Latest Updates
-
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್!
ಸೌಂದರ್ಯದ ರಕ್ಷಣಾ ಕವಚ ಲೋಳೆಸರ

ತ್ವಚೆ ಪೋಷಣೆ ಮಾಡುತ್ತಾ ಸೌಂದರ್ಯ ಹೆಚ್ಚಿಸುವಲ್ಲಿ ಲೋಳೆಸರ ಹೇಗೆ ಸಹಕಾರಿಯಾಗಿದೆ ಎಂದು ತಿಳಿಯೋಣ ಬನ್ನಿ.
ಸಲಹೆ: ಲೋಳೆಸರ ಬಳಸುವ ಮುನ್ನ ಮುಖದಲ್ಲಿರುವ ಕ್ರೀಮ್, ಅಲಂಕಾರಗಳನ್ನು ತಣ್ಣೀರಿನಿಂದ ತೊಳೆದು ಸ್ವಚ್ಛಗೊಳಿಸಬೇಕು.
1. ಸೂಕ್ತವಾದ ತ್ವಚೆ: ಲೋಳೆಸರ ಎಲ್ಲಾ ರೀತಿಯ ತ್ವಚೆಗೂ ಬಳಸಲು ಸೂಕ್ತವಾಗಿದೆ. ಲೋಳೆಸರ ಬಳಿಸಿದರೆ ಬೆವರಿನ ದುರ್ಗಂಧ ಮಾಯವಾಗಿ, ತ್ವಚೆಯನ್ನು ತಂಪಾಗಿ ಇಡುತ್ತದೆ. ಲೋಳೆಸರಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ಮುಖ ತೊಳೆದರೆ ಸನ್ ಬರ್ನ್ ಕಡಿಮೆಯಾಗುತ್ತದೆ. ಬಿಸಿಲಿಗೆ ಹೋಗಿ ಬಂದಾಗ ಈ ರೀತಿ ಮಾಡಿದರೆ ಮುಖ ಕಪ್ಪಾಗುವುದಿಲ್ಲ.
2. ತ್ವಚೆ ಕೋಮಲತೆ : ಇದನ್ನು ಹಚ್ಚುವಾಗ ವೃತ್ತಾಕಾವಾಗಿ ಹಚ್ಚುವುದರಿಂದ ರಕ್ತಚಲನೆಗೂ ಸಹಕಾರಿಯಾಗುತ್ತದೆ. ಇದನ್ನು ಹಚ್ಚುತ್ತಿದ್ದರೆ ಬೇಗನೆ ಮುಪ್ಪಾಗುವುದನ್ನು ತಡೆಯುತ್ತದೆ. ಅಲ್ಲದೆ ಇದನ್ನು ಮುಖಕ್ಕೆ ಹಚ್ಚಿದರೆ ನಿರ್ಜೀವ ತ್ವಚೆಯನ್ನು ಹೋಗಲಾಡಿಸಿ ಮುಖದ ಕಾಂತಿ ಹೆಚ್ಚಿಸುತ್ತದೆ.
3. ಮೊಡವೆ: ಲೋಳೆಸರದ ಒಂದು ಕಡ್ಡಿಯನ್ನು ತೆಗೆದುಕೊಂಡು ನೀರಿನಲ್ಲಿ ಬೇಯಿಸಬೇಕು, ನಂತರ ಲೋಳೆಸರವನ್ನು ಪೇಸ್ಟ್ ರೀತಿ ಮಾಡಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಮಿಶ್ರ ಮಾಡಿ ಮೊಡವೆಗೆ ಹಚ್ಚಿ 15 ನಿಮಿಷದ ಬಳಿಕ ಮುಖ ತೊಳೆದರೆ ಮೊಡವೆ ಮತ್ತು ಅದರ ಕಲೆಗಳು ಕಡಿಮೆಯಾಗುತ್ತದೆ.
4. ಮುಖದಲ್ಲಿ ಗುಳ್ಳೆಗಳಾದರೆ: ಲೋಳೆಸರ ಮತ್ತು ಸೌತೆಕಾಯಿಯನ್ನು ಪೇಸ್ಟ್ ರೀತಿ ಮಾಡಿ ಅದನ್ನು ಮೊಸರಿನ ಜೊತೆ ಮಿಶ್ರ ಮಾಡಿ ಹಚ್ಚಿದರೆ ಗುಳ್ಳೆಗಳು ಕಡಿಮೆಯಾಗುವುದು. ಅಲ್ಲದೆ ಕಲೆಗಳು ಬೀಳುವುದಿಲ್ಲ.
5. ಚರ್ಮದ ರಕ್ಷಣೆ: ಲೋಳೆಸರವನ್ನು ಹೊಟ್ಟೆಗೆ ಸೇವಿಸುವುದರಿಂದ ಮಲಬದ್ದತೆ ನಿವಾರಣೆ,ಜ್ವರದಿಂದ ಮುಕ್ತಿ, ಜಠರದ ಹುಣ್ಣುಗಳ ನಿವಾರಣೆ ಸಾಧ್ಯ. ಚರ್ಮ ರೋಗ, ಉರಿ, ತುರಿಕೆ, ಗಾಯದ ಕಲೆಗಳನ್ನು ಗುಣಪಡಿಸುತ್ತದೆ.
6. ಕೂದಲು: ಲೋಳೆಸರವನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ಕೂದಲು ಉದುರುವುದು ನಿಲ್ಲುವುದು. ಅಲ್ಲದೆ ಕೂದಲು ಮೃದುವಾಗುವುದು.



Click it and Unblock the Notifications