Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಸುಕ್ಕು ತಡೆಗಟ್ಟಲು ಇಲ್ಲಿದೆ ನೈಸರ್ಗಿಕ ಮಾರ್ಗ

ಸುಕ್ಕು ತಡೆಯಲು ಕೆಮಿಕಲ್ ಮಿಶ್ರಿತ ಕ್ರೀಂಗಳ ಮೊರೆಹೋಗುವ ಬದಲು ನೈಸರ್ಗಿಕವಾಗಿ ತ್ವಚೆಯನ್ನು ಸಂರಕ್ಷಿಸಿಕೊಳ್ಳುವ ಸುಲಭ ವಿಧಾನವೊಂದು ಇಲ್ಲಿದೆ. ನಾವು ಸೇವಿಸುವ ಆಹಾರದಿಂದಲೇ ನಮ್ಮ ಚರ್ಮದ ಮೇಲಿನ ಸುಕ್ಕುಗಳನ್ನು ನಿಯಂತ್ರಿಸಬಹುದು.
ತಾಜಾ ತ್ವಚೆಗೆ ನೈಸರ್ಗಿಕ ಮಾರ್ಗ:
1. ಹಸಿರು ತರಕಾರಿಗಳು: ಪಾಲಾಕ್, ಹೂಕೊಸು, ಕೊತ್ತಂಬರಿ, ಕರಿಬೇವು ಇನ್ನೂ ಮುಂತಾದವು ಚರ್ಮದ ರಕ್ಷಣೆಯಲ್ಲಿ ಅತಿ ಹೆಚ್ಚು ಅವಶ್ಯಕ. ಇದರಲ್ಲಿ ಹಾನಿಯುಂಟು ಮಾಡುವ ಯಾವುದೇ ಅಂಶಗಳು ಇಲ್ಲದಿರುವುದರಿಂದ ಮತ್ತು ಇವುಗಳ ನಾರಿನಂಶ ಜೀರ್ಣಕ್ರಿಯೆಯನ್ನು ಸುಲಭಗೊಳಿಸುವುದರಿಂದ ದೇಹವನ್ನೂ ಶುದ್ಧವಾಗಿಟ್ಟು, ತ್ವಚೆಯ ರಕ್ಷಣೆಗೆ ಮುಂದಾಗುತ್ತದೆ.
2. ಚರ್ಮದ ಸ್ವಾಸ್ಥ್ಯಕ್ಕೆ ವಿಟಮಿನ್: ವಿಟಮಿನ್ ಸಿ ಮತ್ತು ಇ ಇವೆರಡೂ ತ್ವಚೆ ಸುಕ್ಕುಗಟ್ಟುವುದನ್ನು ತಡೆಯುವ ಅತ್ಯಮೂಲ್ಯ ವಿಟಮಿನ್ ಗಳು. ಇವು ಚರ್ಮದ ಜೀವಕಣಗಳ ಪುನರುತ್ಪತ್ತಿಯನ್ನು ಹೆಚ್ಚುಗೊಳಿಸಿ ನಿರ್ಜೀವ ತ್ವಚೆಯನ್ನು ಸರಿಗೊಳಿಸುವಲ್ಲಿ ಸಹಾಯಕವಾಗುತ್ತದೆ. ವಿಟಮಿನ್ ಇ ತ್ವಚೆಗೆ ಎಣ್ಣೆಯಂಶ ಒದಗಿಸಿ ಚರ್ಮಕ್ಕೆ ತಾರುಣ್ಯ ನೀಡುತ್ತದೆ. ಬಿಸಿಲು, ಪ್ರದೂಷಣೆ, ಹೊಗೆ ಧೂಳಿನಿಂದ ಚರ್ಮದ ಮೇಲೆ ಹಾನಿಯಾಗದಂತೆ ತಡೆಯುತ್ತವೆ. ಕಿತ್ತಳೆ, ದ್ರಾಕ್ಷಿ, ನಿಂಬೆ, ಬಾದಾಮಿ, ಮತ್ತು ಇನ್ನಿತರ ಒಣಹಣ್ಣುಗಳ ಸೇವನೆ ತ್ವಚೆ ರಕ್ಷಣೆಗೆ ಅವಶ್ಯಕ.
3. ಸಿಪ್ಪೆಗಳು: ತ್ವಚೆ ಬೇಗ ಕಳೆಗುಂದಿ ನಿರ್ಜೀವವಾಗಿ ಕಾಣುವಂತೆ ಆಗುವುದನ್ನು ತಡೆಯಲು ತರಕಾರಿ ಮತ್ತು ಹಣ್ಣಿನ ಸಿಪ್ಪೆಯ ಸೇವನೆ ಮಾಡುವುದು ಮುಖ್ಯ. ಸೇಬು, ಚೆರ್ರಿ, ದ್ರಾಕ್ಷಿ ಮುಂತಾದ ಹಣ್ಣುಗಳ ಸೇವನೆಯಿಂದ ಇದರಲ್ಲಿನ ಸುಕ್ಕು ನಿವಾರಕ ಅಂಶ ತ್ವಚೆಗೆ ತಾಜಾತನ ನೀಡುತ್ತದೆ.
4. ಸಾಂಬಾರು ಪದಾರ್ಥ: ಲವಂಗ ಮತ್ತು ಮೆಣಸಿನಲ್ಲಿ ಚರ್ಮದ ಜೀವಕಣಗಳ ಪುನರುತ್ಪತ್ತಿ ಮಾಡುವ ಅತ್ಯಮೂಲ್ಯ ಅಂಶವಿದೆ. ಇವುಗಳನ್ನು ಆದಷ್ಟೂ ಅಡುಗೆಗೆ ಹೆಚ್ಚು ಬಳಸಿ ಸೇವಿಸಿದರೆ ಸುಕ್ಕನ್ನು ಮತ್ತು ಇನ್ನಿತರ ಚರ್ಮ ಸಂಬಂಧಿ ತೊಂದರೆಗಳನ್ನು ಕಡಿಮೆಮಾಡಬಹುದು.
ಈ ಎಲ್ಲ ತರಕಾರಿ, ಹಣ್ಣು ಮತ್ತು ಸಾಂಬಾರು ಪದಾರ್ಥಗಳನ್ನು ದಿನನಿತ್ಯ ಸ್ವಲ್ಪವಾದರೂ ಬಳಸಿ ನೋಡಿ, ನಿಮ್ಮ ಚರ್ಮದಲ್ಲಿನ ಬದಲಾವಣೆ ನಿಮಗೆ ಗೋಚರವಾಗುತ್ತದೆ.



Click it and Unblock the Notifications