Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ತ್ವಚೆ ಸೌಂದರ್ಯದ ರಕ್ಷಕ-ಕಸ್ತೂರಿ ಅರಿಶಿಣ
ಮುಖದಲ್ಲಿ ಮೊಡವೆ, ಅಲರ್ಜಿ ಉಂಟಾಗಿದೆಯೆಂದು ಹೇಳಿದಾಗ ಮನೆಯಲ್ಲಿ ಅಜ್ಜಿಯಿದ್ದರೆ ಅವರು "ಅರಿಶಿಣ ಹಚ್ಚು, ಕಡಿಮೆಯಾಗುವುದು " ಎಂದು ಹೇಳುವುದು ಸಹಜ. ತ್ವಚೆ ರಕ್ಷಣೆಯಲ್ಲಿ ಅರಿಶಿಣದ ಪಾತ್ರವನ್ನು ನಮ್ಮ ಹಿರಿಯರು ಬಹು ಕಾಲದ ಹಿಂದೆಯೇ ಅರಿತು ಕೊಂಡಿದ್ದಾರೆ. ಸಾರಿಗೆ ಬಳಸುವ ಅರಿಶಿಣಕ್ಕಿಂತ ಕಸ್ತೂರಿ ಅರಿಶಿಣ ಸೌಂದರ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಕಸ್ತೂರಿ ಅರಿಶಿಣ ಸಾಮಾನ್ಯವಾಗಿ ಎಲ್ಲರ ತ್ವಚೆಗೆ ಹೊಂದುತ್ತದೆ. ಸಾಮಾನ್ಯ ಅರಿಶಿಣ ಹಚ್ಚಿದರೆ ಕೆಲವರಿಗೆ ಅಲರ್ಜಿ ಉಂಟಾಗುವುದು, ಆದರೆ ಈ ಅರಿಶಿಣದಿಂದ ಅಲರ್ಜಿ ಉಂಟಾಗುವ ಸಾಧ್ಯತೆ ತುಂಬಾ ಕಡಿಮೆ, ಅಲ್ಲದೆ ಇದನ್ನು ಹಚ್ಚಿ ತೊಳೆದರೆ ಮುಖದಲ್ಲಿ ಅರಿಶಿಣ ಬಣ್ಣ ಕಾಣುವುದಿಲ್ಲ. ಪ್ರತೀದಿನ ಕಸ್ತೂರಿ ಅರಿಶಿಣ ಹಚ್ಚಿದರೆ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು:

1. ಮುಖದ ಬಿಳುಪು ಹೆಚ್ಚುವುದು
ಕಸ್ತೂರಿ ಅರಿಶಿಣ ಹಚ್ಚುತ್ತಾ ಬಂದರೆ ಮುಖದ ಬಿಳುಪು ಹೆಚ್ಚಿ, ತ್ವಚೆ ಮತ್ತಷ್ಟು ಆಕರ್ಷಕವಾಗಿ ಕಾಣುವುದು. ಮುಖಕಾಂತಿ ಹೆಚ್ಚಿಸುವ ಈ ಅರಿಶಿಣದ ಗುಣ ಯಾವ ಕ್ರೀಮ್ ನಲ್ಲೂ ಇಲ್ಲ.
2. ಸನ್ ಟ್ಯಾನ್ ತೆಗೆಯಲು ಸಹಕಾರಿ
ಬಿಸಿಲಿಗೆ ಹೋದರೆ ಸಾಕು ಸನ್ ಟ್ಯಾನ್ ಉಂಟಾಗುತ್ತದೆ. ಕಸ್ತೂರಿ ಅರಿಶಿಣ ಹಚ್ಚುವವರಿಗೆ ಸನ್ ಟ್ಯಾನ್ ನ ಸಮಸ್ಯೆ ಕಾಡುವುದಿಲ್ಲ. ಅರಿಶಿಣವನ್ನು ಇಡೀ ಮೈಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಮೈಕಾಂತಿ ಕೂಡ ಹಚ್ಚುವುದು.
3. ಮೊಡವೆ
ಮೊಡವೆಯನ್ನು ಹೋಗಲಾಡಿಸುವ ಸಾಮರ್ಥ್ಯ ಈ ಅರಿಶಿಣಕ್ಕೆ ಇದೆ. ಹದಿಹರೆಯದವರು ಇದನ್ನು ಹಚ್ಚುವುದರಿಂದ ಮೊಡವೆ ಬರುವುದನ್ನು ತಡೆಗಟ್ಟಬಹುದು.
4. ತ್ವಚೆ ಅಲರ್ಜಿಗೆ
ಅರಿಶಿಣ ಪುಡಿಯನ್ನು ತೆಂಗಿನೆಣ್ಣೆ ಮಿಶ್ರ ಮಾಡಿ ಹಚ್ಚಿದರೆ ತ್ವಚೆ ತುರಿಕೆ, ದೇಹದ ದುರ್ವಾಸೆ ಮುಂತಾದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
5. ಮುಖದಲ್ಲಿರುವ ಕೂದಲನ್ನು ಹೋಗಲಾಡಿಸಲು
ಹೆಣ್ಣು ಮಕ್ಕಳ ಮುಖದಲ್ಲಿ ಕೂದಲಿದ್ದರೆ ಅಷ್ಟು ಆಕರ್ಷಕವಾಗಿ ಕಾಣುವುದಿಲ್ಲ. ಇದನ್ನು ಹಚ್ಚುವುದರಿಂದ ಮುಖದಲ್ಲಿರುವ ಕೂದಲನ್ನು ಸ್ವಾಭಾವಿಕವಾಗಿ ಹೋಗಲಾಡಿಸಬಹುದು.



Click it and Unblock the Notifications