Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಬೆಣ್ಣೆ ಹಣ್ಣಿನಲ್ಲಿ ಅಡಗಿದೆ-ಬೆಣ್ಣೆಯಂತಹ ಸೌಂದರ್ಯ!
ಅವಕಾಡೊ ಅಥವಾ ಬೆಣ್ಣೆ ಹಣ್ಣು ತ್ವಚೆಯ ತೇವಾಂಶವನ್ನು ಹೆಚ್ಚಿಸುವಲ್ಲಿ ಹೆಸರುವಾಸಿ. ಇದು ಚರ್ಮದ ನೈಸರ್ಗಿಕ ಸಮತೋಲನತೆಯನ್ನು ಕಾಪಾಡುವಲ್ಲಿ ಸಹಾಯಕಾರಿಯಾಗಿದೆ.
ಬೆಣ್ಣೆಹಣ್ಣು ಅತಿ ಹೆಚ್ಚಿನ ಪೋಷಕಾಂಶವುಳ್ಳ ಹಣ್ಣಾಗಿದ್ದು ಇದರ ಸೇವನೆಯಿಂದ ಹತ್ತು ಹಲವು ರೀತಿಯಲ್ಲಿ ಆರೋಗ್ಯ ಉತ್ತಮಗೊಳ್ಳುತ್ತದೆ. ಇದರಲ್ಲಿ ಆರೋಗ್ಯದ ಜೊತೆಗೇ ತ್ವಚೆಗೂ ಹಲವಾರು ಪ್ರಯೋಜನಗಳಿವೆ. ಈ ಹಣ್ಣಿನ ತಿರುಳನ್ನು ಮುಖಕ್ಕೆ ಹಚ್ಚಿಕೊಳ್ಳುವ ಮೂಲಕವೂ ಥಟ್ಟನೇ ಮುಖದ ಕಾಂತಿಯನ್ನು ಹೆಚ್ಚಿಸಬಹುದೆಂಬುದು ಮಾತ್ರ ನಿಮಗೆ ತಿಳಿದಿತ್ತೇ?

ಹೌದು ಬೆಣ್ಣೆಹಣ್ಣಿನಲ್ಲಿ ಕೊಬ್ಬಿನ ಆಮ್ಲಗಳು ಹೇರಳವಾಗಿದ್ದು ಇವು ಚರ್ಮದ ಸೂಕ್ಷ್ಮರಂಧ್ರದೊಳಕ್ಕಿಳಿದು ಆರ್ದ್ರತೆ ನೀಡುವ ಮೂಲಕ ಚರ್ಮದ ಕಾಂತಿ ಹೆಚ್ಚಿಸುತ್ತವೆ. ಅಲ್ಲದೇ ಇತರ ಮುಖಲೇಪಗಳಂತೆ ಇದು ಚರ್ಮಕ್ಕೆ ಉರಿಯನ್ನೂ ತರುವುದಿಲ್ಲ, ಬದಲಿಗೆ ತಣ್ಣನೆಯ ಮತ್ತು ಆರಾಮದಾಯಕ ಅನುಭವ ನೀಡುತ್ತದೆ. ಬೆಣ್ಣೆ ಹಣ್ಣು ತಿನ್ನಿ, ವೈದ್ಯರಿಂದ ದೂರವಿರಿ!
ವಿಶೇಷವಾಗಿ ಸೂಕ್ಷ್ಮ ಚರ್ಮದವರಿಗೂ ಇದು ಸುರಕ್ಷಿತವಾಗಿದ್ದು ಯಾವುದೇ ಅಡ್ಡಪರಿಣಾಮವನ್ನು ಹೊಂದಿಲ್ಲವಾದ ಕಾರಣ ಎಲ್ಲಾ ವಿಧದ ಚರ್ಮದವರು ಬಳಸಲು ಯೋಗ್ಯವಾಗಿದೆ. ಬನ್ನಿ, ಚರ್ಮತಜ್ಞರು ಈ ಹಣ್ಣನ್ನು ಹೇಗೆ ಬಳಸಬಹುದು ಎಂದು ಹೇಳಿರುವ ಮಾಹಿತಿಯನ್ನು ನೋಡೋಣ:
ಸಾಮಾನ್ಯ ತ್ವಚೆಗಾಗಿ
* ಒಂದುವರೆ ಕಪ್ ಬೆಣ್ಣೆಹಣ್ಣಿನ ತಿರುಳು ಮತ್ತು ಕಾಲು ಕಪ್ ಗಟ್ಟಿಮೊಸರನ್ನು ಬೆರೆಸಿ ಈಗತಾನೇ ತೊಳೆದುಕೊಂಡ ಮುಖಕ್ಕೆ ದಪ್ಪನಾಗಿ ಹಚ್ಚಿ. ಸುಮಾರು ಇಪ್ಪತ್ತು ನಿಮಿಷ ಬಿಟ್ಟು ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ.
