Latest Updates
-
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್
ಕೂದಲಿನ ಪೋಷಣೆಗೆ ಬಾಹ್ಯ ಮತ್ತು ಆಂತರಿಕ ಆರೈಕೆ

ಪೋಷಕಾಂಶಗಳ ಕೊರತೆಯಿಂದ ಶಕ್ತಿಯ ಕೊರತೆ ಉಂಟಾಗಿ ವಯಸ್ಸಾದ ಮೇಲೆ ಕೂದಲು ಉದುರಲಾರಂಭಿಸಿದರೆ, ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರಲಾರಂಭಿಸುತ್ತದೆ. ಹೀಗೆ ಕೂದಲು ಉದುರುವಾಗ ಆಹಾರಕ್ರಮದ ಬಗ್ಗೆ ನಿಗಾ ವಹಿಸಿದರೆ ಅಂದರೆ ಪೋಷಕಾಂಶವಿರುವ ಆಹಾರಗಳ ಸೇವನೆ ಮಾಡಿದರೆ ಸಾಕು ಉತ್ತಮ ಪ್ರಯೋಜನವನ್ನು ಪಡೆಯಬಹುದು. ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ.
ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಈ ಕೆಳಗಿನ ಸಲಹೆಯನ್ನು ಪಾಲಿಸಿದರೆ ಒಳ್ಳೆಯದು.
* ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿಗಳನ್ನು ತಿನ್ನಬಾರದು. ಒತ್ತಡವನ್ನು ಆದಷ್ಟು ತಡೆಗಟ್ಟಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಮಾಡಿದರೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.
* ಪ್ರತಿದಿನವೂ ತಲೆಗೆ ತಣ್ಣೀರಿನ ಸ್ನಾನ ಒಳ್ಳೆಯದು. ಹದ ಬಿಸಿ ನೀರಾದರೂ ಆಗುತ್ತೆ. ತುಂಬಾ ಬಿಸಿಯಿರುವ ನೀರು ಹಾಕಿದರೆ ಕೂದಲು ಹಾಳಾಗುವುದು.
* ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ, ಬಾದಮಿ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲೀವ್ ಎಣ್ಣೆ ಹಚ್ಚಿ ಬಾಚುತ್ತಿರಬೇಕು.
* ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡಿದರೆ ಕೂದಲಿಗೂ ಆರೋಗ್ಯಕ್ಕೂ ಒಳ್ಳೆಯದು.
ಅಲ್ಲದೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಕೂದಲು ಉದುರುವುದನ್ನು ಸಂಪೂರ್ಣವಾಗಿ ತಡೆಯಬಹುದು.
* ತೆಂಗಿನ ಎಣ್ಣೆಗೆ ಒಂದು ಟೀ ಚಮಚ ನಿಂಬೆ ರಸ ಹಿಂಡಿ. ನಂತರ, ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚಿ ತಲೆ ತೊಳೆದರೆ ಹೊಟ್ಟು ನಿವಾರಣೆಯಾಗುತ್ತದೆ, ಕೂದಲೂ ಚೆನ್ನಾಗಿ ಬೆಳೆಯುತ್ತದೆ.
* ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಬೇಕು. ಈ ರೀತಿ ವಾರದಲ್ಲಿ 2-3 ಬಾರಿ ಮಾಡಬೇಕು.
* ಮೆಂತೆಯನ್ನು ಅರೆದು ತೆಂಗಿನ ಹಾಲಿನೊಂದಿಗೆ ಮಿಶ್ರ ಮಾಡಬೇಕು. ನಂತರ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ
* ಬೇವಿನ ಎಲೆಗಳನ್ನು ಎಣ್ನೆಯಲ್ಲಿ ಕುದಿಸಿ ತಲೆಗೆ ಹಚ್ಚುವುದು ಒಳ್ಳೆಯದು. ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.ಹಚ್ಚುವುದಾದರೆ ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಹಚ್ಚಿದರೆ ಒಳ್ಳೆಯದು.
ದೇಹಕ್ಕೆ ಅಗತ್ಯವಾದ ವಿಟಮಿನ್ ಗ ಪೂರೈಕೆ ಮತ್ತು ಬಾಹ್ಯವಾಗಿ ಕೂದಲಿಗೆ ಪೋಷಣೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.



Click it and Unblock the Notifications