Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ತ್ವಚೆಗೆ ತಕ್ಕಂತೆ ಆರೈಕೆ ಹೆಚ್ಚಿಸುವುದು ಸೌಂದರ್ಯ

ಸಾಮಾನ್ಯ ತ್ವಚೆ ಆರೈಕೆ:
1. 1 ಕ್ಯಾರೆಟ್ ತುರಿ, ಅರ್ಧ ಮೊಟ್ಟೆಯ ಬಿಳಿಭಾಗ, ಸ್ವಲ್ಪ ಹಾಲು ಇವುಗಳನ್ನು ಚೆನ್ನಾಗಿ ಮಿಶ್ರಮಾಡಿ ಮುಖಕ್ಕೆ 15 ನಿಮಿಷದ ಬಳಿಕ ತೊಳೆದರೆ ಮುಖದ ಕಾಂತಿ ಹೆಚ್ಚುತ್ತದೆ.
2. 8 ಬಾದಾಮಿ ರಾತ್ರಿ ನೀರಲ್ಲಿ ತೊಳೆದು ನೆನೆಸಿ ಅದೇ ನೀರಲ್ಲಿ ಗುಲಾಬಿ ದಳಗಳೊಂದಿಗೆ ಅರೆಯಬೇಕು. ಇದಕ್ಕೆ ಶುದ್ಧ ಪಚ್ಚ ಕರ್ಪೂರ ಚಿಟಿಕೆಯಷ್ಟು ಬೆರೆಸಿ ಮುಖಕ್ಕೆ ಲೇಪಿಸಿ ಮೃದುವಾಗಿ ಮಸಾಜು ಮಾಡಿ 20 ನಿಮಿಷದ ಬಳಿಕ ಮತ್ತೆ ಮಸಾಜು ಮಾಡಿ ತೊಳೆಯಬೇಕು. ಈ ರೀತಿ ಮಾಡಿದರೆ ಮುಖದ ಕಾಂತಿ ಹೆಚ್ಚುವುದು.
3. 15 - 20 ತುಳಸೀ ಎಲೆ, 15 ಕರಿಬೇವು, 15 - 20 ಪುದೀನಾ ಎಲೆಗಳನ್ನು ಅರೆದು, ಸೌತೆಕಾಯಿಯ ರಸ ಬೆರೆಸಿ ಲೇಪ ತಯಾರಿಸಿ ಮುಖಕ್ಕೆ ಲೇಪಿಸಿ 20 ನಿಮಿಷದ ಬಳಿಕ ತೊಳೆದರೆ ಸಾಮಾನ್ಯ ತ್ವಚೆ ಮೇಲೆ ಉತ್ತಮವಾದ ಪರಿಣಾಮ ಬೀಳುತ್ತದೆ.
4. ಬಾಳೆಹಣ್ಣು ಹಾಗೂ ಸ್ಟ್ರಾಬೆರಿ ಹಣ್ಣನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿದರೆ ಮತ್ತು ಈ ಹಣ್ಣುಗಳ ಜ್ಯೂಸ್ ಕುಡಿದರೆ ಮುಖದ ಹೊಳಪು ಹೆಚ್ಚುವುದು.
5. ಸಾಮಾನ್ಯ ತ್ವಚೆ ಇರುವವರು ಎಳನೀರಿಗೆ ಹತ್ತಿಯ ಉಂಡೆಯನ್ನು ಅದ್ದಿ ಮುಖವನ್ನು ಕ್ಲೆನ್ಸ್ ಮಾಡಿದರೆ ಚರ್ಮ ತಾಜಾ ಆಗಿ ಹೊಳೆಯುತ್ತದೆ.
ಎಣ್ಣೆ ತ್ವಚೆಯ ಆರೈಕೆ:
1. ರಕ್ತಚಂದನವನ್ನು ನೀರಿನಲ್ಲಿ ತೇದಿ ಅದಕ್ಕೆ 4 ಚಮಚ ರೋಸ್ ವಾಟರ್ ಬೆರೆಸಿ ಲೇಪ ತಯಾರಿಸಿ ಮುಖಕ್ಕೆ ಹಚ್ಚಿದರೆ ಮುಖದ ಜಿಡ್ಡು ನಿವಾರಣೆಯಾಗುತ್ತದೆ.
