Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 3 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 3 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 17 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
Don't Miss
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲೆ ಕೂದಲಿನ ಆರೈಕೆಗೆ ಸರಳ ಮನೆಮದ್ದುಗಳು-ಪ್ರಯತ್ನಿಸಿ ನೋಡಿ
ನಮ್ಮ ಜೀವನಶೈಲಿಗೆ ಅನುಗುಣವಾಗಿ ನಮ್ಮ ಆರೋಗ್ಯ ಕೂಡ ಇರುವುದು ಎನ್ನುವುದು ಹೇಳಲಾಗುವ ಮಾತು. ದೇಹಕ್ಕೆ ಶ್ರಮವಿಲ್ಲದೆ ಕುಳಿತುಕೊಂಡು ಮಾಡುವ ಕೆಲಸ ಹಾಗೂ ಹೊರಗಿನ ಕಲ್ಮಷ ವಾತಾವರಣ, ಅನಾರೋಗ್ಯಕರ ಆಹಾರ ಕ್ರಮ ಇತ್ಯಾದಿಗಳಿಂದಾಗಿ ಇಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯು ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಹಾಗೂ ಪುರುಷರನ್ನು ಇಬ್ಬರಲ್ಲೂ ಕಂಡುಬರುವಂಹ ಸಮಸ್ಯೆ ಎಂದರೆ ಅದು ಕೂದಲು ಉದುರುವಿಕೆ. ಮಹಿಳೆಯರಲ್ಲಿ ಕೂದಲು ಉದುರುವಿಕೆ ಸಮಸ್ಯೆ ಕಂಡುಬರಲು ಹಲವಾರು ರೀತಿಯ ಕಾರಣಗಳು ಇರಬಹುದು. ಇದರಲ್ಲಿ ಭಾವನಾತ್ಮಕ ಅಥವಾ ದೈಹಿಕ ಒತ್ತಡ, ಹೊಸ ಔಷಧಿ ಸೇವನೆ, ಕೂದಲಿನ ಕೆಟ್ಟ ಆರೋಗ್ಯ, ಸ್ವಯಂ ರಕ್ಷಿತ ರೋಗ, ಪೋಷಕಾಂಶಗಳ ಕೊರತೆ, ಜ್ವರ ಅಥವಾ ಅನಾರೋಗ್ಯ ಇತ್ಯಾದಿಗಳು.
ಕೆಲವೊಂದು ಸಲ ಒಂದೆರಡು ಕಾರಣಗಳು ಜತೆಯಾಗಿರುವುದರಿಂದ ಕೂದಲು ಉದುರುವಿಕೆ ಸಮಸ್ಯೆಯು ಕಂಡುಬರುವುದು. ಆದರೆ ಇದನ್ನು ಪತ್ತೆ ಮಾಡುವುದು ತುಂಬಾ ಕಠಿಣ ಕೆಲಸವಾಗಿದೆ. ಯಾಕೆಂದರೆ ನಿಮ್ಮಲ್ಲಿ ಸ್ವಯಂರಕ್ಷಿತ ಕಾಯಿಲೆ ಪತ್ತೆಯಾಗಬೇಕು ಅಥವಾ ತೆಗೆದುಕೊಳ್ಳುತ್ತಿರುವಂತಹ ಹೊಸ ಔಷಧಿಯ ಅಡ್ಡಪರಿಣಾಮದಿಂದಾಗಿ ಇದು ಬಂದಿದೆ ಎಂದು ತಿಳಿದುಕೊಳ್ಳುವುದು ಸವಾಲಿನ ಕೆಲಸ. ಆರೋಗ್ಯಕಾರಿ ಆಹಾರ ಕ್ರಮವನ್ನು ಪಾಲಿಸಿಕೊಂಡು ಹೋಗುವುದು ಮತ್ತು ಕೂದಲಿಗೆ ಬೇಕಾಗಿರುವಂತಹ ಸ್ವಲ್ಪ ಟಿಎಲ್ ಸಿ ನೀಡುವುದರ ಜತೆಗೆ ಕೂದಲು ಉದುರುವಿಕೆಗೆ ತಡೆಯಲು ಕೆಲವೊಂದು ವಿಧಾನಗಳು ಇವೆ ಮತ್ತು ಸುಂದರ ಹಾಗೂ ಕಾಂತಿಯುತ ಕೂದಲು ಕೂಡ ಪಡೆಯಬಹುದು. ಅದಕ್ಕಾಗಿಯೇ ಇಂದು ಬೋಲ್ಡ್ ಸ್ಕೈ ಕೆಲವೊಂದು ಮನೆಮದ್ದನ್ನು ಪರಿಚಯಿಸುತ್ತಿದ್ದು , ನೀವೂ ಒಮ್ಮೆ ಪ್ರಯತ್ನಿಸಿ....
