Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ತಣ್ಣೀರಿನಿಂದ ಮುಖ ತೊಳೆಯಿರಿ, ವ್ಯತ್ಯಾಸ ನೀವೇ ನೋಡಿ!
ಬೆಳಿಗ್ಗೆದ್ದ ತಕ್ಷಣ ಕನ್ನಡಿಯಲ್ಲಿ ಮುಖವನ್ನು ಕೊಂಚ ಸೂಕ್ಷ್ಮವಾಗಿ ಗಮನಿಸಿ. ಕೊಂಚವೇ ಊದಿಕೊಂಡಿರುವಂತೆ ತೋರುತ್ತದೆ ಅಲ್ಲವೇ? ರಾತ್ರಿಯ ವಿಶ್ರಾಂತಿಯ ವೇಳೆ ನಮ್ಮ ಚರ್ಮದ ಸೂಕ್ಷ್ಮರಂಧ್ರಗಳು ವಿಶಾಲವಾಗಿ ತೆರೆದು ಜೀವಕೋಶಗಳ ಬೆಳವಣಿಗೆಗೆ ಸ್ಥಳಾವಕಾಶ ಮಾಡಿಕೊಡುತ್ತದೆ. ಆದ್ದರಿಂದಲೇ ಮುಖ ಕೊಂಚವೇ ಊದಿಕೊಂಡಂತೆ ಕಾಣುತ್ತದೆ. ಕೊಂಚ ಹೊತ್ತಿನ ಬಳಿಕ ಇದು ಸಾಮಾನ್ಯವಾಗಬೇಕು.
ಇದಕ್ಕೆ ಅತ್ಯುತ್ತಮವೆಂದರೆ ತಣ್ಣೀರಿನಿಂದ ಮುಖ ತೊಳೆದುಕೊಳ್ಳುವುದು. ಬಿಸಿನೀರಿನಿಂದ ತೊಳೆದುಕೊಂಡರೆ ಇದಕ್ಕೆ ವಿರುದ್ಧವಾದ ಪರಿಣಾಮವಾಗುತ್ತದೆ. ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳುವುದರಿಂದ, ಅದರಲ್ಲೂ ಬೆಳಿಗ್ಗೆದ್ದ ಬಳಿಕ ತೊಳೆದುಕೊಳ್ಳುವುದರಿಂದ ಮುಖದ ಸೌಂದರ್ಯ, ಚರ್ಮದ ಸೆಳೆತ ಹೆಚ್ಚುತ್ತದೆ ಹಾಗೂ ಊದಿಕೊಂಡ ಚರ್ಮ ಮೊದಲಿನಂತಾಗುತ್ತದೆ. ಬನ್ನಿ, ಈ ವಿಧಾನ ಇನ್ನೂ ಎಷ್ಟು ಪ್ರಯೋಜನಕಾರಿಯಾಗಿದೆ ಎಂಬುದನ್ನು ನೋಡೋಣ:

* ತಣ್ಣೀರಿನಿಂದ ಬೆಳಿಗ್ಗೆ ಮುಖ ತೊಳೆದುಕೊಳ್ಳುವ ಮೂಲಕ ರಾತ್ರಿಯ ವಿಶ್ರಾಂತಿಯ ವೇಳೆ ತೆರೆದಿದ್ದ ಸೂಕ್ಷ್ಮರಂಧ್ರಗಳೆಲ್ಲಾ ಮುಚ್ಚುತ್ತವೆ. ಇದು ಕಣ್ಣುಗಳಿಗೂ ಆರಾಮವನ್ನು ನೀಡುತ್ತದೆ.
* ಚರ್ಮದಲ್ಲಿ ನೆರಿಗೆ ಮೂಡದೇ ಇರಲು ತಣ್ಣೀರಿಗಿಂತ ಇನ್ನೊಂದು ನೆರಿಗೆನಿವಾರಕವಿಲ್ಲ. ಅಷ್ಟೇ ಅಲ್ಲ ಚರ್ಮದ ಸೆಳೆತ ಹೆಚ್ಚಿಸಿ ತಾರುಣ್ಯ ಮತ್ತು ಕಾಂತಿಯನ್ನು ಹೆಚ್ಚಿಸುತ್ತದೆ. ನಿತ್ಯವೂ ಬೆಳಿಗ್ಗೆದ್ದ ತಕ್ಷಣ ಪ್ರಥಮವಾಗಿ ತಣ್ಣೀರಿನಿಂದ ತೊಳೆದುಕೊಳ್ಳುವ ಮೂಲಕ ವಯಸ್ಸಾಗುವುದನ್ನೂ ನಿಧಾನಗೊಳಿಸಬಹುದು.
