Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಬೆಣ್ಣೆ ಹಣ್ಣಿನಲ್ಲಿ ಅಡಗಿದೆ-ಬೆಣ್ಣೆಯಂತಹ ಸೌಂದರ್ಯ!
ಅವಕಾಡೊ ಅಥವಾ ಬೆಣ್ಣೆ ಹಣ್ಣು ತ್ವಚೆಯ ತೇವಾಂಶವನ್ನು ಹೆಚ್ಚಿಸುವಲ್ಲಿ ಹೆಸರುವಾಸಿ. ಇದು ಚರ್ಮದ ನೈಸರ್ಗಿಕ ಸಮತೋಲನತೆಯನ್ನು ಕಾಪಾಡುವಲ್ಲಿ ಸಹಾಯಕಾರಿಯಾಗಿದೆ.
ಬೆಣ್ಣೆಹಣ್ಣು ಅತಿ ಹೆಚ್ಚಿನ ಪೋಷಕಾಂಶವುಳ್ಳ ಹಣ್ಣಾಗಿದ್ದು ಇದರ ಸೇವನೆಯಿಂದ ಹತ್ತು ಹಲವು ರೀತಿಯಲ್ಲಿ ಆರೋಗ್ಯ ಉತ್ತಮಗೊಳ್ಳುತ್ತದೆ. ಇದರಲ್ಲಿ ಆರೋಗ್ಯದ ಜೊತೆಗೇ ತ್ವಚೆಗೂ ಹಲವಾರು ಪ್ರಯೋಜನಗಳಿವೆ. ಈ ಹಣ್ಣಿನ ತಿರುಳನ್ನು ಮುಖಕ್ಕೆ ಹಚ್ಚಿಕೊಳ್ಳುವ ಮೂಲಕವೂ ಥಟ್ಟನೇ ಮುಖದ ಕಾಂತಿಯನ್ನು ಹೆಚ್ಚಿಸಬಹುದೆಂಬುದು ಮಾತ್ರ ನಿಮಗೆ ತಿಳಿದಿತ್ತೇ?

ಹೌದು ಬೆಣ್ಣೆಹಣ್ಣಿನಲ್ಲಿ ಕೊಬ್ಬಿನ ಆಮ್ಲಗಳು ಹೇರಳವಾಗಿದ್ದು ಇವು ಚರ್ಮದ ಸೂಕ್ಷ್ಮರಂಧ್ರದೊಳಕ್ಕಿಳಿದು ಆರ್ದ್ರತೆ ನೀಡುವ ಮೂಲಕ ಚರ್ಮದ ಕಾಂತಿ ಹೆಚ್ಚಿಸುತ್ತವೆ. ಅಲ್ಲದೇ ಇತರ ಮುಖಲೇಪಗಳಂತೆ ಇದು ಚರ್ಮಕ್ಕೆ ಉರಿಯನ್ನೂ ತರುವುದಿಲ್ಲ, ಬದಲಿಗೆ ತಣ್ಣನೆಯ ಮತ್ತು ಆರಾಮದಾಯಕ ಅನುಭವ ನೀಡುತ್ತದೆ. ಬೆಣ್ಣೆ ಹಣ್ಣು ತಿನ್ನಿ, ವೈದ್ಯರಿಂದ ದೂರವಿರಿ!
ವಿಶೇಷವಾಗಿ ಸೂಕ್ಷ್ಮ ಚರ್ಮದವರಿಗೂ ಇದು ಸುರಕ್ಷಿತವಾಗಿದ್ದು ಯಾವುದೇ ಅಡ್ಡಪರಿಣಾಮವನ್ನು ಹೊಂದಿಲ್ಲವಾದ ಕಾರಣ ಎಲ್ಲಾ ವಿಧದ ಚರ್ಮದವರು ಬಳಸಲು ಯೋಗ್ಯವಾಗಿದೆ. ಬನ್ನಿ, ಚರ್ಮತಜ್ಞರು ಈ ಹಣ್ಣನ್ನು ಹೇಗೆ ಬಳಸಬಹುದು ಎಂದು ಹೇಳಿರುವ ಮಾಹಿತಿಯನ್ನು ನೋಡೋಣ:
ಸಾಮಾನ್ಯ ತ್ವಚೆಗಾಗಿ
* ಒಂದುವರೆ ಕಪ್ ಬೆಣ್ಣೆಹಣ್ಣಿನ ತಿರುಳು ಮತ್ತು ಕಾಲು ಕಪ್ ಗಟ್ಟಿಮೊಸರನ್ನು ಬೆರೆಸಿ ಈಗತಾನೇ ತೊಳೆದುಕೊಂಡ ಮುಖಕ್ಕೆ ದಪ್ಪನಾಗಿ ಹಚ್ಚಿ. ಸುಮಾರು ಇಪ್ಪತ್ತು ನಿಮಿಷ ಬಿಟ್ಟು ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ.