ತಲೆಹೊಟ್ಟಿನ ಸಮಸ್ಯೆಗೆ ಮೆಂತೆ-ಬೇವು
•ಮೂರರಿಂದ ನಾಲ್ಕು ಗಂಟೆಗಳ ಕಾಲ ಮೆಂತೆ ಕಾಳನ್ನು ನೀರಿನಲ್ಲಿ ನೆನೆಸಿಕೊಳ್ಳಿ.
*ನೆನೆದಿರುವ ಮೆಂತೆ ಕಾಳಿಗೆ ಬೇವಿನ ಎಲೆಗಳನ್ನು ಹಾಕಿಕೊಳ್ಳಿ. ಕೆಲವು ಹನಿ ನೀರು ಹಾಕಿ ಸರಿಯಾಗಿ ಪೇಸ್ಟ್ ಮಾಡಿ.
•ಪೇಸ್ಟ್ ಮೃದುವಾದ ಬಳಿಕ ಅದಕ್ಕೆ ನಿಂಬೆರಸ ಮತ್ತು ಮೊಸರು ಹಾಕಿಕೊಳ್ಳಿ.
•ಎಣ್ಣೆಯಂಶವಿರುವ ಕೂದಲಿಗೆ ಇದನ್ನು ಹಚ್ಚಿಕೊಂಡು ಸುಮಾರು ಒಂದು ಗಂಟೆ ಕಾಲ ಹಾಗೆ ಬಿಟ್ಟು ಬಳಿಕ ತೊಳೆಯಿರಿ.
•ಒಳ್ಳೆಯ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಸಲ ಇದನ್ನು ಬಳಸಿ.
ತಲೆಯಲ್ಲಿ ಹೇನುಗಳ ಸಮಸ್ಯೆ ಇದ್ದರೆ
ಹೇನುಗಳ ನಿವಾರಣೆಗೆ ಪುದೀನಾ ಎಲೆಗಳು ಯಾರ ತಲೆಯಲ್ಲಿ ಹೇನುಗಳಿವೆಯೋ ಅಂತವರು ವಾರಕ್ಕೆ ಮೂರು ನಾಲ್ಕು ಬಾರಿ ಪುದೀನಾ ಎಲೆಗಳನ್ನು ತಮ್ಮ ಕೂದಲಿಗೆ ಹಚ್ಚಿಕೊಂಡ್ರೆ ಕೆಲವೇ ವಾರಗಳಲ್ಲಿ ಹೇನುಗಳಿಂದ ಮುಕ್ತಿ ಪಡೀಬಹುದು. ಕೆಲವು ಪುದೀನಾ ಎಲೆಗಳನ್ನು ಕೊಬ್ಬರಿ ಎಣ್ಣೆಗೆ ಹಾಕಿ ಚೆನ್ನಾಗಿ ಕುದಿಸಿ, ಆರಿಸಿ ಆ ಎಣ್ಣೆಯನ್ನು ಕೂದಲಿಗೆ ಅಪ್ಲೈ ಮಾಡಿಕೊಳ್ಳೋದ್ರಿಂದಲೂ ಕೂಡ ಹೇನುಗಳು ನಿವಾರಣೆಯಾಗುತ್ತೆ.
