತ್ತದೆ.ಹಳ್ಳಿ ಮದ್ದು ಇರಬೇಕಾದರೆ ತಲೆಹೊಟ್ಟಿನ ಸಮಸ್ಯೆಯ ಚಿಂತೆ ಏತಕ್ಕೆ?

ಕಾಂತಿಯುತ ಕೂದಲಿಗೆ
ಶುಂಠಿಯ ರಸವನ್ನು ಆಲಿವ್ ತೈಲದೊಂದಿಗೆ ಸೇರಿಸಿಕೊಂಡು ಅದನ್ನು ಕೂದಲಿಗೆ ಹಚ್ಚಿಕೊಳ್ಳಿ. ನಂತರ ಒಂದು ಗಂಟೆಗಳ ಕಾಲ ಅಥವಾ ಸಾಧ್ಯವಾದರೆ ರಾತ್ರಿಯಿಡಿ ಹಾಗೆ ಬಿಡಿ. ಇದು ನಿಮಗೆ ಕಾಂತಿಯುತ ಕೂದಲು ನೀಡುವುದು.

ಒಣ ಕೂದಲಿಗೆ
ಒಣ ಕೂದಲು ಇರುವವರು ಆರ್ಗನ್ ತೈಲದೊಂದಿಗೆ ಶುಂಠಿ ರಸವನ್ನು ಸೇರಿಸಿಕೊಳ್ಳಿ. ಇದನ್ನು ಕೂದಲಿಗೆ ಹಚ್ಚಿಕೊಂಡು ಒಂದು ಗಂಟೆ ಕಾಲ ಹಾಗೆ ಬಿಡಿ. ಬಳಿಕ ಶಾಂಪೂ ಅಥವಾ ಕಂಡೀಷನರ್ ಹಾಕಿ ತೊಳೆಯಿರಿ. ಒಣ ಹಾಗೂ ಹಾನಿಗೊಳಗಾದ ಕೂದಲಿಗೆ ಆರ್ಗನ್ ತೈಲವು ಪೋಷಕಾಂಶವನ್ನು ಒದಗಿಸುವುದು.ಒಣ ಕೂದಲಿನ ಕಿರಿಕಿರಿಗೆ ನೈಸರ್ಗಿಕ ಹೇರ್ ಮಾಸ್ಕ್



Click it and Unblock the Notifications