Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಕೂದಲಿನ ಸರ್ವರೋಗಕ್ಕೂ 'ಶುಂಠಿಯ' ಆರೈಕೆ!
ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ, ಮುಂದೆ ಓದಿ...
ಪ್ರತಿಯೊಬ್ಬ ಮಹಿಳೆಯು ಬಯಸುವುದು ಸುಂದರ ಹಾಗೂ ರೇಷ್ಮೆಯಂತಹ ಕೂದಲನ್ನು. ರೇಷ್ಮೆಯಂತಹ ಹೊಳೆಯುವ ಕೂದಲು ಬೇಕಿದ್ದರೆ ಅದಕ್ಕಾಗಿ ಕೂದಲಿನ ಆರೈಕೆಯನ್ನು ಚೆನ್ನಾಗಿ ಮಾಡಿಕೊಳ್ಳಬೇಕು. ಕೂದಲಿನ ಆರೈಕೆ ಮಾಡುವುದು ಎಂದರೆ ಮಾರುಕಟ್ಟೆಯಲ್ಲಿ ಸಿಗುವಂತಹ ಎಲ್ಲಾ ಶಾಂಪೂಗಳನ್ನು ಬಳಸುವುದು ಎಂದರ್ಥವಲ್ಲ. ಕೂದಲು ಸೊಂಪಾಗಿ ಬೆಳೆಯಬೇಕೇ? ಶುಂಠಿ ಹೇರ್ ಪ್ಯಾಕ್ ಪ್ರಯತ್ನಿಸಿ
ಶಾಂಪೂ ಬಳಸಿದರೆ ಅದರಲ್ಲಿರುವ ರಾಸಾಯನಿಕವು ಕೂದಲಿಗೆ ಹಾನಿಯನ್ನು ಉಂಟು ಮಾಡುತ್ತದೆ. ಕೆಲವು ಸಮಯ ಕೂದಲು ಸುಂದರವಾಗಿ ಕಂಡರೂ ಬಳಿಕ ಅದು ತನ್ನ ರೂಪ ಕಳೆದುಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ತಯಾರಿಸಿದ ಹೇರ್ ಪ್ಯಾಕ್ನಿಂದ ಕೂದಲಿನ ಆರೈಕೆ ಮಾಡುವುದು ತುಂಬಾ ಒಳ್ಳೆಯದು. ಕೂದಲಿನ ಆರೈಕೆಗಾಗಿ ಶುಂಠಿಯ ಬಳಕೆ ಬಗ್ಗೆ ನೀವು ಕೇಳಿರಬಹುದು. ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ...

ಕೂದಲು ಉದುರುವಿಕೆ
ಒಂದು ತುಂಡು ಶುಂಠಿಯನ್ನು ತೆಗೆದುಕೊಂಡು ಅದನ್ನು ನೇರವಾಗಿ ತಲೆಬುರುಡೆಗೆ ಉಜ್ಜಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುವುದು. ಶುಂಠಿಯ ರಸ ತಲೆಬುರುಡೆಯಲ್ಲಿ ಹಾಗೆ ಇರಲಿ. 10-15 ನಿಮಿಷ ಬಿಟ್ಟು ತಲೆ ಕೂದಲು ತೊಳೆಯಿರಿ, ನೈಸರ್ಗಿಕ ಕಂಡೀಷನರ್ ಬಳಸಲು ಮರೆಯಬೇಡಿ....

ತಲೆಹೊಟ್ಟು
ಶುಂಠಿಯ ರಸದಲ್ಲಿ ಆ್ಯಂಟಿಬ್ಯಾಕ್ಟೀರಿಯಾ ಗುಣಗಳು ಇವೆ. ಇದು ತಲೆಬುರುಡೆಯಲ್ಲಿ ಮೇದೋಗ್ರಂಥಿಗಳ ಸ್ರಾವವನ್ನು ತಡೆಯುತ್ತದೆ. ಇದರಿಂದ ತಲೆಬುರುಡೆಯು ಸೋಂಕಿನಿಂದ ಮುಕ್ತವಾಗುತ್ತದೆ.ಹಳ್ಳಿ ಮದ್ದು ಇರಬೇಕಾದರೆ ತಲೆಹೊಟ್ಟಿನ ಸಮಸ್ಯೆಯ ಚಿಂತೆ ಏತಕ್ಕೆ?

ಕಾಂತಿಯುತ ಕೂದಲಿಗೆ
ಶುಂಠಿಯ ರಸವನ್ನು ಆಲಿವ್ ತೈಲದೊಂದಿಗೆ ಸೇರಿಸಿಕೊಂಡು ಅದನ್ನು ಕೂದಲಿಗೆ ಹಚ್ಚಿಕೊಳ್ಳಿ. ನಂತರ ಒಂದು ಗಂಟೆಗಳ ಕಾಲ ಅಥವಾ ಸಾಧ್ಯವಾದರೆ ರಾತ್ರಿಯಿಡಿ ಹಾಗೆ ಬಿಡಿ. ಇದು ನಿಮಗೆ ಕಾಂತಿಯುತ ಕೂದಲು ನೀಡುವುದು.

ಒಣ ಕೂದಲಿಗೆ
ಒಣ ಕೂದಲು ಇರುವವರು ಆರ್ಗನ್ ತೈಲದೊಂದಿಗೆ ಶುಂಠಿ ರಸವನ್ನು ಸೇರಿಸಿಕೊಳ್ಳಿ. ಇದನ್ನು ಕೂದಲಿಗೆ ಹಚ್ಚಿಕೊಂಡು ಒಂದು ಗಂಟೆ ಕಾಲ ಹಾಗೆ ಬಿಡಿ. ಬಳಿಕ ಶಾಂಪೂ ಅಥವಾ ಕಂಡೀಷನರ್ ಹಾಕಿ ತೊಳೆಯಿರಿ. ಒಣ ಹಾಗೂ ಹಾನಿಗೊಳಗಾದ ಕೂದಲಿಗೆ ಆರ್ಗನ್ ತೈಲವು ಪೋಷಕಾಂಶವನ್ನು ಒದಗಿಸುವುದು.ಒಣ ಕೂದಲಿನ ಕಿರಿಕಿರಿಗೆ ನೈಸರ್ಗಿಕ ಹೇರ್ ಮಾಸ್ಕ್



Click it and Unblock the Notifications