ಪಡವಲಕಾಯಿ
ಪಡವಲಕಾಯಿ ಅಥ್ವಾ ಪಟ್ಲಕಾಯಿ ಅಂತ ಕರೆಯುವ ಈ ತರಕಾರಿಯಲ್ಲಿ ಹೈ ಪ್ರೊಟೀನ್, ವಿಟಮಿನ್ ಇರೋದ್ರಿಂದ ಇವು ನಿಮ್ಮ ತಲೆಕೂದಲಿನ ರಕ್ಷಣೆಗೆ ಸಹಕಾರಿಯಾಗಿರುತ್ತೆ. ಅಷ್ಟೇ ಅಲ್ಲ, ಎಲ್ಲರಿಗೂ ಗೊತ್ತಿರೋ ಹಾಗೆ ಮೆಂತ್ಯೆ ತಲೆಗೆ ಗುಡ್ ಕಂಡೀಷನರ್. ಕೂದಲಿನ ಆರೋಗ್ಯ ವೃದ್ಧಿಗೆ ಮತ್ತು ಕೂದಲು ಸ್ಮೂತ್ ಎಂಡ್ ಶೈನಿ ಆಗೋದಕ್ಕೆ ಮೆಂತ್ಯೆಕಾಳುಗಳು ಬೆಸ್ಟ್.. ಸೀಳುಮಾಡಿದ ಪಡವಲಕಾಯಿಗೆ ಮೆಂತ್ಯೆ ಹಾಕಿದ ನಂತ್ರ ಒಂದು ರಾತ್ರಿ ಮೆಂತ್ಯೆಕಾಳುಗಳು ಪಡವಲಕಾಯಿಯೊಳಗೆ ನೆನೆಯುವಂತೆ ಇಟ್ಟುಬಿಡಿ,. ಆಲ್ ಮೋಸ್ಟ್ 12 ಗಂಟೆಗಳ ಕಾಲ ನೆನೆದ್ರೆ,. ಮೆಂತ್ಯೆಕಾಳುಗಳು ಪಡವಲಕಾಯಿಯೊಳಗೆ ನೆನೆದಿರುವುದನ್ನು ನೀವೇ ಗಮನಿಸಬಹುದು. ಹೀಗೆ 12 ಗಂಟೆ ಪಡವಲಕಾಯಿಯಲ್ಲಿ ಮೆಂತ್ಯೆಕಾಳುಗಳನ್ನು ನೆನೆಸಿದ ನಂತ್ರ. ಅದನ್ನು ಮಿಕ್ಸಿ ಮಾಡ್ಬೇಕು. ಸೋ ಅದನ್ನು ಸಣ್ಣಸಣ್ಣ ಪೀಸ್ಗ ಳನ್ನಾಗಿ ಕತ್ತರಿಸಿ. ಸ್ವಲ್ಪ ನೀರು ಹಾಕಿ, ರುಬ್ಬಿಕೊಳ್ಳಿ. ತರಿತರಿಯಾಗುವಂತೆ ರುಬ್ಬಬೇಡಿ. ಚೆನ್ನಾಗಿ
ಗ್ರೈಂಡ್ ಮಾಡಿ..
ಹುಳಿ ಮಜ್ಜಿಗೆ ಮತ್ತು ಮೆಂತೆ ಪುಡಿ
ಮೆಂತೆಯ ಒಂದಷ್ಟು ಕಾಳುಗಳನ್ನು ಪುಡಿಮಾಡಿ ಅದನ್ನು ಮಜ್ಜಿಗೆಯಲ್ಲಿ ನೆನಸಿಡಿ. ಒಂದು ರಾತ್ರಿ ನೆನಸಿಟ್ಟರೂ ಪರವಾಗಿಲ್ಲ. ಹೀಗೆ ನೆನಸಿದ ನಂತ್ರ ಅದನ್ನು ತಲೆಯ ಸ್ಕಾಲ್ಪ್ ಸೇರಿದಂತೆ ಕೂದಲಿಗೆ ಹಚ್ಚಿ ಅರ್ಧ ಅಥವಾ ಒಂದು ಗಂಟೆಯ ನಂತ್ರ ತೊಳೆದುಕೊಳ್ಳೋದ್ರಿಂದ ಕೂದಲಿನ ಆರೋಗ್ಯ ಉತ್ತಮಗೊಳ್ಳಲಿದೆ. ಡ್ಯಾಂಡ್ರಫ್ ಸಮಸ್ಯೆ ನಿವಾರಣೆಯಾಗೋದು ಅಲ್ಲದೆ ಕೂದಲು ಗಟ್ಟುಮುಟ್ಟಾಗಿ ಶೈನಿಯಾಗಿ ಮತ್ತು ಆರೋಗ್ಯದಾಯಕವಾಗಿ ಬೆಳೆಯಲು ಇದು ನೆರವಾಗಲಿದೆ.