* ಸೂರ್ಯನ ಪ್ರಖರ ಕಿರಣಗಳ ಪ್ರಭಾವವನ್ನು ಕಡಿಮೆಗೊಳಿಸಬಹುದು. ಏಕೆಂದರೆ ರಾತ್ರಿ ತೆರೆದುಕೊಂಡಿದ್ದ ಸೂಕ್ಷ್ಮರಂಧ್ರಗಳು ಬಿಗಿಯಾಗಿ ಮುಚ್ಚಿದ್ದ ಕಾರಣ ಸೂರ್ಯನ ಕಿರಣಗಳಿಗೆ ಚರ್ಮದ ಸೂಕ್ಷ್ಮಸಂವೇದಿ ಒಳಪದರಕ್ಕೆ ತಲುಪಲು ಸಾಧ್ಯವಾಗುವುದಿಲ್ಲ. ತನ್ಮೂಲಕ ಚರ್ಮ ಹಾನಿಯಿಂದ ರಕ್ಷಿಸಲ್ಪಡುತ್ತದೆ.
*ಬಿಸಿನೀರಿಗಿಂತಲೂ ತಣ್ಣೀರೇ ಉತ್ತಮ
ಬಿಸಿನೀರಿನಿಂದ ಮುಖ ತೊಳೆದುಕೊಳ್ಳುವಾಗ ಕೊಂಚ ಆಹ್ಲಾದಕರ ಎನಿಸಿದರೂ ಮುಖದ ಚರ್ಮಕ್ಕೆ ತಣ್ಣೀರೇ ಅತ್ಯಂತ ಸೂಕ್ತವಾಗಿದೆ. ಏಕೆಂದರೆ ಮುಖದ ಚರ್ಮ ಅತ್ಯಂತ ಸೂಕ್ಷ್ಮಸಂವೇದಿಯಾಗಿದ್ದು ತಾಪಮಾನಕ್ಕೆ ಅತಿಹೆಚ್ಚಾಗಿ ಸ್ಪಂದಿಸುತ್ತದೆ. ಬಿಸಿನೀರಿನಿಂದ ಚರ್ಮದ ಸೂಕ್ಷ್ಮ ರಂಧ್ರಗಳು ಹೆಚ್ಚು ಸ್ಪಂದಿಸಿ ಹೆಚ್ಚಾಗಿ ತೆರೆದುಕೊಳ್ಳುತ್ತವೆ. ದೊಡ್ಡದಾಗಿ ತೆರೆದ ರಂಧ್ರಗಳು ಇನ್ನೂ ದೊಡ್ಡ ಧೂಳಿನ ಕಣಗಳಿಗೆ ಆಹ್ವಾನ ನೀಡುತ್ತದೆ.
ಜೊತೆಗೇ ಹೆಚ್ಚಿನ ಪ್ರಮಾಣದ ಮತ್ತು ಆಳವಾಗಿ ಕುಳಿತುಕೊಳ್ಳಲು ನಾವೇ ರತ್ನಗಂಬಳಿ ಹಾಸಿ ಬೇಡದ ಅತಿಥಿಗಳನ್ನು ಕರೆದಂತಾಗುತ್ತದೆ. ಚರ್ಮ ಸಡಿಲವಾಗಿ ನೆರಿಗೆಗಳು ಶೀಘ್ರವಾಗಿ ಆವರಿಸುತ್ತವೆ. ಬದಲಿಗೆ ತಣ್ಣೀರಿನಿಂದ ತೊಳೆದುಕೊಳ್ಳುವ ಮೂಲಕ ಈ ರಂಧ್ರಗಳು ಇನ್ನಷ್ಟು ಕಿರಿದಾಗಿ ಧೂಳಿನ ಕಣಗಳ ಪ್ರವೇಶಕ್ಕೆ ಪ್ರವೇಶವಿಲ್ಲ ಎಂಬ ಫಲಕ ತೋರಿಸುತ್ತವೆ. ಇದರಿಂದ ಚರ್ಮ ತನ್ನ ಸಹಜ ಸೆಳೆತವನ್ನು ಪಡೆದು ನೆರಿಗೆಗಳಿಂದ ಮುಕ್ತವಾಗಿರುತ್ತದೆ.



Click it and Unblock the Notifications