2. ಮುಲ್ತಾನಿಮಿಟ್ಟಿ ( ಫುಲ್ಲರ್ ಅರ್ತ್ ) ಪೌಡರನ್ನು ಹಾಲಿನೊಂದಿಗೆ ಚೆನ್ನಾಗಿ ಮಿಶ್ರಮಾಡಿ ಮುಖ, ಕತ್ತು, ಕೈಕಾಲುಗಳಿಗೆ ಹಚ್ಚಿ 19-20 ನಿಮಿಷ ಬಿಟ್ಟು ತೊಳೆದರೆ ಚರ್ಮದ ಹೊಳಪು ಹೆಚ್ಚುತ್ತದೆ.
3. ಸೇಬು ಹಣ್ಣಿನ ತಿರುಳಿಗೆ ಒಂದು ನಿಂಬೆಹಣ್ಣಿನ ರಸ ಬೆರೆಸಿ ಮುಖಕ್ಕೆ ಲೇಪಿಸಿದರೆ ಒಳ್ಳೆಯದು.
4. ಮುಖ ತುಂಬಾ ಜಿಡ್ಡಾಗಿದ್ದರೆ 2 ಚಮಚ ರೋಸ್ ವಾಟರ್ ಅನ್ನು 4 ಚಮಚ ಐಸ್ ನೀರಿಗೆ ಬೆರೆಸಿ ಅದಕ್ಕೆ ಹತ್ತಿಯ ಉಂಡೆಯನ್ನು ಅದ್ದಿ ಮುಖವನ್ನು ಶುಚಿಗೊಳಿಸಿದರೆ ಮುಖ ತಾಜಾತನದಿಂದ ಹೊಳೆಯುತ್ತದೆ.
5. ಅಧಿಕ ಜಿಡ್ಡಿನಂಶ ಇರುವವರು ಪುದೀನಾ ರಸ ಮತ್ತು ರೋಸ್ ವಾಟರ್ ಬೆರೆಸಿ ಮುಖಕ್ಕೆ ಹಚ್ಚಿ ನಂತರ ಮುಖ ತೊಳೆದರೆ ಎಣ್ಣೆ ತ್ವಚೆ ನಿವಾರಣೆಯಾಗುವುದು.
ಶುಷ್ಕ ತ್ವಚೆಯ ಆರೈಕೆ
1. ಸೀಬೆ ಹಣ್ಣಿನ ತಿರುಳಿಗೆ ಜೇನು ಬೆರೆಸಿ ಮಿಶ್ರ ಮಾಡಿ ಈ ಲೇಪನವನ್ನು ಹಚ್ಚಿ 20 ನಿಮಿಷದ ಬಳಿಕ ತೊಳೆದರೆ ಒಣ ಚರ್ಮ ಸಮಸ್ಯೆ ನಿವಾರಣೆಯಾಗುತ್ತದೆ.
2. ಹಾಲಿನ ಕೆನೆಯನ್ನು ಹಚ್ಚಿದರೆ ಮುಖ ನುಣಪನ್ನು ಪಡೆಯುತ್ತದೆ. ಹಾಲಿನ ಕೆನೆಗೆ ಜೇನು ತುಪ್ಪ ಬೇಕಾದರೂ ಸೇರಿಸಬಹುದು.
3. ಬಾಳೆಹಣ್ಣಿಗೆ ಸ್ವಲ್ಪ ಮೊಸರು ಮಿಶ್ರ ಮಾಡಿ ಮುಖಕ್ಕೆ ದಪ್ಪವಾಗಿ ಹಚ್ಚಿದರೆ ಒಳ್ಳೆಯದು.
4. ರೋಸ್ ವಾಟರ್ ನಿಂದ ಕ್ಲೆನ್ಸ್ ಮಾಡುವುದು ತುಂಬಾ ಒಳ್ಳೆಯದು.
5. ತ್ವಚೆ ಸ್ವಲ್ಪ ಬಾಡಿದಾಗ ತಾಜಾ ಹಾಲಿನ ಕೆನೆಗೆ ಸ್ವಲ್ಪ ಜೇನುತುಪ್ಪ ಮಿಶ್ರ ಮಾಡಿ ಹಚ್ಚಿ 1 ಗಂಟೆಯ ಬಳಿಕ ಸ್ನಾನ ಮಾಡಿದರೆ ಚರ್ಮ ಹೊಳಪನ್ನು ಪಡೆಯುತ್ತದೆ.



Click it and Unblock the Notifications