Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ನಯಾ ಪೈಸೆ ಖರ್ಚಿಲ್ಲದೆ ತ್ವಚೆಯ ಕಾಂತಿ ಹೆಚ್ಚಿಸಿಕೊಳ್ಳಿ!
ಕಲೆಗಳು ಮುಖದ ಸೌಂದರ್ಯವನ್ನೇ ಕಳೆಗುಂದಿಸುವುದರಿಂದ ಹೆಚ್ಚಿನ ತರುಣ ತರುಣಿಯರು ಮಾನಸಿಕವಾಗಿ ಕುಗ್ಗುತ್ತಾರೆ. ಈ ಕಲೆಗಳಿಂದ ಮುಕ್ತರಾಗಲು ಹಲವು ವಿಧಾನಗಳಿಗೆ ತಮ್ಮನ್ನು ಒಡ್ಡಿಕೊಳ್ಳುತ್ತಾರೆ. ದುಬಾರಿ ವೈದ್ಯಕೀಯ ಚಿಕಿತ್ಸೆಗಳಿಗಾಗಿ ಹಣ ಸುರಿಯುತ್ತಾರೆ. ಆದರೂ ಪ್ರತಿಬಾರಿ ಉತ್ತಮ ಪರಿಣಾಮ ಪಡೆಯಲು ವಿಫಲರಾಗುತ್ತಾರೆ. ಆದರೆ ಮನೆಯಲ್ಲಿಯೇ ಸುಲಭವಾಗಿ ಮಾಡಿಕೊಳ್ಳಬಹುದಾದ ಕೆಲವು ಚಿಕಿತ್ಸೆಗಳಿಂದ ಹೆಚ್ಚಿನ ಖರ್ಚಿಲ್ಲದೇ ಉತ್ತಮ ಪರಿಣಾಮ ಪಡೆಯಬಹುದು.
ತ್ವಚೆಯ ಮೇಲೆ ಕಂಡುಬರುವ ಯಾವುದೇ ರೀತಿಯ ಕಲೆಗಳಾಗಲಿ ಅದನ್ನು ನೈಸರ್ಗಿಕ ಮದ್ದಿನ ಮೂಲಕ ಸ್ವಲ್ಪ ಮಾಸುವಂತೆ ಅಥವಾ ಸಂಪೂರ್ಣವಾಗಿ ಹೋಗಲಾಡಿಸುವಂತೆ ಮಾಡಬಹುದು. ನಿಮಗೆ ಕಲೆಗಳಾಗಿ ಅದು ಕಡಿಮೆ ಆಗಬಹುದು ಎಂಬ ಸೂಚನೆ ಇಲ್ಲದಿದ್ದಲ್ಲಿ ತಕ್ಷಣ ವೈದ್ಯರು ಅಥವಾ ಚರ್ಮ ತಜ್ಞರನ್ನು ಭೇಟಿ ನೀಡಿ ಸಲಹೆ ಪಡೆಯಿರಿ. ತ್ವಚೆಯ ಕಾಂತಿ, ಕೋಮಲತೆಗಾಗಿ- ಕೊಬ್ಬರಿ ಎಣ್ಣೆ

ಮೂಲಂಗಿ ಬೀಜ
ಮೂಲಂಗಿ ಬೀಜಗಳನ್ನು ನುಣ್ಣಗೆ ಪುಡಿಮಾಡಿ ನೀರಿನೊಂದಿಗೆ ಮಿಶ್ರಣ ಮಾಡಿಕೊಳ್ಳಬೇಕು. ರಾತ್ರಿ ಮಲಗುವ ಮುನ್ನ ತೆಳುವಾಗಿ ಹಚ್ಚಿ ಬೆಳಿಗ್ಗೆ ತಣ್ಣೀರಿನಲ್ಲಿ ತೊಳೆದುಕೊಳ್ಳಬೇಕು. ದಿನದ ಸಮಯದಲ್ಲಿ ದಪ್ಪನಾದ ಮಿಶ್ರಣವನ್ನು ಇಪ್ಪತ್ತು ನಿಮಿಷಗಳವರೆಗೆ ದಿನಕ್ಕೆರಡು ಬಾರಿ ಹಚ್ಚಿಕೊಳ್ಳಬೇಕು.
ಆಲುಗಡ್ಡೆ
ಸೀಬೆಕಾಯಿಯ ಎಲೆ
ಸೀಬೆಕಾಯಿಯ ಕೆಲವು ಎಲೆಗಳನ್ನು ತೆಗೆದುಕೊಳ್ಳಿ.ಎಟೊಪಿಕ್ ಡರ್ಮಟೈಟಿಸ್ಗೆ ಚಿಕಿತ್ಸೆ ನೀಡಲು ಇದನ್ನು ಬಳಸುವುದಾದರೆ ಒಣಗಿದ ಎಲೆಗಳನ್ನು ಬಳಸಿ. ಇದನ್ನು ಹುಡಿ ಮಾಡಿ ಬಿಸಿ ನೀರಿನ ಒಂದು ಪಾತ್ರೆಗೆ ಹಾಕಿ. ನೀರನ್ನು ಸರಿಯಾಗಿ ಕುದಿಸಿ ಮತ್ತು ನೀರು ಕಂದು ಬಣ್ಣಕ್ಕೆ ತಿರುಗುವ ತನಕ ಅದು ಕುದಿಯುತ್ತಾ ಇರಲಿ.
