Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ದಾಳಿಂಬೆಯಲ್ಲಿದೆ 3 ಸೌಂದರ್ಯವರ್ಧಕ ಗುಣಗಳು
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಮಾತ್ರವಲ್ಲದೆ ಸೌಂದರ್ಯ ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ತ್ವಚೆ ಕಪ್ಪಿರಲಿ, ಬಿಳುಪಿರಲಿ ಕಲೆರಹಿತವಾಗಿ, ಹೊಳಪಿನಿಂದ ಕೂಡಿದ್ದರೆ ನೋಡಲು ಆರ್ಷಕವಾಗಿ ಕಾಣುವಿರಿ. ದಾಳಿಂಬೆಯಲ್ಲಿ ತ್ವಚೆ ಪೋಷಣೆಗೆ ಅಗತ್ಯವಾದ ವಿಟಮಿನ್ ಸಿ ಮತ್ತು ಬಿ5, ಪೊಟಾಷ್ಯಿಯಂ ಈ ಎಲ್ಲಾ ಅಂಶಗಳಿದ್ದು ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಸಬಹುದು. ಅದರ ಜೊತೆಗೆ ನಿಮ್ಮ ಚೆಲುವನ್ನು ಹೆಚ್ಚಿಸಿಕೊಳ್ಳುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.
ಮೊಡವೆ ಬರುವುದನ್ನು ತಡೆಗಟ್ಟುತ್ತದೆ: ಯೌವನ ಪ್ರಾಯದಲ್ಲಿ ಹೆಚ್ಚಿನವರಲ್ಲಿ ಮೊಡವೆ ಸಮಸ್ಯೆ ಕಂಡು ಬರುತ್ತದೆ. ಇದನ್ನು ಬರದಂತೆ ತಡೆಯಲು ಪ್ರತಿದಿನ ಬೆಳಗ್ಗೆ ದಾಳಿಂಬೆ ಅದರ ಜ್ಯೂಸ್ ಅನ್ನು ಸೇವಿಸುತ್ತಾ ಬಂದರೆ ಒಳ್ಳೆಯದು.ಅದಲ್ಲದೆ ಇದರಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ದೂಳು ಅಥವಾ ರಾಸಾಯನಿಕಗಳು ತ್ವಚೆಯ ಮೇಲೆ ಕೆಟ್ಟ ಪ್ರಭಾವ ಬೀರುವುದನ್ನು ತಡೆಯುತ್ತದೆ.

ಮೊಡವೆ ಇರುವವರು ಇದರ ರಸವನ್ನು ಮುಖದ ಮೇಲೆ ಹಚ್ಚಿ ಅರ್ಧ ಗಂಟೆಯ ಬಳಿಕ ಮುಖ ತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಮೊಡವೆ ಕಡಿಮೆಯಾಗುವುದು ಹಾಗೂ ಅದರಿಂದ ಉಂಟಾದ ಕಲೆಯೂ ಕಡಿಮೆಯಾಗುತ್ತದೆ.
ಮುಖದಲ್ಲಿ ನೆರಿಗೆ ಬೀಳುವುದನ್ನು ತಡೆಗಟ್ಟುತ್ತದೆ: ದಾಳಿಂಬೆಯಲ್ಲಿ ಕೊಲೆಜಿನ್ ಅಂಶ ಇರುವುದರಿಂದ ತ್ವಚೆಗೆ ಉಂಟಾಗುವ ಹಾನಿಯನ್ನು ಸರಿಪಡಿಸಿ ನೆರಿಗೆ ಬೀಳುವುದನ್ನು ತಡೆಯುತ್ತದೆ. ಅಲ್ಲದೆ ತ್ವಚೆಯನ್ನು ತುಂಬಾ ಮೃದುವಾಗಿಸುತ್ತದೆ.
ಗಾಯವನ್ನು ಒಣಗಿಸುತ್ತದೆ: ದಾಳಿಂಬೆಯ ಬೀಜವನ್ನು ಗಾಯವನ್ನು ಒಣಗಿಸುವ ಸಾಮರ್ಥ್ಯ ಹೊಂದಿದೆ ಎಂದು ಸಂಶೋಧನೆಯಿಂದ ದೃಢ ಪಟ್ಟಿದೆ. ಇದರ ಬೀಜದ ಎಣ್ಣೆಯನ್ನು ಗಾಯಾವಾದ ಭಾಗಕ್ಕೆ ಹಚ್ಚುತ್ತಾ ಬಂದರೆ ಕಲೆ ಮಾಯವಾಗುವುದು.



Click it and Unblock the Notifications