Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕೂದಲಿನ ಪೋಷಣೆಗೆ ಬಾಹ್ಯ ಮತ್ತು ಆಂತರಿಕ ಆರೈಕೆ

ಪೋಷಕಾಂಶಗಳ ಕೊರತೆಯಿಂದ ಶಕ್ತಿಯ ಕೊರತೆ ಉಂಟಾಗಿ ವಯಸ್ಸಾದ ಮೇಲೆ ಕೂದಲು ಉದುರಲಾರಂಭಿಸಿದರೆ, ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರಲಾರಂಭಿಸುತ್ತದೆ. ಹೀಗೆ ಕೂದಲು ಉದುರುವಾಗ ಆಹಾರಕ್ರಮದ ಬಗ್ಗೆ ನಿಗಾ ವಹಿಸಿದರೆ ಅಂದರೆ ಪೋಷಕಾಂಶವಿರುವ ಆಹಾರಗಳ ಸೇವನೆ ಮಾಡಿದರೆ ಸಾಕು ಉತ್ತಮ ಪ್ರಯೋಜನವನ್ನು ಪಡೆಯಬಹುದು. ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ.
ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಈ ಕೆಳಗಿನ ಸಲಹೆಯನ್ನು ಪಾಲಿಸಿದರೆ ಒಳ್ಳೆಯದು.
* ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿಗಳನ್ನು ತಿನ್ನಬಾರದು. ಒತ್ತಡವನ್ನು ಆದಷ್ಟು ತಡೆಗಟ್ಟಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಮಾಡಿದರೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.
* ಪ್ರತಿದಿನವೂ ತಲೆಗೆ ತಣ್ಣೀರಿನ ಸ್ನಾನ ಒಳ್ಳೆಯದು. ಹದ ಬಿಸಿ ನೀರಾದರೂ ಆಗುತ್ತೆ. ತುಂಬಾ ಬಿಸಿಯಿರುವ ನೀರು ಹಾಕಿದರೆ ಕೂದಲು ಹಾಳಾಗುವುದು.
* ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ, ಬಾದಮಿ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲೀವ್ ಎಣ್ಣೆ ಹಚ್ಚಿ ಬಾಚುತ್ತಿರಬೇಕು.
* ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡಿದರೆ ಕೂದಲಿಗೂ ಆರೋಗ್ಯಕ್ಕೂ ಒಳ್ಳೆಯದು.
ಅಲ್ಲದೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಕೂದಲು ಉದುರುವುದನ್ನು ಸಂಪೂರ್ಣವಾಗಿ ತಡೆಯಬಹುದು.
* ತೆಂಗಿನ ಎಣ್ಣೆಗೆ ಒಂದು ಟೀ ಚಮಚ ನಿಂಬೆ ರಸ ಹಿಂಡಿ. ನಂತರ, ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚಿ ತಲೆ ತೊಳೆದರೆ ಹೊಟ್ಟು ನಿವಾರಣೆಯಾಗುತ್ತದೆ, ಕೂದಲೂ ಚೆನ್ನಾಗಿ ಬೆಳೆಯುತ್ತದೆ.
* ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಬೇಕು. ಈ ರೀತಿ ವಾರದಲ್ಲಿ 2-3 ಬಾರಿ ಮಾಡಬೇಕು.
* ಮೆಂತೆಯನ್ನು ಅರೆದು ತೆಂಗಿನ ಹಾಲಿನೊಂದಿಗೆ ಮಿಶ್ರ ಮಾಡಬೇಕು. ನಂತರ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ
* ಬೇವಿನ ಎಲೆಗಳನ್ನು ಎಣ್ನೆಯಲ್ಲಿ ಕುದಿಸಿ ತಲೆಗೆ ಹಚ್ಚುವುದು ಒಳ್ಳೆಯದು. ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.ಹಚ್ಚುವುದಾದರೆ ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಹಚ್ಚಿದರೆ ಒಳ್ಳೆಯದು.
ದೇಹಕ್ಕೆ ಅಗತ್ಯವಾದ ವಿಟಮಿನ್ ಗ ಪೂರೈಕೆ ಮತ್ತು ಬಾಹ್ಯವಾಗಿ ಕೂದಲಿಗೆ ಪೋಷಣೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.



Click it and Unblock the Notifications