Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಕೂದಲಿನ ಸರ್ವರೋಗಕ್ಕೂ 'ಶುಂಠಿಯ' ಆರೈಕೆ!
ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ, ಮುಂದೆ ಓದಿ...
ಪ್ರತಿಯೊಬ್ಬ ಮಹಿಳೆಯು ಬಯಸುವುದು ಸುಂದರ ಹಾಗೂ ರೇಷ್ಮೆಯಂತಹ ಕೂದಲನ್ನು. ರೇಷ್ಮೆಯಂತಹ ಹೊಳೆಯುವ ಕೂದಲು ಬೇಕಿದ್ದರೆ ಅದಕ್ಕಾಗಿ ಕೂದಲಿನ ಆರೈಕೆಯನ್ನು ಚೆನ್ನಾಗಿ ಮಾಡಿಕೊಳ್ಳಬೇಕು. ಕೂದಲಿನ ಆರೈಕೆ ಮಾಡುವುದು ಎಂದರೆ ಮಾರುಕಟ್ಟೆಯಲ್ಲಿ ಸಿಗುವಂತಹ ಎಲ್ಲಾ ಶಾಂಪೂಗಳನ್ನು ಬಳಸುವುದು ಎಂದರ್ಥವಲ್ಲ. ಕೂದಲು ಸೊಂಪಾಗಿ ಬೆಳೆಯಬೇಕೇ? ಶುಂಠಿ ಹೇರ್ ಪ್ಯಾಕ್ ಪ್ರಯತ್ನಿಸಿ
ಶಾಂಪೂ ಬಳಸಿದರೆ ಅದರಲ್ಲಿರುವ ರಾಸಾಯನಿಕವು ಕೂದಲಿಗೆ ಹಾನಿಯನ್ನು ಉಂಟು ಮಾಡುತ್ತದೆ. ಕೆಲವು ಸಮಯ ಕೂದಲು ಸುಂದರವಾಗಿ ಕಂಡರೂ ಬಳಿಕ ಅದು ತನ್ನ ರೂಪ ಕಳೆದುಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ತಯಾರಿಸಿದ ಹೇರ್ ಪ್ಯಾಕ್ನಿಂದ ಕೂದಲಿನ ಆರೈಕೆ ಮಾಡುವುದು ತುಂಬಾ ಒಳ್ಳೆಯದು. ಕೂದಲಿನ ಆರೈಕೆಗಾಗಿ ಶುಂಠಿಯ ಬಳಕೆ ಬಗ್ಗೆ ನೀವು ಕೇಳಿರಬಹುದು. ಕೂದಲಿನ ಬೆಳವಣಿಗೆ ಮತ್ತು ಕೂದಲಿಗೆ ಬರುವ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಶುಂಠಿಯ ಬಳಕೆ ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ...

ಕೂದಲು ಉದುರುವಿಕೆ
ಒಂದು ತುಂಡು ಶುಂಠಿಯನ್ನು ತೆಗೆದುಕೊಂಡು ಅದನ್ನು ನೇರವಾಗಿ ತಲೆಬುರುಡೆಗೆ ಉಜ್ಜಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುವುದು. ಶುಂಠಿಯ ರಸ ತಲೆಬುರುಡೆಯಲ್ಲಿ ಹಾಗೆ ಇರಲಿ. 10-15 ನಿಮಿಷ ಬಿಟ್ಟು ತಲೆ ಕೂದಲು ತೊಳೆಯಿರಿ, ನೈಸರ್ಗಿಕ ಕಂಡೀಷನರ್ ಬಳಸಲು ಮರೆಯಬೇಡಿ....

ತಲೆಹೊಟ್ಟು
ಶುಂಠಿಯ ರಸದಲ್ಲಿ ಆ್ಯಂಟಿಬ್ಯಾಕ್ಟೀರಿಯಾ ಗುಣಗಳು ಇವೆ. ಇದು ತಲೆಬುರುಡೆಯಲ್ಲಿ ಮೇದೋಗ್ರಂಥಿಗಳ ಸ್ರಾವವನ್ನು ತಡೆಯುತ್ತದೆ. ಇದರಿಂದ ತಲೆಬುರುಡೆಯು ಸೋಂಕಿನಿಂದ ಮುಕ್ತವಾಗುತ್ತದೆ.ಹಳ್ಳಿ ಮದ್ದು ಇರಬೇಕಾದರೆ ತಲೆಹೊಟ್ಟಿನ ಸಮಸ್ಯೆಯ ಚಿಂತೆ ಏತಕ್ಕೆ?

ಕಾಂತಿಯುತ ಕೂದಲಿಗೆ
ಶುಂಠಿಯ ರಸವನ್ನು ಆಲಿವ್ ತೈಲದೊಂದಿಗೆ ಸೇರಿಸಿಕೊಂಡು ಅದನ್ನು ಕೂದಲಿಗೆ ಹಚ್ಚಿಕೊಳ್ಳಿ. ನಂತರ ಒಂದು ಗಂಟೆಗಳ ಕಾಲ ಅಥವಾ ಸಾಧ್ಯವಾದರೆ ರಾತ್ರಿಯಿಡಿ ಹಾಗೆ ಬಿಡಿ. ಇದು ನಿಮಗೆ ಕಾಂತಿಯುತ ಕೂದಲು ನೀಡುವುದು.

ಒಣ ಕೂದಲಿಗೆ
ಒಣ ಕೂದಲು ಇರುವವರು ಆರ್ಗನ್ ತೈಲದೊಂದಿಗೆ ಶುಂಠಿ ರಸವನ್ನು ಸೇರಿಸಿಕೊಳ್ಳಿ. ಇದನ್ನು ಕೂದಲಿಗೆ ಹಚ್ಚಿಕೊಂಡು ಒಂದು ಗಂಟೆ ಕಾಲ ಹಾಗೆ ಬಿಡಿ. ಬಳಿಕ ಶಾಂಪೂ ಅಥವಾ ಕಂಡೀಷನರ್ ಹಾಕಿ ತೊಳೆಯಿರಿ. ಒಣ ಹಾಗೂ ಹಾನಿಗೊಳಗಾದ ಕೂದಲಿಗೆ ಆರ್ಗನ್ ತೈಲವು ಪೋಷಕಾಂಶವನ್ನು ಒದಗಿಸುವುದು.ಒಣ ಕೂದಲಿನ ಕಿರಿಕಿರಿಗೆ ನೈಸರ್ಗಿಕ ಹೇರ್ ಮಾಸ್ಕ್



Click it and Unblock the Notifications