*ಇದರ ಸತ್ತ ಜೀವಕೋಶಗಳನ್ನು ನಿವಾರಿಸುವ ಗುಣ ಚರ್ಮದ ಹೊರಪದರಲ್ಲಿ ಅಂಟಿಕೊಂಡಿದ್ದ ಪದರವನ್ನು ನಿವಾರಿಸುತ್ತದೆ.
*ಮೊಸರಿನ ಲ್ಯಾಕ್ಟಿಕ್ ಆಮ್ಲ ಮತ್ತು ಬೆಣ್ಣೆಹಣ್ಣಿನ ವಿಟಮಿನ್ ಬಿ ಯ ಜೋಡಿ ಚರ್ಮಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ ಆರ್ದ್ರತೆ ನೀಡುವ ಮೂಲಕ ಚರ್ಮಕ್ಕೆ ತಕ್ಷಣವೇ ಸಹಜವರ್ಣ ಮತ್ತು ಕಾಂತಿಯನ್ನು ಪಡೆಯಲು ನೆರವಾಗುತ್ತವೆ. ಕಿತ್ತಳೆ ಹಾಗೂ ಬೆಣ್ಣೆ ಹಣ್ಣಿನಲ್ಲಿದೆ, ಬೆಣ್ಣೆಯಂತಹ ಸೌಂದರ್ಯ!
ಸಾಮಾನ್ಯದಿಂದ ಎಣ್ಣೆಪಸೆ ಇರುವ ತ್ವಚೆಗಾಗಿ
*ಎಣ್ಣೆ ಪಸೆ ಮತ್ತು ಚರ್ಮದ ಆಳದಲ್ಲಿರುವ ಎಣ್ಣೆ ಜಿಡ್ಡು ಮೊಡವೆಗಳಿಗೆ ಮೂಲವಾಗಿದೆ. ಈ ಚರ್ಮದವರಿಗಾಗಿ ಲೋಳೆಸರ ಮತ್ತು ಕೊಬ್ಬರಿ ಎಣ್ಣೆಯ ಜೊತೆಯೂ ಅಗತ್ಯ. ಅರ್ಧ ಬೆಣ್ಣೆಹಣ್ಣಿನ ತಿರುಳನ್ನು ಚೆನ್ನಾಗಿ ಗೊಟಾಯಿಸಿ ಇದಕ್ಕೆ ಒಂದು ದೊಡ್ಡ ಚಮಚ ಕೊಬ್ಬರಿ ಎಣ್ಣೆ ಮತ್ತು ಒಂದು ಚಿಕ್ಕ ಚಮಚ ಲೋಳೆಸರದ ರಸವನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.
*ಈ ಮಿಶ್ರಣವನ್ನು ಈಗತಾನೇ ತೊಳೆದುಕೊಂಡ ಮುಖಕ್ಕೆ ದಪ್ಪನಾಗಿ ಹೆಚ್ಚಿ. ಮೊಡವೆಗಳಿರುವಲ್ಲಿ ಅಥವಾ ಮೊಡವೆ ಮೂಡುತ್ತಿರುವ ಸ್ಥಳಗಳಲ್ಲಿ ಹೆಚ್ಚು ದಪ್ಪನಾಗಿ ಹಚ್ಚಿ.
*ಸುಮಾರು ಹತ್ತರಿಂದ ಹದಿನೈದು ನಿಮಿಷ ಬಿಟ್ಟು ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಂಡು ದಪ್ಪನೆಯ ಟವೆಲ್ ಉಪಯೋಗಿಸಿ ಒತ್ತಿ ಒಣಗಿಸಿ. ಒರೆಸಲು ಹೋಗಬೇಡಿ, ಇದರಿಂದ ಮೊಡವೆಗಳ ಮೇಲಿನ ಚರ್ಮ ಕಿತ್ತು ಬರಬಹುದು.



Click it and Unblock the Notifications














