Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಮಳೆಗಾಲದಲ್ಲಿ ತ್ವಚೆಯ ಆರೈಕೆಗೆ ಸರಳ ಸೂತ್ರ
ಮಳೆಗಾಲ ಶುರುವಾಗಿ ಬಿಟ್ಟಿದೆ, ನಾನಾ ಬಗೆಯ ರೋಗರುಜಿನಗಳ ಜೊತೆ ಚರ್ಮದ ಸೊಂಕು ಕೂಡ ಈ ಋತುವಿನಲ್ಲಿ ಬಾಧಿಸುವುದು ಸಾಮಾನ್ಯವಾಗಿ ಬಿಟ್ಟಿದೆ. ಹಾಗಾಗಿ ಇಂತಹ ಸಮಯದಲ್ಲಿ ರಾಸಾಯನಿಕಗಳಿರುವ ಪ್ರಸಾಧನಗಳ ಬಳಕೆಯನ್ನು ಕಡಿಮೆ ಮಾಡಿ ನೈಸರ್ಗಿಕ ವಿಧಾನವನ್ನು ನಿಮ್ಮದಾಗಿಸಿಕೊಂಡು ಸೌಂದರ್ಯವನ್ನು ಇನ್ನಷ್ಟು ವರ್ಧಿಸಬಹುದಾಗಿದೆ. ಅಂತೆಯೇ ಆಯಾಯ ಕಾಲಕ್ಕೆ ಅನುಸಾರವಾಗಿ ನಿಮ್ಮ ಸೌಂದರ್ಯದ ರಕ್ಷಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ.
ಹೌದು, ಮಳೆಗಾಲದಲ್ಲಿ ಮುಖದ ಸೌಂದರ್ಯ ಹಾಳಾಗುವುದು ಬಹುಬೇಗ. ಅಂತೆಯೇ ತ್ವಚೆಗೆ ಬಳಸುವ ಸೌಂದರ್ಯವರ್ಧಕ ಸಾಮಾಗ್ರಿಗಳು ನೀರಿನ ಹಾನಿಗೆ ಒಳಪಟ್ಟಾಗ ಇದು ಕೂಡ ನಿಮ್ಮ ತ್ವಚೆಯ ಮೇಲೆ ದುಷ್ಪರಿಣಾಮಗಳನ್ನು ಬೀರಬಹುದು. ಆದರೆ ಇದಕ್ಕೆಲ್ಲಾ ಚಿಂತೆ ಮಾಡುವ ಅಗತ್ಯವೇ ಇಲ್ಲ. ಸುಂದರ ತ್ವಚೆ ಮತ್ತು ತ್ವಚೆಯನ್ನು ಆರೋಗ್ಯವಾಗಿಡಲು ನಮ್ಮಲ್ಲಿ ಕೆಲವೊಂದು ಟಿಪ್ಸ್ ಮತ್ತು ಟ್ರಿಕ್ಸ್ಗಳಿವೆ, ಬನ್ನಿ ಅವು ಯಾವುದು ಎಂಬುದನ್ನು ನೋಡೋಣ..

ತ್ವಚೆಯ ಶುಚಿತ್ವದ ಪ್ರಾಮುಖ್ಯತೆ ನೀಡಿ
ಈ ಋತುವಿನಲ್ಲಿ ತೇವಾಂಶವು ಅಧಿಕವಾಗಿರುತ್ತದೆ ಮತ್ತು ಇದು ತ್ವಚೆಯ ರಂಧ್ರಗಳನ್ನು ಮುಚ್ಚಿಬಿಡಬಹುದು. ತ್ವಚೆಯ ರಂಧ್ರಗಳು ಮುಚ್ಚಲ್ಪಟ್ಟರೆ ಅದರಿಂದ ಮೊಡವೆಗಳು ಬರುತ್ತದೆ. ನಿಮ್ಮ ತ್ವಚೆಯನ್ನು ಶುಚಿಯಾಗಿಟ್ಟುಕೊಳ್ಳುವುದು ತುಂಬಾಮುಖ್ಯ. ತ್ವಚೆಯು ಎಣ್ಣೆಯಂಶವನ್ನು ಹೊಂದಿದ್ದರೆ ತೇವಾಂಶದೊಂದಿಗೆ ಧೂಳು ಮತ್ತು ಕಲ್ಮಶದೊಂದಿಗೆ ತ್ವಚೆಯಲ್ಲಿ ಮೊಡವೆಗಳು ಉಂಟಾಗಬಹುದು. ನಿಯಮಿತವಾಗಿ ತ್ವಚೆಯನ್ನು ತೊಳೆಯುವುದರಿಂದ ಕಲ್ಮಶ ದೂರವಾಗಿ ಆರೋಗ್ಯಕರ ತ್ವಚೆಯನ್ನು ಪಡೆಯಬಹುದಾಗಿದೆ.

