Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಲಿಂಬೆ ಹಣ್ಣಿನ ಸಿಪ್ಪೆ- ತ್ವಚೆಯ ಸರ್ವರೋಗಕ್ಕೂ ರಾಮಬಾಣ
ಲಿಂಬೆರಸದ ಮಹತ್ವವನ್ನು ನಾವೆಲ್ಲಾ ಬಲ್ಲೆವು. ಆದರೆ ರಸ ಹಿಂಡಿದ ಬಳಿಕ ಉಳಿದ ಸಿಪ್ಪೆ? ಇದು ನಮ್ಮ ಚರ್ಮಕ್ಕೆ ಉತ್ತಮ ಆರೈಕೆ ನೀಡುತ್ತದೆ ಎಂದು ನಿಮಗೆ ತಿಳಿದಿತ್ತೇ? ಲಿಂಬೆ ಸಿಪ್ಪೆಯಲ್ಲಿಯೂ ಹೇರಳವಾಗಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಸಹಜ ಕಾಂತಿ ಮತ್ತು ಸಹಜವರ್ಣ ಪಡೆಯಲು ನೆರವಾಗುತ್ತವೆ.
ಆದ್ದರಿಂದ ಮುಂದಿನ ಬಾರಿ ಲಿಂಬೆರಸವನ್ನು ಹಿಂಡಿದ ಬಳಿಕ ಸಿಪ್ಪೆಯನ್ನು ಎಸೆಯಬೇಡಿ. ಬದಲಿಗೆ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಿ. ಈ ಪುಡಿಯೂ ಚರ್ಮದ ಆರೈಕೆಯಲ್ಲಿ ಉತ್ತಮ ಪಾತ್ರ ವಹಿಸುತ್ತದೆ.
ನಿಮ್ಮ ಚರ್ಮಕ್ಕೆ ನಿಯಮಿತ ಆರೈಕೆ ನೀಡಲು ಸಾಕಷ್ಟು ಪ್ರಮಾಣದಲ್ಲಿ ಸಿಪ್ಪೆಯ ಪುಡಿಯನ್ನು ಶೇಖರಿಸಿಟ್ಟುಕೊಳ್ಳಿ. ಬಿಸಿಲಿನಿಂದ ಕಪ್ಪಗಾಗಿದ್ದ ಚರ್ಮದ ವರ್ಣವನ್ನು ಸಹಜವರ್ಣದತ್ತ ತರಲು ನೆರವಾಗುವ ಈ ಪುಡಿಯ ಇತರ ಗುಣಗಳನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ...

ಮೊಡವೆ ನಿವಾರಣೆಗೆ
ಕೊಂಚ ಲಿಂಬೆಸಿಪ್ಪೆಯಪುಡಿಯನ್ನು ಎಳನೀರಿನಲ್ಲಿ ಹಾಕಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ಮೊಡವೆಗಳಿರುವಲ್ಲಿ ಹಚ್ಚಿ ಒಣಗಲು ಬಿಡಿ. ಇಡಿಯ ರಾತ್ರಿ ಹೀಗೇ ಇರಲಿ. ಬೆಳಿಗ್ಗೆದ್ದ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಇದರಿಂದ ಮೊಡವೆಗಳು ಪೂರ್ತಿಯಾಗಿ ಹಣ್ಣಾಗಿ ಕೀವಿನ ಮುಖಾಂತರ ಹೊರಬಂದು ಚರ್ಮ ಸಹಜವಾಗಿ ತನ್ನ ಮೂಲ ಸ್ವರೂಪವನ್ನು ಪಡೆಯಲು ನೆರವಾಗುತ್ತದೆ.

ಮೃದುವಾದ ಚರ್ಮಕ್ಕೆ
ಮೃದುವಾದ ರೇಷ್ಮೆಯಂತಹ ಚರ್ಮಕ್ಕಾಗಿ ಈ ವಿಧಾನವನ್ನು ಅನುಸರಿಸಿ. ಒಂದು ಚಿಕ್ಕ ಚಮಚ ಲಿಂಬೆರಸ, ಒಂದು ಚಮಚ ಲಿಂಬೆಪುಡಿ ಮತ್ತು ಒಂದು ಚಮಚ ಕಿತ್ತಳೆ ಹಣ್ಣಿನ ರಸವನ್ನು ಸೇರಿಸಿ ಮಿಶ್ರಣ ಮಾಡಿ. ಈ ಲೇಪನವನ್ನು ಮುಖದ ಮೇಲೆ ಹಚ್ಚಿ ಅರ್ಧಘಂಟೆ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ಮುಖ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.