ಮೆಹಂದಿ ಪುಡಿ ಮತ್ತು ಹುಳಿ ಮಜ್ಜಿಗೆ
ಎಲ್ಲರಿಗೂ ತಿಳಿದಿರುವಂತೆ ಮೆಹಂದಿ ಕೂದಲಿನ ಆರೋಗ್ಯಕ್ಕೆ ಅತ್ಯುತ್ತಮವಾದ ಮನೆಮದ್ದು. ಕೂದಲು ಬಿಳಿಯಾಗಿರುವವರು ಕಲ್ಲರಿಂಗ್ ಗಾಗಿ ಕೂಡ ಮೆಹಂದಿಯನ್ನು ಬಳಸ್ತಾರೆ. ಮೆಹಂದಿ ಪುಡಿಯೊಡನೆ ಹುಳಿಮಜ್ಜಿಗೆ ಸೇರಿಸಿ ತಲೆಗೆ ಅಪ್ಲೈ ಮಾಡಿಕೊಳ್ಳೋದ್ರಿಂದ ಕೂದಲು ಮತ್ತಷ್ಟು ಅತ್ಯುತ್ತಮಗೊಳ್ಳಲು ಸಹಕಾರಿಯಾಗಿರುತ್ತೆ. ಯಾರಿಗೆ ಕೂದಲು ಉದುರುವ ಸಮಸ್ಯೆ ಇದಿಯೋ ಅಂತವರು ಮತ್ತು ಕೂದಲಿನ ಬಣ್ಣ ಗಾಢವಾಗಿ ಬರುವಂತೆ ಮಾಡಲು ಅಷ್ಟೇ ಯಾಕೆ ಈ ಪ್ಯಾಕ್ ಕೂಡ ತಲೆಹೊಟ್ಟನ್ನು ನಿವಾರಿಸಿ ಕೂದಲಿನ ಆರೋಗ್ಯ ವೃದ್ಧಿಗೆ ನೆರವಾಗುತ್ತೆ.
ಹೆಸರುಕಾಳು
ಮುಕ್ಕಾಲು ಕಪ್ ನಷ್ಟು ಹೆಸರುಕಾಳನ್ನು ನೀರಿನಲ್ಲಿ ಒಂದು ರಾತ್ರಿ ನೆನಸಿಟ್ಟು ಬೆಳಿಗ್ಗೆ ಪ್ರೆಷರ್ ಕುಕ್ಕರ್ ಬಳಸಿ ಬೇಯಿಸಿ. ಬೆಂದ ಮಿಶ್ರಣವನ್ನು ತಣ್ಣಗಾದ ನಂತ್ರ ಪೇಸ್ಟ್ ತಯಾರಿಸಿಕೊಳ್ಳಿ. ಕೂದಲು ಉದ್ದು ಇರುವವರು ಇನ್ನೂ ಹೆಚ್ಚು ಹೆಸರುಕಾಳನ್ನು ತೆಗೆದುಕೊಳ್ಳಬಹುದು. ತಯಾರಿಸಿಕೊಂಡ ಪೇಸ್ಟಿಗೆ ಒಂದು ಮೊಟ್ಟೆಯ ಬಿಳಿಭಾಗವನ್ನು ಸೇರಿಸಿ, ಮತ್ತು ಒಂದು ಟೇಬಲ್ ಸ್ಪೂನ್ ಆಗುವಷ್ಟು ಲಿಂಬೆಯ ರಸವನ್ನು ಮಿಶ್ರಣ ಮಾಡಿ.. ನಂತ್ರ ಅರ್ದ ಬಟ್ಟಲಿನಷ್ಟು ಮೊಸರನ್ನು ಸೇರಿಸಿ ಎಲ್ಲವನ್ನೂ ಚೆನ್ನಾಗಿ ಕಲಸಿ ಪೇಸ್ಟ್ ತಯಾರಿಸಿಕೊಳ್ಳಿ.