*ಇದರ ಸತ್ತ ಜೀವಕೋಶಗಳನ್ನು ನಿವಾರಿಸುವ ಗುಣ ಚರ್ಮದ ಹೊರಪದರಲ್ಲಿ ಅಂಟಿಕೊಂಡಿದ್ದ ಪದರವನ್ನು ನಿವಾರಿಸುತ್ತದೆ.
*ಮೊಸರಿನ ಲ್ಯಾಕ್ಟಿಕ್ ಆಮ್ಲ ಮತ್ತು ಬೆಣ್ಣೆಹಣ್ಣಿನ ವಿಟಮಿನ್ ಬಿ ಯ ಜೋಡಿ ಚರ್ಮಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ ಆರ್ದ್ರತೆ ನೀಡುವ ಮೂಲಕ ಚರ್ಮಕ್ಕೆ ತಕ್ಷಣವೇ ಸಹಜವರ್ಣ ಮತ್ತು ಕಾಂತಿಯನ್ನು ಪಡೆಯಲು ನೆರವಾಗುತ್ತವೆ. ಕಿತ್ತಳೆ ಹಾಗೂ ಬೆಣ್ಣೆ ಹಣ್ಣಿನಲ್ಲಿದೆ, ಬೆಣ್ಣೆಯಂತಹ ಸೌಂದರ್ಯ!
ಸಾಮಾನ್ಯದಿಂದ ಎಣ್ಣೆಪಸೆ ಇರುವ ತ್ವಚೆಗಾಗಿ
*ಎಣ್ಣೆ ಪಸೆ ಮತ್ತು ಚರ್ಮದ ಆಳದಲ್ಲಿರುವ ಎಣ್ಣೆ ಜಿಡ್ಡು ಮೊಡವೆಗಳಿಗೆ ಮೂಲವಾಗಿದೆ. ಈ ಚರ್ಮದವರಿಗಾಗಿ ಲೋಳೆಸರ ಮತ್ತು ಕೊಬ್ಬರಿ ಎಣ್ಣೆಯ ಜೊತೆಯೂ ಅಗತ್ಯ. ಅರ್ಧ ಬೆಣ್ಣೆಹಣ್ಣಿನ ತಿರುಳನ್ನು ಚೆನ್ನಾಗಿ ಗೊಟಾಯಿಸಿ ಇದಕ್ಕೆ ಒಂದು ದೊಡ್ಡ ಚಮಚ ಕೊಬ್ಬರಿ ಎಣ್ಣೆ ಮತ್ತು ಒಂದು ಚಿಕ್ಕ ಚಮಚ ಲೋಳೆಸರದ ರಸವನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.
*ಈ ಮಿಶ್ರಣವನ್ನು ಈಗತಾನೇ ತೊಳೆದುಕೊಂಡ ಮುಖಕ್ಕೆ ದಪ್ಪನಾಗಿ ಹೆಚ್ಚಿ. ಮೊಡವೆಗಳಿರುವಲ್ಲಿ ಅಥವಾ ಮೊಡವೆ ಮೂಡುತ್ತಿರುವ ಸ್ಥಳಗಳಲ್ಲಿ ಹೆಚ್ಚು ದಪ್ಪನಾಗಿ ಹಚ್ಚಿ.
*ಸುಮಾರು ಹತ್ತರಿಂದ ಹದಿನೈದು ನಿಮಿಷ ಬಿಟ್ಟು ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಂಡು ದಪ್ಪನೆಯ ಟವೆಲ್ ಉಪಯೋಗಿಸಿ ಒತ್ತಿ ಒಣಗಿಸಿ. ಒರೆಸಲು ಹೋಗಬೇಡಿ, ಇದರಿಂದ ಮೊಡವೆಗಳ ಮೇಲಿನ ಚರ್ಮ ಕಿತ್ತು ಬರಬಹುದು.



Click it and Unblock the Notifications