ಇದನ್ನು ತಂಪಾಗಲು ಬಿಡಿ ಮತ್ತು ಹತ್ತಿಯ ಉಂಡೆ ಮಾಡಿ ಅದನ್ನು ಈ ನೀರಿನಲ್ಲಿ ಮುಳುಗಿಸಿ ನಿಮ್ಮ ಮುಖ ಅಥವಾ ಯಾವ ಭಾಗಕ್ಕೆ ಚಿಕಿತ್ಸೆ ನೀಡಲು ಬಯಸುತ್ತೀರೋ ಅಲ್ಲಿಗೆ ಹಚ್ಚಿ. ನಿಮ್ಮ ಮುಖಕ್ಕೆ ಹಚ್ಚಿ ಮತ್ತು 15 ನಿಮಿಷಗಳ ಕಾಲ ಹಾಗೆ ಇರಲಿ. ಇದರ ಬಳಿಕ ತಂಪಾದ ನೀರಿನಲ್ಲಿ ಮುಖ ತೊಳೆಯಿರಿ. ವಾರದಲ್ಲಿ ಎರಡು ಸಲ ಹೀಗೆ ಮಾಡುವುದರಿಂದ ಫಲಿತಾಂಶ ಪಡೆಯಬಹುದು.
ನುಗ್ಗೆ ಎಲೆಗಳು
ಸುಮಾರು ಒಂದು ಮುಷ್ಠಿಯಷ್ಟು ನುಗ್ಗೆ ಎಲೆಗಳಿಗೆ ನಾಲ್ಕಾರು ಹನಿ ಲಿಂಬೆರಸ, ಚಿಟಿಕೆ ಅರಿಶಿನ ಪುಡಿ, ಚಿಟಿಕೆ ಗಂಧದ ಒಣ ಪುಡಿ (ಅಥವಾ ಹೊಟ್ಟು) ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. (ಕಲ್ಲಿನ ಮೇಲೆ ಅರೆದರೆ ಉತ್ತಮ, ಮಿಕ್ಸಿಯಲ್ಲಿ ಅರೆದರೆ ಬಿಸಿಯಾಗುವ ಮೂಲಕ ಎಲೆಗಳು ಗುಣಗಳನ್ನು ಕಳೆದುಕೊಳ್ಳಬಹುದು). ಈ ಲೇಪವನ್ನು ಮುಖ, ಕುತ್ತಿಗೆ ಮತ್ತು ಕೈಗಳ ಮೇಲೆ ಹಚ್ಚಿ ಸುಮಾರು ಇಪ್ಪತ್ತು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಬಳಸದಿರಿ. ಸಂಜೆ ಈ ಲೇಪನವನ್ನು ಹಚ್ಚಿ ಮರುದಿನ ಸ್ನಾನ ಮಾಡಿದರೆ ಉತ್ತಮ ಪರಿಣಾಮ ದೊರಕುತ್ತದೆ.
ಆಲಿವ್ ಎಣ್ಣೆ
ಕಲೆ ಇರುವ ಜಾಗದಲ್ಲಿ ಅಪ್ಪಟ ಆಲಿವ್ ಎಣ್ಣೆಯನ್ನು ನಯವಾಗಿ ತಿಕ್ಕಿ ಹದವಾದ ನೀರಾವಿಗೆ ಚರ್ಮವನ್ನು ಒಡ್ಡಿಕೊಳ್ಳಬೇಕು. ಇದರಿಂದಾಗಿ ಚರ್ಮದ ಸೂಕ್ಷ್ಮರಂಧ್ರಗಳು ತೆರೆದು ಆಲಿವ್ ಎಣ್ಣೆ ಗಾಢವಾಗಿದ್ದ ಚರ್ಮದ ಮೆಲನಿನ್ ವರ್ಣದ್ರವ್ಯವನ್ನು ಕಡಿಮೆಗೊಳಿಸಿ ಕಲೆಯನ್ನು ಕಡಿಮೆ ಮಾಡುತ್ತದೆ.
ಹರ್ಬಲ್ ಟೀ ಕುಡಿಯಿರಿ
ಇಂದು ಹರ್ಬಲ್ ಟೀ ಎಂದು ವಿವಿಧ ಗಿಡಮೂಲಿಕೆಗಳನ್ನು ಟೀ ಪುಡಿಯಲ್ಲಿ ಸೇರಿಸಿರುವ ಉತ್ಪನ್ನಗಳು ಮಾರುಕಟ್ಟೆಯಲ್ಲಿ ದೊರಕುತ್ತವೆ. ಹಾಲಿಲ್ಲದ ಈ ಟೀ ಚರ್ಮಕ್ಕೆ ಉತ್ತಮವಾಗಿದೆ. ರುಚಿಗಾಗಿ ಕೊಂಚ ಲಿಂಬೆ ಅಥವಾ ಶುಂಠಿಯನ್ನು ಸಹಾ ಸೇರಿಸಬಹುದು. ಇದರ ನಿಯಮಿತ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದು ಮಾತ್ರವಲ್ಲದೇ ನೀರಿನಂಶವನ್ನು ಚರ್ಮದ ಜೀವಕೋಶಗಳು ಹೀರಿಕೊಳ್ಳಲು ಸಹಕರಿಸಿ ಚರ್ಮದ ಸೆಳೆತವನ್ನು ಹೆಚ್ಚಿಸುವ ಮೂಲಕ ಸಹಜ ಕಾಂತಿಯನ್ನು ಪಡೆಯಲು ಸಾಧ್ಯವಾಗುತ್ತದೆ.



Click it and Unblock the Notifications