ಹೆಸರುಕಾಳು
ಇದನ್ನು ನಿಮ್ಮ ಕೂದಲಿಗೆ ಅಪ್ಲೈ ಮಾಡಿ. ಎರಡು ಗಂಟೆ ಕೂದಲಿನಲ್ಲಿ ಈ ಮಿಶ್ರಣವಿರಲಿ. ಆ ಕಡೆ ಈ ಕಡೆ ಓಡಾಡುವಾಗ ಮಿಶ್ರಣ ತೊಂದರೆ ನೀಡಬಾರದು ಅಂದ್ರೆ ಹೇರ್ ಕ್ಯಾಪ್ ತೊಟ್ಟುಕೊಳ್ಳಿ. ಎರಡುಗಂಟೆಯ ನಂತ್ರ ಮೈಲ್ಡ್ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಒಂದು ವಾರಕ್ಕೆ ಒಮ್ಮೆ ಈ ಹೇರ್ ಪ್ಯಾಕ್ ಬಳಸಿಕೊಳ್ಳಬಹುದು. ಕೂದಲು ದಟ್ಟವಾಗಿ ಮತ್ತು ಉದ್ದವಾಗಿ ಬೆಳೆಯುವುದನ್ನು ನೀವೇ ಗಮಿಸಿಕೊಳ್ಳಬಹುದು.
ಹಾಗಲಕಾಯಿಯ ರಸ!
ಹಾಗಲಕಾಯಿಯನ್ನು ಚೆನ್ನಾಗಿ ಜಜ್ಜಿ, ಅದರಿ೦ದ ದಪ್ಪ ರಸವನ್ನು ಪಡೆದುಕೊ೦ಡು, ಆ ರಸವನ್ನು ಬೂದುಬಣ್ಣದ ಕೂದಲುಗಳಿಗೆ ಹಚ್ಚಿರಿ ಹಾಗೂ ಅದನ್ನು ಒ೦ದೆರಡು ತಾಸುಗಳ ಕಾಲ ಕೂದಲಲ್ಲಿ ಹಾಗೆಯೇ ಒಣಗಗೊಡಿರಿ. ಬಳಿಕ ಕೇಶರಾಶಿಯನ್ನು ಚೆನ್ನಾಗಿ ತೊಳೆದುಕೊಳ್ಳಿರಿ. ಕೂದಲು ಸಹಜವಾಗಿಯೇ ಒಣಗಲಿ. ಕೇಶರಾಶಿಯ ಬೂದುಬಣ್ಣವನ್ನು ನಿವಾರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತೀ ಹತ್ತು ದಿನಗಳಿಗೊಮ್ಮೆ ಈ ಪ್ರಕ್ರಿಯೆಯನ್ನು ಪುನರಾವರ್ತಿಸಿರಿ.
ಲಿಂಬೆ ಮಿಶ್ರಿತ ನೀರಿನಿಂದ ತೊಳೆದುಕೊಳ್ಳಿ
ಒಂದು ವೇಳೆ ಕೂದಲು ತುಂಬಾ ಎಣ್ಣೆಯುಕ್ತವಾಗಿರುವಂತೆ ಕಂಡುಬಂದರೆ ಲಿಂಬೆ ಸೇರಿಸಿದ ನೀರಿನಿಂದ ತೊಳೆದುಕೊಳ್ಳುವುದರಿಂದ ಪರಿಹಾರ ದೊರಕುತ್ತದೆ. ಇದಕ್ಕಾಗಿ ಮೂರು ಲೋಟ ನೀರಿಗೆ ಒಂದು ದೊಡ್ಡ ಚಮಚ ಲಿಂಬೆಹಣ್ಣಿನ ರಸವನ್ನು ಸೇರಿಸಿ ದ್ರಾವಣವನ್ನು ತಯಾರಿಸಿ. ಸೌಮ್ಯ ಶಾಂಪೂ ಬಳಸಿ ಸ್ನಾನ ಮಾಡಿದ ಬಳಿಕ ಈ ದ್ರಾವಣದಿಂದ ಕೂದಲಿಗೆ ಹೆಚ್ಚಿ ಕೆಲವು ನಿಮಿಷಗಳ ಬಳಿಕ ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ. ಲಿಂಬೆಯಲ್ಲಿರುವ ರೋಗನಿರೋಧಕ ಶಕ್ತಿಯ ಕಾರಣ ಕೂದಲಿಗೆ ಉತ್ತಮ ಆರೈಕೆ ದೊರೆಯುವುದರ ಜೊತೆಗೇ ತಲೆಹೊಟ್ಟಿನಿಂದಲೂ ಮುಕ್ತಿ ದೊರಕುತ್ತದೆ.
