Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ದಾಳಿಂಬೆಯಲ್ಲಿದೆ 3 ಸೌಂದರ್ಯವರ್ಧಕ ಗುಣಗಳು
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಮಾತ್ರವಲ್ಲದೆ ಸೌಂದರ್ಯ ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ತ್ವಚೆ ಕಪ್ಪಿರಲಿ, ಬಿಳುಪಿರಲಿ ಕಲೆರಹಿತವಾಗಿ, ಹೊಳಪಿನಿಂದ ಕೂಡಿದ್ದರೆ ನೋಡಲು ಆರ್ಷಕವಾಗಿ ಕಾಣುವಿರಿ. ದಾಳಿಂಬೆಯಲ್ಲಿ ತ್ವಚೆ ಪೋಷಣೆಗೆ ಅಗತ್ಯವಾದ ವಿಟಮಿನ್ ಸಿ ಮತ್ತು ಬಿ5, ಪೊಟಾಷ್ಯಿಯಂ ಈ ಎಲ್ಲಾ ಅಂಶಗಳಿದ್ದು ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಸಬಹುದು. ಅದರ ಜೊತೆಗೆ ನಿಮ್ಮ ಚೆಲುವನ್ನು ಹೆಚ್ಚಿಸಿಕೊಳ್ಳುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.
ಮೊಡವೆ ಬರುವುದನ್ನು ತಡೆಗಟ್ಟುತ್ತದೆ: ಯೌವನ ಪ್ರಾಯದಲ್ಲಿ ಹೆಚ್ಚಿನವರಲ್ಲಿ ಮೊಡವೆ ಸಮಸ್ಯೆ ಕಂಡು ಬರುತ್ತದೆ. ಇದನ್ನು ಬರದಂತೆ ತಡೆಯಲು ಪ್ರತಿದಿನ ಬೆಳಗ್ಗೆ ದಾಳಿಂಬೆ ಅದರ ಜ್ಯೂಸ್ ಅನ್ನು ಸೇವಿಸುತ್ತಾ ಬಂದರೆ ಒಳ್ಳೆಯದು.ಅದಲ್ಲದೆ ಇದರಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ದೂಳು ಅಥವಾ ರಾಸಾಯನಿಕಗಳು ತ್ವಚೆಯ ಮೇಲೆ ಕೆಟ್ಟ ಪ್ರಭಾವ ಬೀರುವುದನ್ನು ತಡೆಯುತ್ತದೆ.

ಮೊಡವೆ ಇರುವವರು ಇದರ ರಸವನ್ನು ಮುಖದ ಮೇಲೆ ಹಚ್ಚಿ ಅರ್ಧ ಗಂಟೆಯ ಬಳಿಕ ಮುಖ ತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಮೊಡವೆ ಕಡಿಮೆಯಾಗುವುದು ಹಾಗೂ ಅದರಿಂದ ಉಂಟಾದ ಕಲೆಯೂ ಕಡಿಮೆಯಾಗುತ್ತದೆ.
ಮುಖದಲ್ಲಿ ನೆರಿಗೆ ಬೀಳುವುದನ್ನು ತಡೆಗಟ್ಟುತ್ತದೆ: ದಾಳಿಂಬೆಯಲ್ಲಿ ಕೊಲೆಜಿನ್ ಅಂಶ ಇರುವುದರಿಂದ ತ್ವಚೆಗೆ ಉಂಟಾಗುವ ಹಾನಿಯನ್ನು ಸರಿಪಡಿಸಿ ನೆರಿಗೆ ಬೀಳುವುದನ್ನು ತಡೆಯುತ್ತದೆ. ಅಲ್ಲದೆ ತ್ವಚೆಯನ್ನು ತುಂಬಾ ಮೃದುವಾಗಿಸುತ್ತದೆ.
ಗಾಯವನ್ನು ಒಣಗಿಸುತ್ತದೆ: ದಾಳಿಂಬೆಯ ಬೀಜವನ್ನು ಗಾಯವನ್ನು ಒಣಗಿಸುವ ಸಾಮರ್ಥ್ಯ ಹೊಂದಿದೆ ಎಂದು ಸಂಶೋಧನೆಯಿಂದ ದೃಢ ಪಟ್ಟಿದೆ. ಇದರ ಬೀಜದ ಎಣ್ಣೆಯನ್ನು ಗಾಯಾವಾದ ಭಾಗಕ್ಕೆ ಹಚ್ಚುತ್ತಾ ಬಂದರೆ ಕಲೆ ಮಾಯವಾಗುವುದು.



Click it and Unblock the Notifications