Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ದಾಳಿಂಬೆಯಲ್ಲಿದೆ 3 ಸೌಂದರ್ಯವರ್ಧಕ ಗುಣಗಳು
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಮಾತ್ರವಲ್ಲದೆ ಸೌಂದರ್ಯ ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ತ್ವಚೆ ಕಪ್ಪಿರಲಿ, ಬಿಳುಪಿರಲಿ ಕಲೆರಹಿತವಾಗಿ, ಹೊಳಪಿನಿಂದ ಕೂಡಿದ್ದರೆ ನೋಡಲು ಆರ್ಷಕವಾಗಿ ಕಾಣುವಿರಿ. ದಾಳಿಂಬೆಯಲ್ಲಿ ತ್ವಚೆ ಪೋಷಣೆಗೆ ಅಗತ್ಯವಾದ ವಿಟಮಿನ್ ಸಿ ಮತ್ತು ಬಿ5, ಪೊಟಾಷ್ಯಿಯಂ ಈ ಎಲ್ಲಾ ಅಂಶಗಳಿದ್ದು ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಸಬಹುದು. ಅದರ ಜೊತೆಗೆ ನಿಮ್ಮ ಚೆಲುವನ್ನು ಹೆಚ್ಚಿಸಿಕೊಳ್ಳುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.
ಮೊಡವೆ ಬರುವುದನ್ನು ತಡೆಗಟ್ಟುತ್ತದೆ: ಯೌವನ ಪ್ರಾಯದಲ್ಲಿ ಹೆಚ್ಚಿನವರಲ್ಲಿ ಮೊಡವೆ ಸಮಸ್ಯೆ ಕಂಡು ಬರುತ್ತದೆ. ಇದನ್ನು ಬರದಂತೆ ತಡೆಯಲು ಪ್ರತಿದಿನ ಬೆಳಗ್ಗೆ ದಾಳಿಂಬೆ ಅದರ ಜ್ಯೂಸ್ ಅನ್ನು ಸೇವಿಸುತ್ತಾ ಬಂದರೆ ಒಳ್ಳೆಯದು.ಅದಲ್ಲದೆ ಇದರಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ದೂಳು ಅಥವಾ ರಾಸಾಯನಿಕಗಳು ತ್ವಚೆಯ ಮೇಲೆ ಕೆಟ್ಟ ಪ್ರಭಾವ ಬೀರುವುದನ್ನು ತಡೆಯುತ್ತದೆ.

ಮೊಡವೆ ಇರುವವರು ಇದರ ರಸವನ್ನು ಮುಖದ ಮೇಲೆ ಹಚ್ಚಿ ಅರ್ಧ ಗಂಟೆಯ ಬಳಿಕ ಮುಖ ತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಮೊಡವೆ ಕಡಿಮೆಯಾಗುವುದು ಹಾಗೂ ಅದರಿಂದ ಉಂಟಾದ ಕಲೆಯೂ ಕಡಿಮೆಯಾಗುತ್ತದೆ.
ಮುಖದಲ್ಲಿ ನೆರಿಗೆ ಬೀಳುವುದನ್ನು ತಡೆಗಟ್ಟುತ್ತದೆ: ದಾಳಿಂಬೆಯಲ್ಲಿ ಕೊಲೆಜಿನ್ ಅಂಶ ಇರುವುದರಿಂದ ತ್ವಚೆಗೆ ಉಂಟಾಗುವ ಹಾನಿಯನ್ನು ಸರಿಪಡಿಸಿ ನೆರಿಗೆ ಬೀಳುವುದನ್ನು ತಡೆಯುತ್ತದೆ. ಅಲ್ಲದೆ ತ್ವಚೆಯನ್ನು ತುಂಬಾ ಮೃದುವಾಗಿಸುತ್ತದೆ.
ಗಾಯವನ್ನು ಒಣಗಿಸುತ್ತದೆ: ದಾಳಿಂಬೆಯ ಬೀಜವನ್ನು ಗಾಯವನ್ನು ಒಣಗಿಸುವ ಸಾಮರ್ಥ್ಯ ಹೊಂದಿದೆ ಎಂದು ಸಂಶೋಧನೆಯಿಂದ ದೃಢ ಪಟ್ಟಿದೆ. ಇದರ ಬೀಜದ ಎಣ್ಣೆಯನ್ನು ಗಾಯಾವಾದ ಭಾಗಕ್ಕೆ ಹಚ್ಚುತ್ತಾ ಬಂದರೆ ಕಲೆ ಮಾಯವಾಗುವುದು.



Click it and Unblock the Notifications
