Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಸೌಂದರ್ಯದ ರಕ್ಷಣಾ ಕವಚ ಲೋಳೆಸರ

ತ್ವಚೆ ಪೋಷಣೆ ಮಾಡುತ್ತಾ ಸೌಂದರ್ಯ ಹೆಚ್ಚಿಸುವಲ್ಲಿ ಲೋಳೆಸರ ಹೇಗೆ ಸಹಕಾರಿಯಾಗಿದೆ ಎಂದು ತಿಳಿಯೋಣ ಬನ್ನಿ.
ಸಲಹೆ: ಲೋಳೆಸರ ಬಳಸುವ ಮುನ್ನ ಮುಖದಲ್ಲಿರುವ ಕ್ರೀಮ್, ಅಲಂಕಾರಗಳನ್ನು ತಣ್ಣೀರಿನಿಂದ ತೊಳೆದು ಸ್ವಚ್ಛಗೊಳಿಸಬೇಕು.
1. ಸೂಕ್ತವಾದ ತ್ವಚೆ: ಲೋಳೆಸರ ಎಲ್ಲಾ ರೀತಿಯ ತ್ವಚೆಗೂ ಬಳಸಲು ಸೂಕ್ತವಾಗಿದೆ. ಲೋಳೆಸರ ಬಳಿಸಿದರೆ ಬೆವರಿನ ದುರ್ಗಂಧ ಮಾಯವಾಗಿ, ತ್ವಚೆಯನ್ನು ತಂಪಾಗಿ ಇಡುತ್ತದೆ. ಲೋಳೆಸರಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ಮುಖ ತೊಳೆದರೆ ಸನ್ ಬರ್ನ್ ಕಡಿಮೆಯಾಗುತ್ತದೆ. ಬಿಸಿಲಿಗೆ ಹೋಗಿ ಬಂದಾಗ ಈ ರೀತಿ ಮಾಡಿದರೆ ಮುಖ ಕಪ್ಪಾಗುವುದಿಲ್ಲ.
2. ತ್ವಚೆ ಕೋಮಲತೆ : ಇದನ್ನು ಹಚ್ಚುವಾಗ ವೃತ್ತಾಕಾವಾಗಿ ಹಚ್ಚುವುದರಿಂದ ರಕ್ತಚಲನೆಗೂ ಸಹಕಾರಿಯಾಗುತ್ತದೆ. ಇದನ್ನು ಹಚ್ಚುತ್ತಿದ್ದರೆ ಬೇಗನೆ ಮುಪ್ಪಾಗುವುದನ್ನು ತಡೆಯುತ್ತದೆ. ಅಲ್ಲದೆ ಇದನ್ನು ಮುಖಕ್ಕೆ ಹಚ್ಚಿದರೆ ನಿರ್ಜೀವ ತ್ವಚೆಯನ್ನು ಹೋಗಲಾಡಿಸಿ ಮುಖದ ಕಾಂತಿ ಹೆಚ್ಚಿಸುತ್ತದೆ.
3. ಮೊಡವೆ: ಲೋಳೆಸರದ ಒಂದು ಕಡ್ಡಿಯನ್ನು ತೆಗೆದುಕೊಂಡು ನೀರಿನಲ್ಲಿ ಬೇಯಿಸಬೇಕು, ನಂತರ ಲೋಳೆಸರವನ್ನು ಪೇಸ್ಟ್ ರೀತಿ ಮಾಡಿ ಅದಕ್ಕೆ ಸ್ವಲ್ಪ ಜೇನು ಸೇರಿಸಿ ಮಿಶ್ರ ಮಾಡಿ ಮೊಡವೆಗೆ ಹಚ್ಚಿ 15 ನಿಮಿಷದ ಬಳಿಕ ಮುಖ ತೊಳೆದರೆ ಮೊಡವೆ ಮತ್ತು ಅದರ ಕಲೆಗಳು ಕಡಿಮೆಯಾಗುತ್ತದೆ.
4. ಮುಖದಲ್ಲಿ ಗುಳ್ಳೆಗಳಾದರೆ: ಲೋಳೆಸರ ಮತ್ತು ಸೌತೆಕಾಯಿಯನ್ನು ಪೇಸ್ಟ್ ರೀತಿ ಮಾಡಿ ಅದನ್ನು ಮೊಸರಿನ ಜೊತೆ ಮಿಶ್ರ ಮಾಡಿ ಹಚ್ಚಿದರೆ ಗುಳ್ಳೆಗಳು ಕಡಿಮೆಯಾಗುವುದು. ಅಲ್ಲದೆ ಕಲೆಗಳು ಬೀಳುವುದಿಲ್ಲ.
5. ಚರ್ಮದ ರಕ್ಷಣೆ: ಲೋಳೆಸರವನ್ನು ಹೊಟ್ಟೆಗೆ ಸೇವಿಸುವುದರಿಂದ ಮಲಬದ್ದತೆ ನಿವಾರಣೆ,ಜ್ವರದಿಂದ ಮುಕ್ತಿ, ಜಠರದ ಹುಣ್ಣುಗಳ ನಿವಾರಣೆ ಸಾಧ್ಯ. ಚರ್ಮ ರೋಗ, ಉರಿ, ತುರಿಕೆ, ಗಾಯದ ಕಲೆಗಳನ್ನು ಗುಣಪಡಿಸುತ್ತದೆ.
6. ಕೂದಲು: ಲೋಳೆಸರವನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ಕೂದಲು ಉದುರುವುದು ನಿಲ್ಲುವುದು. ಅಲ್ಲದೆ ಕೂದಲು ಮೃದುವಾಗುವುದು.



Click it and Unblock the Notifications