Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಕೂದಲಿನ ಪೋಷಣೆಗೆ ಬಾಹ್ಯ ಮತ್ತು ಆಂತರಿಕ ಆರೈಕೆ

ಪೋಷಕಾಂಶಗಳ ಕೊರತೆಯಿಂದ ಶಕ್ತಿಯ ಕೊರತೆ ಉಂಟಾಗಿ ವಯಸ್ಸಾದ ಮೇಲೆ ಕೂದಲು ಉದುರಲಾರಂಭಿಸಿದರೆ, ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರಲಾರಂಭಿಸುತ್ತದೆ. ಹೀಗೆ ಕೂದಲು ಉದುರುವಾಗ ಆಹಾರಕ್ರಮದ ಬಗ್ಗೆ ನಿಗಾ ವಹಿಸಿದರೆ ಅಂದರೆ ಪೋಷಕಾಂಶವಿರುವ ಆಹಾರಗಳ ಸೇವನೆ ಮಾಡಿದರೆ ಸಾಕು ಉತ್ತಮ ಪ್ರಯೋಜನವನ್ನು ಪಡೆಯಬಹುದು. ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ.
ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಈ ಕೆಳಗಿನ ಸಲಹೆಯನ್ನು ಪಾಲಿಸಿದರೆ ಒಳ್ಳೆಯದು.
* ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿಗಳನ್ನು ತಿನ್ನಬಾರದು. ಒತ್ತಡವನ್ನು ಆದಷ್ಟು ತಡೆಗಟ್ಟಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಮಾಡಿದರೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.
* ಪ್ರತಿದಿನವೂ ತಲೆಗೆ ತಣ್ಣೀರಿನ ಸ್ನಾನ ಒಳ್ಳೆಯದು. ಹದ ಬಿಸಿ ನೀರಾದರೂ ಆಗುತ್ತೆ. ತುಂಬಾ ಬಿಸಿಯಿರುವ ನೀರು ಹಾಕಿದರೆ ಕೂದಲು ಹಾಳಾಗುವುದು.
* ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ, ಬಾದಮಿ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲೀವ್ ಎಣ್ಣೆ ಹಚ್ಚಿ ಬಾಚುತ್ತಿರಬೇಕು.
* ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡಿದರೆ ಕೂದಲಿಗೂ ಆರೋಗ್ಯಕ್ಕೂ ಒಳ್ಳೆಯದು.
ಅಲ್ಲದೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಕೂದಲು ಉದುರುವುದನ್ನು ಸಂಪೂರ್ಣವಾಗಿ ತಡೆಯಬಹುದು.
* ತೆಂಗಿನ ಎಣ್ಣೆಗೆ ಒಂದು ಟೀ ಚಮಚ ನಿಂಬೆ ರಸ ಹಿಂಡಿ. ನಂತರ, ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚಿ ತಲೆ ತೊಳೆದರೆ ಹೊಟ್ಟು ನಿವಾರಣೆಯಾಗುತ್ತದೆ, ಕೂದಲೂ ಚೆನ್ನಾಗಿ ಬೆಳೆಯುತ್ತದೆ.
* ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಬೇಕು. ಈ ರೀತಿ ವಾರದಲ್ಲಿ 2-3 ಬಾರಿ ಮಾಡಬೇಕು.
* ಮೆಂತೆಯನ್ನು ಅರೆದು ತೆಂಗಿನ ಹಾಲಿನೊಂದಿಗೆ ಮಿಶ್ರ ಮಾಡಬೇಕು. ನಂತರ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ
* ಬೇವಿನ ಎಲೆಗಳನ್ನು ಎಣ್ನೆಯಲ್ಲಿ ಕುದಿಸಿ ತಲೆಗೆ ಹಚ್ಚುವುದು ಒಳ್ಳೆಯದು. ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.ಹಚ್ಚುವುದಾದರೆ ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಹಚ್ಚಿದರೆ ಒಳ್ಳೆಯದು.
ದೇಹಕ್ಕೆ ಅಗತ್ಯವಾದ ವಿಟಮಿನ್ ಗ ಪೂರೈಕೆ ಮತ್ತು ಬಾಹ್ಯವಾಗಿ ಕೂದಲಿಗೆ ಪೋಷಣೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.



Click it and Unblock the Notifications