Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಈ ಮನೆಮದ್ದುಗಳು ಕೂದಲುದುರುವುದನ್ನು ತಡೆದು ಸೊಂಪಾಗಿ ಬೆಳೆಯುವಂತೆ ಮಾಡುತ್ತವೆ
ಕೂದಲು ಉದುರುವಿಕೆ ಸಾಮಾನ್ಯವಾಗಿದ್ದರೂ, ಬೇಸಿಗೆಯಲ್ಲಿ ನೆತ್ತಿಯಲ್ಲಿ ಶೇಖರಣೆ ಆಗುವ ಅಥವಾ ಉತ್ಪತ್ತಿಯಾಗುವ ಬೆವರಿಂದ ಹೆಚ್ಚು ಕೂದಲು ಉದುರಲು ಪ್ರಾರಂಭವಾಗುತ್ತದೆ. ಜೊತೆಗೆ ತೇವಾಂಶದ ಕೊರತೆಯಿರುವುದರಿಂದ ಕೂದಲು ಒಡೆಯಲು, ತುದಿ ಸೀಳಾಗಲು ಕಾರಣವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕೂದಲು ಉದುರುವುದನ್ನು ತಡೆಯುವುದು ಬಹಳ ಮುಖ್ಯ. ಸದ್ಯ ಲಾಕ್ ಡೌನ್ ಪ್ರಯುಕ್ತ ಮನೆಯಲ್ಲಿಯೇ ಇರುವುದರಿಂದ ಈ ಸಮಸ್ಯೆಗೆ ಕೆಲವೊಂದು ಮನೆಮದ್ದುಗಳನ್ನು ಪ್ರಯತ್ನಿಸಬಹುದು. ಆ ಮನೆಮದ್ದುಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಬೇಸಿಗೆಯಲ್ಲಿ ಕೂದಲುದುರುವುದನ್ನು ತಡೆಯಲು ಮನೆಮದ್ದುಗಳನ್ನು ಈ ಕೆಳಗೆ ನೀಡಲಾಗಿದೆ:

ತ್ರಿಫಲ:
ತ್ರಿಫಲ ಮುಖ್ಯವಾಗಿ ಮೂರು ಪ್ರಮುಖ ಘಟಕಗಳ (ಅಮಲಾಕಿ, ಹರಿಟಾಕಿ ಮತ್ತು ಬಿಭಿತಾಕಿ) ಮಿಶ್ರಣವಾಗಿದೆ. ಆ ಮಿಶ್ರಣವನ್ನು ನೀರಿನೊಂದಿಗೆ ಬೆರೆಸಿ ಕೂದಲಿನ ಬೇರುಗಳಿಗೆ ಹಚ್ಚಿದಾಗ, ಅದು ನಿಮ್ಮ ಕೂದಲಿನ ಮೇಲೆ ಬಹಳ ಬೇಗನೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಕೂದಲು ಉದುರುವುದು ತ್ವರಿತವಾಗಿ ನಿಲ್ಲುವಂತೆ ಮಾಡುತ್ತದೆ. ಆದ್ದರಿಂದ ನಿಮ್ಮ ಕೂದಲು ಉದುರುತ್ತಿದ್ದರೆ ಈ ಕೂಡಲೇ ಇದನ್ನು ಪ್ರಯತ್ನಿಸಿ.

ಪಾಲಕ್:
ನಿಮ್ಮ ಕೂದಲು ಉದುರುವಿಕೆಗೆ ಮುಖ್ಯ ಕಾರಣ ನಿಮ್ಮ ದೇಹದಲ್ಲಿನ ಕಬ್ಬಿಣದ ಕೊರತೆ. ಆದ್ದರಿಂದ ಆಹಾರದಲ್ಲಿ ವಿಟಮಿನ್ ಸಿ ಮತ್ತು ಕಬ್ಬಿಣ ಇರುವ ಆಹಾರ ವಸ್ತುಗಳನ್ನು ತಿನ್ನಲು ಪ್ರಾರಂಭಿಸಿ. ಇದಕ್ಕಾಗಿ ನೀವು ಪಾಲಕ್ ಸೊಪ್ಪನ್ನು ತಿನ್ನಬಹುದು. ಇದು ವಿಟಮಿನ್ ಸಿ ಮತ್ತು ಕಬ್ಬಿಣದ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ. ಇವುಗಳ ಜೊತೆಗೆ ಹಸಿರು ತರಕಾರಗಳು, ವಿಟಮಿನ್ ಸಿ ಸಮೃದ್ಧವಾಗಿರುವ ಹಣ್ಣನ್ನು ಸಹ ಸೇವಿಸಬಹುದು.

