Latest Updates
-
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ? -
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದಲ್ಲಿ ಟಾಟಾ ಮುಂಬೈ ಮ್ಯಾರಥಾನ್ 2027 ತಯಾರಿ: ಸುರಕ್ಷಿತವಾಗಿ ಓಡಲು 14 ನಿಮಿಷಗಳ ಬೆಸ್ಟ್ ವರ್ಕೌಟ್ ಟಿಪ್ಸ್ -
ಬೆಕ್ಕು ಸಾಕುವ ದಂಪತಿಗಳೇ ಎಚ್ಚರ! ಜಗಳ ತಪ್ಪಿಸಲು ಈ 'ಪೆಟ್-ಕೇರ್ ಒಪ್ಪಂದ' ಕಡ್ಡಾಯ -
ಮಳೆಗಾಲದಲ್ಲೂ ಬಾಡದ ಹೂವುಗಳು: ಶ್ರಾವಣ ಸೋಮವಾರದ ಪೂಜೆಗೆ ಸುಲಭ ಮತ್ತು ಪರಿಸರ ಸ್ನೇಹಿ ಅಲಂಕಾರ ಐಡಿಯಾಗಳು -
ಕಾಮಿಕಾ ಏಕಾದಶಿ 2026: ಉಪವಾಸದ ವೇಳೆ ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ, ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ -
ರಾಷ್ಟ್ರೀಯ ಕೈಮಗ್ಗ ದಿನ: ನೇಕಾರರ ಹೆಗಲು-ಮಣಿಕಟ್ಟು ನೋವು ಮರೆಸುವ 12 ನಿಮಿಷದ ಸರಳ ಮಂತ್ರ! -
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ!
ಕೂದಲಿನ ಪೋಷಣೆಗೆ ಬಾಹ್ಯ ಮತ್ತು ಆಂತರಿಕ ಆರೈಕೆ

ಪೋಷಕಾಂಶಗಳ ಕೊರತೆಯಿಂದ ಶಕ್ತಿಯ ಕೊರತೆ ಉಂಟಾಗಿ ವಯಸ್ಸಾದ ಮೇಲೆ ಕೂದಲು ಉದುರಲಾರಂಭಿಸಿದರೆ, ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರಲಾರಂಭಿಸುತ್ತದೆ. ಹೀಗೆ ಕೂದಲು ಉದುರುವಾಗ ಆಹಾರಕ್ರಮದ ಬಗ್ಗೆ ನಿಗಾ ವಹಿಸಿದರೆ ಅಂದರೆ ಪೋಷಕಾಂಶವಿರುವ ಆಹಾರಗಳ ಸೇವನೆ ಮಾಡಿದರೆ ಸಾಕು ಉತ್ತಮ ಪ್ರಯೋಜನವನ್ನು ಪಡೆಯಬಹುದು. ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ.
ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಈ ಕೆಳಗಿನ ಸಲಹೆಯನ್ನು ಪಾಲಿಸಿದರೆ ಒಳ್ಳೆಯದು.
* ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿಗಳನ್ನು ತಿನ್ನಬಾರದು. ಒತ್ತಡವನ್ನು ಆದಷ್ಟು ತಡೆಗಟ್ಟಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಮಾಡಿದರೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.
* ಪ್ರತಿದಿನವೂ ತಲೆಗೆ ತಣ್ಣೀರಿನ ಸ್ನಾನ ಒಳ್ಳೆಯದು. ಹದ ಬಿಸಿ ನೀರಾದರೂ ಆಗುತ್ತೆ. ತುಂಬಾ ಬಿಸಿಯಿರುವ ನೀರು ಹಾಕಿದರೆ ಕೂದಲು ಹಾಳಾಗುವುದು.
* ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ, ಬಾದಮಿ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲೀವ್ ಎಣ್ಣೆ ಹಚ್ಚಿ ಬಾಚುತ್ತಿರಬೇಕು.
* ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡಿದರೆ ಕೂದಲಿಗೂ ಆರೋಗ್ಯಕ್ಕೂ ಒಳ್ಳೆಯದು.
ಅಲ್ಲದೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಕೂದಲು ಉದುರುವುದನ್ನು ಸಂಪೂರ್ಣವಾಗಿ ತಡೆಯಬಹುದು.
* ತೆಂಗಿನ ಎಣ್ಣೆಗೆ ಒಂದು ಟೀ ಚಮಚ ನಿಂಬೆ ರಸ ಹಿಂಡಿ. ನಂತರ, ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚಿ ತಲೆ ತೊಳೆದರೆ ಹೊಟ್ಟು ನಿವಾರಣೆಯಾಗುತ್ತದೆ, ಕೂದಲೂ ಚೆನ್ನಾಗಿ ಬೆಳೆಯುತ್ತದೆ.
* ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಬೇಕು. ಈ ರೀತಿ ವಾರದಲ್ಲಿ 2-3 ಬಾರಿ ಮಾಡಬೇಕು.
* ಮೆಂತೆಯನ್ನು ಅರೆದು ತೆಂಗಿನ ಹಾಲಿನೊಂದಿಗೆ ಮಿಶ್ರ ಮಾಡಬೇಕು. ನಂತರ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ
* ಬೇವಿನ ಎಲೆಗಳನ್ನು ಎಣ್ನೆಯಲ್ಲಿ ಕುದಿಸಿ ತಲೆಗೆ ಹಚ್ಚುವುದು ಒಳ್ಳೆಯದು. ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.ಹಚ್ಚುವುದಾದರೆ ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಹಚ್ಚಿದರೆ ಒಳ್ಳೆಯದು.
ದೇಹಕ್ಕೆ ಅಗತ್ಯವಾದ ವಿಟಮಿನ್ ಗ ಪೂರೈಕೆ ಮತ್ತು ಬಾಹ್ಯವಾಗಿ ಕೂದಲಿಗೆ ಪೋಷಣೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.



Click it and Unblock the Notifications