ಕೊಬ್ಬರಿ ಅಥವಾ ಬಾದಾಮಿ ಎಣ್ಣೆ ಹಚ್ಚಿ ಮಸಾಜ್ ಮಾಡಿ
ಸ್ನಾನದ ಬಳಿಕ ನೈಸರ್ಗಿಕವಾದ ಕಂಡೀಶನರ್ ಉಪಯೋಗಿಸುವುದು ಕೂದಲಿಗೆ ಉತ್ತಮ ಆರೈಕೆ ಹಾಗೂ ಹೊಳಪನ್ನು ನೀಡುತ್ತವೆ. ಕೊಬ್ಬರಿ ಮತ್ತು ಬಾದಾಮಿ ಎಣ್ಣೆಗಳು ಅತ್ಯುತ್ತಮವಾದ ನೈಸರ್ಗಿಕ ಕಂಡೀಶನರ್ ಆಗಿವೆ. ಸುಮಾರು ಎರಡರಿಂದ ಮೂರು ತೊಟ್ಟು ಎಣ್ಣೆಯನ್ನು ಕೈಗಳಿಗೆ ಸವರಿಕೊಂಡು ಕೂದಲಿನ ಬುಡಕ್ಕೆ ನಯವಾಗಿ ಮಸಾಜ್ ಮಾಡಿ. ಹೆಚ್ಚು ಎಣ್ಣೆ ಉಪಯೋಗಿಸುವುದರಿಂದ ಹೊಳಪಿನ ಬದಲಿಗೆ ಹೆಚ್ಚಿನ ಎಣ್ಣೆಯ ಜಿಡ್ಡು ತಗಲುವುದು ಹಾಗೂ ಇದಕ್ಕೆ ಧೂಳು ಅಂಟಿಕೊಳ್ಳುವುದರಿಂದ ಕೇವಲ ಹೊಳಪು ಬರುವಷ್ಟು ಮಾತ್ರ ಪ್ರಮಾಣವನ್ನು ಉಪಯೋಗಿಸಬೇಕು.
ಈರುಳ್ಳಿ ಮತ್ತು ಬೆಳ್ಳುಳ್ಳಿ
ಕೂದಲ ಬುಡದಿಂದ ಕೂದಲನ್ನು ಬೆಳೆಸಲು ಕೊಲಾಜೆನ್ ಎಂಬ ಪೋಷಕಾಂಶ ಅಗತ್ಯ. ಕೊಲಾಜೆನ್ ಪೋಷಕಾಂಶವನ್ನು ಹೆಚ್ಚಾಗಿ ಪಡೆಯಲು ಗಂಧಕ ಹೆಚ್ಚಿರುವ ಪ್ರಸಾಧನಗಳು ಬೇಕು. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಗಂಧಕದ ಅಂಶ ನೈಸರ್ಗಿಕವಾಗಿ ಹೆಚ್ಚಿದ್ದು ಕೂದಲ ಪೋಷಣೆಗೆ ಸಹಕರಿಸುತ್ತವೆ. ಬಹಳ ಹಿಂದಿನಿಂದಲೂ ಕೂದಲ ಆರೈಕೆಗಾಗಿ ಭಾರತದಲ್ಲಿ ಇವು ಬಳಸಲ್ಪಡುತ್ತಿವೆ. ವಿಧಾನ: ಒಂದು ನೀರುಳ್ಳಿಯನ್ನು ಚಿಕ್ಕದಾಗಿ ಕೊಚ್ಚಿ ತೆಳುವಾದ ಬಟ್ಟೆಯಲ್ಲಿ ಹಿಂಡಿ ರಸ ತೆಗೆದಿಟ್ಟು ಕೊಳ್ಳಬೇಕು.ಇನ್ನೊಂದು ಚಿಕ್ಕ ಪಾತ್ರೆಯಲ್ಲಿ ಬೆಳ್ಳುಳ್ಳಿಯ ಎಸಳುಗಳನ್ನು ಜಜ್ಜಿ ಕೊಬ್ಬರಿ ಎಣ್ಣೆಯಲ್ಲಿ ಚಿಕ್ಕ ಉರಿಯಲ್ಲಿ ಸ್ವಲ್ಪ ಕೆಂಪಗಾಗುವವರೆಗೆ ಕುದಿಸಬೇಕು. ಈ ಎಣ್ಣೆ ತಣ್ಣಗಾಗಲು ಬಿಡಿ
ಈರುಳ್ಳಿ ಮತ್ತು ಬೆಳ್ಳುಳ್ಳಿ