ಈರುಳ್ಳಿ:
ಕೂದಲ ಸಮಸ್ಯೆಗೆ ಈರುಳ್ಳಿ ಹಲವಾರು ಯುಗಗಳಿಂದ ಬಳಸಿಕೊಂಡು ಬಂದಿರುವ ಆಹಾರ ವಸ್ತು. ಈರುಳ್ಳಿಯನ್ನು ಆಹಾರ ತಯಾರಿಕೆಗಾಗಿ ಮಾತ್ರ ಬಳಸಲಾಗುವುದಿಲ್ಲ, ಜೊತೆಗೆ ಅದರ ರಸವನ್ನು ಕೂದಲಿನ ಬೇರುಗಳಿಗೆ ಹಚ್ಚಿದಾಗ ಅದು ಕೂದಲು ಉದುರುವುದನ್ನು ನಿಲ್ಲಿಸುತ್ತದೆ. ಇದು ಕೂದಲಿನ ಬೆಳವಣಿಗೆಗೆ ಕಾರಣವಾಗುವ ಕ್ಯಾಟಲೇಸ್ ಎಂಬ ಕಿಣ್ವವನ್ನು ಹೊಂದಿರುತ್ತದೆ. ಇದು ನಿಮ್ಮ ಕೂದಲುದುರುವ ಸಮಸ್ಯೆ, ತಲೆಹೊಟ್ಟು ಮುಂತಾದ ಕೂದಲಿನ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಾಯ ಮಾಡುತ್ತದೆ.

ಜೇನುತುಪ್ಪ:
ಜೇನುತುಪ್ಪವು ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಆದ್ದರಿಂದ ನೀರು ಮತ್ತು ಜೇನುತುಪ್ಪವನ್ನು 9: 1 ಅನುಪಾತದಲ್ಲಿ ಬೆರಸಿ, ಆ ಮಿಶ್ರಣವನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದು ದೊಡ್ಡ ಪ್ರಮಾಣದಲ್ಲಿ ಕಡಿಮೆ ಆಗುತ್ತದೆ. ಆದರೆ ಜೇನುತುಪ್ಪ ಹಚ್ಚಿದ ಬಳಿಕ ಅದನ್ನು ಚೆನ್ನಾಗಿ ತೊಳೆಯುವುದನ್ನು ಮರೆಯಬೇಡಿ. ಇಲ್ಲವಾದಲ್ಲಿ ನಿಮ್ಮ ಕೂದಲು ಜಿಡ್ಡುಜಿಡ್ಡಾಗುತ್ತದೆ.

ಮೊಸರು :
ಮೊಸರಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬಿ 12, ವಿಟಮಿನ್ ಬಿ 2, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಇರುವ ಪ್ರೋಟೀನ್ ಇರುತ್ತದೆ. ಕೂದಲಿನ ಮಾಸ್ಕ್ ರೀತಿ ಇದನ್ನು ಹಚ್ಚುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಜೊತೆಗೆ ಮೊಸರು ಒಂದು ರೀತಿ ಕಂಡೀಷನರ್ ಹಾಗೇ ಕಾರ್ಯನಿರ್ವಹಿಸಿ, ನಿಮ್ಮ ಕೂದಲನ್ನು ಮೃದುವಾಗುವಂತೆ ಮಾಡುತ್ತದೆ.



Click it and Unblock the Notifications