ನೆರಿಗೆ ಬರುವುದನ್ನು ತಪ್ಪಿಸಲು
ಲಿಂಬೆಪುಡಿ, ಪಪ್ಪಾಯಿಹಣ್ಣಿನ ರಸವನ್ನು ಸಮಪ್ರಮಾಣದಲ್ಲಿ ಹಾಕಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಮುಖ ಮತ್ತು ಕುತ್ತಿಗೆಯ ಮೇಲೆ ಹಚ್ಚಿ ಒಣಗಲು ಬಿಡಿ. ಸುಮಾರು ಅರ್ಧ ಗಂಟೆಯ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಬಳೀಕ ಕೊಂಚ ಆಲಿವ್ ಎಣ್ಣೆಯನ್ನು ಹಚ್ಚಿ ಚರ್ಮವನ್ನು ನಯವಾಗಿ ಮಸಾಜ್ ಮಾಡಿಕೊಳ್ಳಿ. ಇದರಿಂದ ಚರ್ಮಕ್ಕೆ ಅಗತ್ಯವಾದ ಆರ್ದ್ರತೆ ದೊರಕುತ್ತದೆ ಹಾಗೂ ನೆರಿಗೆಗಳು ಬರುವುದನ್ನು ತಪ್ಪಿಸುತ್ತದೆ.

ಮುಖದ ಚರ್ಮದಿಂದ ಸತ್ತ ಜೀವಕೋಶಗಳನ್ನು ನಿವಾರಿಸಲು
ಸಮಪ್ರಮಾಣದಲ್ಲಿ ಉಪ್ಪು, ಲಿಂಬೆಪುಡಿ ಮತ್ತು ಕೆಲವು ಹನಿ ಗುಲಾಬಿನೀರನ್ನು ಮಿಶ್ರಣಮಾಡಿ. ಈ ಮಿಶ್ರಣವನ್ನು ಉಪಯೋಗಿಸಿ ಮುಖ, ಕೈ ಮತ್ತು ಕುತ್ತಿಗೆಯ ಚರ್ಮವನ್ನು ಉಜ್ಜಿಕೊಳ್ಳುವುದರಿಂದ ಸತ್ತ ಜೀವಕೋಶಗಳು ಸುಲಭವಾಗಿ ನಿವಾರಣೆಯಾಗುತ್ತವೆ. ಇದನ್ನು ವಾರಕ್ಕೊಮ್ಮೆ ಬಳಸುವುದರಿಂದ ಚರ್ಮ ಕಾಂತಿಯುಕ್ತವಾಗುತ್ತದೆ.

ಎಣ್ಣೆಚರ್ಮದ ಪಸೆಯನ್ನು ನಿವಾರಿಸಲು
ಒಂದು ಮೇಳೆ ನಿಮ್ಮ ಚರ್ಮ ಎಣ್ಣೆಚರ್ಮವಾಗಿದ್ದರೆ ಲಿಂಬೆಪುಡಿಯಲ್ಲಿರುವ ಸಿಟ್ರಿಕ್ ಆಮ್ಲ ನೆರವಿಗೆ ಬರುತ್ತದೆ. ಸಮಪ್ರಮಾಣದಲ್ಲಿ ಹಸಿಹಾಲು ಮತ್ತು ಲಿಂಬೆಪುಡಿಯನ್ನು ಮಿಶ್ರಣ ಮಾಡಿ ಎಣ್ಣೆಚರ್ಮದ ಮೇಲೆ ಹಚ್ಚಿ ಒಣಗಲು ಬಿಡಿ. ಅರ್ಧಗಂಟೆಯ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ, ಸೋಪು ಉಪಯೋಗಿಸಬೇಡಿ.



Click it and Unblock the Notifications