ಮಳೆಗಾಲದಲ್ಲಿ ಒಣ ತ್ವಚೆ ಕಂಡುಬಂದರೆ
ಗಾಳಿಯಲ್ಲಿ ತೇವಾಂಶವಿದ್ದರೂ ಒಣ ತ್ವಚೆಯವರಿಗೆ ತುರಿಕೆ ಮತ್ತು ಕಿರಿಕಿರಿ ಉಂಟಾಗುತ್ತದೆ. ಹೌದು ಮಳೆಗಾಲದಲ್ಲಿ ಇಂತಹ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಒಣ ತ್ವಚೆ ಹೊಂದಿರುವವರು ಪ್ರತೀ ರಾತ್ರಿ ಜೇನು ಮತ್ತು ಹಾಲಿನ ಮಿಶ್ರಣವನ್ನು ಹಚ್ಚಿಕೊಂಡರೆ ತ್ವಚೆಯಲ್ಲಿ ತೇವಾಂಶವು ನಿಯಂತ್ರಣದಲ್ಲಿರುತ್ತದೆ. ಆದರೆ ಒಂದು ಮಾತು ನೆನಪಿಡಿ ಸೋಪ್ ಅಥವಾ ಸೋಪ್ನಿಂದ ಮಾಡಲ್ಪಟ್ಟಿರುವಂತಹ ಫೇಸ್ ವಾಶ್ ಗಳನ್ನು ಯಾವತ್ತೂ ಬಳಸಬಾರದು. ಇದು ಒಣ ತ್ವಚೆಯ ತುರಿಕೆ ಮತ್ತು ಒಣಗುವಿಕೆ ಹೆಚ್ಚಿಸುತ್ತದೆ.

ಪುದೀನ ಫೇಶಿಯಲ್
ಮಳೆಗಾಲದಲ್ಲಿ ಪುದೀನ ಅಥವಾ ಪಪ್ಪಾಯ ಫೇಶಿಯಲ್ ಮಾಡಿಸಿಕೊಂಡರೆ ಒಳ್ಳೆಯ ಪರಿಣಾಮವಿರುತ್ತದೆ. ಪುದೀನ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸುವುದಲ್ಲದೆ ಚರ್ಮವನ್ನು ಮೃದುಗೊಳಿಸಿ ಮುಚ್ಚಿಹೋಗಿರುವ ರಂಧ್ರಗಳನ್ನೂ ಸಹ ಶುದ್ಧಿ ಮಾಡಿ ಆ ರಂಧ್ರಗಳ ಗಾತ್ರವನ್ನು ಕಡಿಮೆಮಾಡುತ್ತದೆ. ಅಲ್ಲದೆ ಪಪ್ಪಾಯಿ ಹಣ್ಣಿನಿಂದ ಪೋಷಣೆ ಮಾಡಿದರೆ ಮುಖವು ತೇವಾಂಶದಿಂದ ಕಾಂತಿಯುತವಾಗಿ ಕಾಣುತ್ತದೆ.

ರಾಸಾಯನಿಕ ಕ್ರೀಮ್ಗಳಿಂದ ದೂರವಿರಿ
ಮಳೆಗಾಲದಲ್ಲಿ ಆರ್ದ್ರತೆ (Humidity) ಮಟ್ಟವು ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ರಾಸಾಯನಿಕ ಲೋಶನ್ಗಳು ಅಥವ ಕ್ರೀಮ್ಗಳನ್ನು ಹಚ್ಚುವುದನ್ನು ತಪ್ಪಿಸಿ, ಸಾಧ್ಯವಾದಷ್ಟು ಸೈಸರ್ಗಿಕ ಫೇಸ್ ಕ್ರೀಮ್ ಅನ್ನು ಆಯ್ದುಕೊಳ್ಳಿ

ತ್ವಚೆಯಲ್ಲಿ ಕಾಣಿಸಿಕೊಳ್ಳುವ ಮೊಡವೆ
ನೀವು ಈಗಾಗಲೇ ಮೊಡವೆಯಿಂದ ತೊಂದರೆಗೆ ಒಳಗಾಗಿದ್ದೀರಿ ಎಂದು ನಿಮಗನಿಸಿದರೆ ಅದರಿಂದ ನಿವಾರಣೆ ಪಡೆಯಲು ನಾವು ನಿಮಗೆ ಕೆಲವೊಂದು ಸಾಮಾನ್ಯ ಮನೆಮದ್ದನ್ನು ತಿಳಿಸುತ್ತೇವೆ. ಚಿಂತೆ ಬೇಡ. ಮಣ್ಣು, ಬೇವು,ಪುದೀನಾ,ಕರ್ಪೂರ ಮತ್ತು ರೋಸ್ ವಾಟರನ್ನು ಮಿಶ್ರಣ ಮಾಡಿ ಮತ್ತು ಇದನ್ನು ನಿಮ್ಮ ತ್ವಚೆಗೆ 15 ನಿಮಿಷ ಹಚ್ಚಿಕೊಳ್ಳಿ. ತದನಂತರ ತಂಪಾದ ನೀರಿನಿಂದ ಇದನ್ನು ತೊಳೆದು ತೆಗೆಯಿರಿ.



Click it and Unblock the Notifications
