Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸುಕ್ಕು ತಡೆಗಟ್ಟಲು ಇಲ್ಲಿದೆ ನೈಸರ್ಗಿಕ ಮಾರ್ಗ

ಸುಕ್ಕು ತಡೆಯಲು ಕೆಮಿಕಲ್ ಮಿಶ್ರಿತ ಕ್ರೀಂಗಳ ಮೊರೆಹೋಗುವ ಬದಲು ನೈಸರ್ಗಿಕವಾಗಿ ತ್ವಚೆಯನ್ನು ಸಂರಕ್ಷಿಸಿಕೊಳ್ಳುವ ಸುಲಭ ವಿಧಾನವೊಂದು ಇಲ್ಲಿದೆ. ನಾವು ಸೇವಿಸುವ ಆಹಾರದಿಂದಲೇ ನಮ್ಮ ಚರ್ಮದ ಮೇಲಿನ ಸುಕ್ಕುಗಳನ್ನು ನಿಯಂತ್ರಿಸಬಹುದು.
ತಾಜಾ ತ್ವಚೆಗೆ ನೈಸರ್ಗಿಕ ಮಾರ್ಗ:
1. ಹಸಿರು ತರಕಾರಿಗಳು: ಪಾಲಾಕ್, ಹೂಕೊಸು, ಕೊತ್ತಂಬರಿ, ಕರಿಬೇವು ಇನ್ನೂ ಮುಂತಾದವು ಚರ್ಮದ ರಕ್ಷಣೆಯಲ್ಲಿ ಅತಿ ಹೆಚ್ಚು ಅವಶ್ಯಕ. ಇದರಲ್ಲಿ ಹಾನಿಯುಂಟು ಮಾಡುವ ಯಾವುದೇ ಅಂಶಗಳು ಇಲ್ಲದಿರುವುದರಿಂದ ಮತ್ತು ಇವುಗಳ ನಾರಿನಂಶ ಜೀರ್ಣಕ್ರಿಯೆಯನ್ನು ಸುಲಭಗೊಳಿಸುವುದರಿಂದ ದೇಹವನ್ನೂ ಶುದ್ಧವಾಗಿಟ್ಟು, ತ್ವಚೆಯ ರಕ್ಷಣೆಗೆ ಮುಂದಾಗುತ್ತದೆ.
2. ಚರ್ಮದ ಸ್ವಾಸ್ಥ್ಯಕ್ಕೆ ವಿಟಮಿನ್: ವಿಟಮಿನ್ ಸಿ ಮತ್ತು ಇ ಇವೆರಡೂ ತ್ವಚೆ ಸುಕ್ಕುಗಟ್ಟುವುದನ್ನು ತಡೆಯುವ ಅತ್ಯಮೂಲ್ಯ ವಿಟಮಿನ್ ಗಳು. ಇವು ಚರ್ಮದ ಜೀವಕಣಗಳ ಪುನರುತ್ಪತ್ತಿಯನ್ನು ಹೆಚ್ಚುಗೊಳಿಸಿ ನಿರ್ಜೀವ ತ್ವಚೆಯನ್ನು ಸರಿಗೊಳಿಸುವಲ್ಲಿ ಸಹಾಯಕವಾಗುತ್ತದೆ. ವಿಟಮಿನ್ ಇ ತ್ವಚೆಗೆ ಎಣ್ಣೆಯಂಶ ಒದಗಿಸಿ ಚರ್ಮಕ್ಕೆ ತಾರುಣ್ಯ ನೀಡುತ್ತದೆ. ಬಿಸಿಲು, ಪ್ರದೂಷಣೆ, ಹೊಗೆ ಧೂಳಿನಿಂದ ಚರ್ಮದ ಮೇಲೆ ಹಾನಿಯಾಗದಂತೆ ತಡೆಯುತ್ತವೆ. ಕಿತ್ತಳೆ, ದ್ರಾಕ್ಷಿ, ನಿಂಬೆ, ಬಾದಾಮಿ, ಮತ್ತು ಇನ್ನಿತರ ಒಣಹಣ್ಣುಗಳ ಸೇವನೆ ತ್ವಚೆ ರಕ್ಷಣೆಗೆ ಅವಶ್ಯಕ.
3. ಸಿಪ್ಪೆಗಳು: ತ್ವಚೆ ಬೇಗ ಕಳೆಗುಂದಿ ನಿರ್ಜೀವವಾಗಿ ಕಾಣುವಂತೆ ಆಗುವುದನ್ನು ತಡೆಯಲು ತರಕಾರಿ ಮತ್ತು ಹಣ್ಣಿನ ಸಿಪ್ಪೆಯ ಸೇವನೆ ಮಾಡುವುದು ಮುಖ್ಯ. ಸೇಬು, ಚೆರ್ರಿ, ದ್ರಾಕ್ಷಿ ಮುಂತಾದ ಹಣ್ಣುಗಳ ಸೇವನೆಯಿಂದ ಇದರಲ್ಲಿನ ಸುಕ್ಕು ನಿವಾರಕ ಅಂಶ ತ್ವಚೆಗೆ ತಾಜಾತನ ನೀಡುತ್ತದೆ.
4. ಸಾಂಬಾರು ಪದಾರ್ಥ: ಲವಂಗ ಮತ್ತು ಮೆಣಸಿನಲ್ಲಿ ಚರ್ಮದ ಜೀವಕಣಗಳ ಪುನರುತ್ಪತ್ತಿ ಮಾಡುವ ಅತ್ಯಮೂಲ್ಯ ಅಂಶವಿದೆ. ಇವುಗಳನ್ನು ಆದಷ್ಟೂ ಅಡುಗೆಗೆ ಹೆಚ್ಚು ಬಳಸಿ ಸೇವಿಸಿದರೆ ಸುಕ್ಕನ್ನು ಮತ್ತು ಇನ್ನಿತರ ಚರ್ಮ ಸಂಬಂಧಿ ತೊಂದರೆಗಳನ್ನು ಕಡಿಮೆಮಾಡಬಹುದು.
ಈ ಎಲ್ಲ ತರಕಾರಿ, ಹಣ್ಣು ಮತ್ತು ಸಾಂಬಾರು ಪದಾರ್ಥಗಳನ್ನು ದಿನನಿತ್ಯ ಸ್ವಲ್ಪವಾದರೂ ಬಳಸಿ ನೋಡಿ, ನಿಮ್ಮ ಚರ್ಮದಲ್ಲಿನ ಬದಲಾವಣೆ ನಿಮಗೆ ಗೋಚರವಾಗುತ್ತದೆ.



Click it and Unblock the Notifications