ಸ್ನಾನಕ್ಕೂ ಒಂದು ಅಥವಾ ಒಂದೂವರೆ ಗಂಟೆ ಮೊದಲು ಈರುಳ್ಳಿ ರಸವನ್ನು ತಲೆಗೆ ಹಚ್ಚಿ ಹದಿನೈದು ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಶುದ್ಧ ನೀರಿನಿಂದ ಅಥವಾ ಸೌಮ್ಯವಾದ ಶಾಂಪೂವಿನಿಂದ ತಲೆಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿರಿ. ಕೂದಲು ಚೆನ್ನಾಗಿ ಒರೆಸಿಕೊಂಡು ಈಗ ತಣ್ಣಗಾಗಿರುವ ಬೆಳ್ಳುಳ್ಳಿ, ಕೊಬ್ಬರಿ ಎಣ್ಣೆಯ ಮಿಶ್ರಣವನ್ನು ತಲೆಗೆ ನಯವಾಗಿ ಮಸಾಜ್ ಮಾಡುತ್ತಾ ಹಚ್ಚಿಕೊಳ್ಳಿ. ಇಡಿಯ ತಲೆಗೆ ಎಣ್ಣೆ ಹಚ್ಚಿದ ಬಳಿಕವೂ ನಯವಾಗಿ ಮಸಾಜ್ ಮಾಡುತ್ತಾ ಬನ್ನಿ. ಸುಮಾರು ಮುಕ್ಕಾಲರಿಂದ ಒಂದು ಗಂಟೆ ಬಿಟ್ಟು ಸೌಮ್ಯ ಶಾಂಪೂವಿನಿಂದ ತಲೆ ಸ್ನಾನ ಮಾಡಿಕೊಳ್ಳಿ. ವಾರಕ್ಕೆ ಮೂರು ಬಾರಿ ಈ ವಿಧಾನವನ್ನು ಅನುಸರಿಸುವುದರಿಂದ ಉತ್ತಮ ಪರಿಣಾಮವನ್ನು ಪಡೆಯಬಹುದು.
ದಾಸವಾಳ ಮತ್ತು ಕೊಬ್ಬರಿ ಎಣ್ಣೆ
ಕೇರಳದಲ್ಲಿ ಮಹಿಳೆಯರು ಉದ್ದ ಹಾಗೂ ನೈಸರ್ಗಿಕ ತಲೆಗೂದಲು ಹೊಂದಿರಲು ಅವರು ಹೆಚ್ಚಾಗಿ ಉಪಯೋಸುವ ದಾಸವಾಳ ಮತ್ತು ಕೊಬ್ಬರಿ ಎಣ್ಣೆಯ ಬಳಕೆ ಎಂದು ಅರ್ಥೈಸಿಕೊಳ್ಳಬಹುದು. ದಾಸವಾಳದ ನಿಯಮಿತ ಉಪಯೋಗದಿಂದ ಕೂದಲು ಬೇಗನೇ ಬಿಳಿಯಾಗುವುದನ್ನು, ತಲೆಹೊಟ್ಟು ಬರುವುದನ್ನು ಹಾಗೂ ಉದುರುವಿಕೆಯನ್ನು ತಡೆಗಟ್ಟಬಹುದು. ವಿಧಾನ: ದಾಸವಾಳ ಹೂವಿನ ಎಸಳುಗಳನ್ನು ಜಜ್ಜಿ ಕೊಬ್ಬರಿ ಎಣ್ಣೆ ಅಥವಾ ಎಳ್ಳೆಣ್ಣೆಯಲ್ಲಿ ಚಿಕ್ಕ ಉರಿಯಲ್ಲಿ ಚೆನ್ನಾಗಿ ಕುದಿಸಿ ತಣಿಸಿಟ್ಟುಕೊಳ್ಳಬೇಕು. ತಣಿದ ಈ ಎಣ್ಣೆಯ ಮಿಶ್ರಣವನ್ನು ತಲೆಗೂದಲ ಬುಡಕ್ಕೆ ಹಚ್ಚಿ ನಯವಾಗಿ ಮಸಾಜ್ ಮಾಡಿಕೊಳ್ಳಬೇಕು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಬಳಿಕ ತಣ್ಣೀರು ಅಥವಾ ಉಗುರುಬೆಚ್ಚನೆಯ ನೀರು ಮತ್ತು ಸೌಮ್ಯ ಶಾಂಪೂ ಉಪಯೋಗಿಸಿ ತೊಳೆದುಕೊಳ್ಳಬೇಕು.