Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ತಣ್ಣೀರಿನಿಂದ ಮುಖ ತೊಳೆಯಿರಿ, ವ್ಯತ್ಯಾಸ ನೀವೇ ನೋಡಿ!
ಬೆಳಿಗ್ಗೆದ್ದ ತಕ್ಷಣ ಕನ್ನಡಿಯಲ್ಲಿ ಮುಖವನ್ನು ಕೊಂಚ ಸೂಕ್ಷ್ಮವಾಗಿ ಗಮನಿಸಿ. ಕೊಂಚವೇ ಊದಿಕೊಂಡಿರುವಂತೆ ತೋರುತ್ತದೆ ಅಲ್ಲವೇ? ರಾತ್ರಿಯ ವಿಶ್ರಾಂತಿಯ ವೇಳೆ ನಮ್ಮ ಚರ್ಮದ ಸೂಕ್ಷ್ಮರಂಧ್ರಗಳು ವಿಶಾಲವಾಗಿ ತೆರೆದು ಜೀವಕೋಶಗಳ ಬೆಳವಣಿಗೆಗೆ ಸ್ಥಳಾವಕಾಶ ಮಾಡಿಕೊಡುತ್ತದೆ. ಆದ್ದರಿಂದಲೇ ಮುಖ ಕೊಂಚವೇ ಊದಿಕೊಂಡಂತೆ ಕಾಣುತ್ತದೆ. ಕೊಂಚ ಹೊತ್ತಿನ ಬಳಿಕ ಇದು ಸಾಮಾನ್ಯವಾಗಬೇಕು.
ಇದಕ್ಕೆ ಅತ್ಯುತ್ತಮವೆಂದರೆ ತಣ್ಣೀರಿನಿಂದ ಮುಖ ತೊಳೆದುಕೊಳ್ಳುವುದು. ಬಿಸಿನೀರಿನಿಂದ ತೊಳೆದುಕೊಂಡರೆ ಇದಕ್ಕೆ ವಿರುದ್ಧವಾದ ಪರಿಣಾಮವಾಗುತ್ತದೆ. ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳುವುದರಿಂದ, ಅದರಲ್ಲೂ ಬೆಳಿಗ್ಗೆದ್ದ ಬಳಿಕ ತೊಳೆದುಕೊಳ್ಳುವುದರಿಂದ ಮುಖದ ಸೌಂದರ್ಯ, ಚರ್ಮದ ಸೆಳೆತ ಹೆಚ್ಚುತ್ತದೆ ಹಾಗೂ ಊದಿಕೊಂಡ ಚರ್ಮ ಮೊದಲಿನಂತಾಗುತ್ತದೆ. ಬನ್ನಿ, ಈ ವಿಧಾನ ಇನ್ನೂ ಎಷ್ಟು ಪ್ರಯೋಜನಕಾರಿಯಾಗಿದೆ ಎಂಬುದನ್ನು ನೋಡೋಣ:

* ತಣ್ಣೀರಿನಿಂದ ಬೆಳಿಗ್ಗೆ ಮುಖ ತೊಳೆದುಕೊಳ್ಳುವ ಮೂಲಕ ರಾತ್ರಿಯ ವಿಶ್ರಾಂತಿಯ ವೇಳೆ ತೆರೆದಿದ್ದ ಸೂಕ್ಷ್ಮರಂಧ್ರಗಳೆಲ್ಲಾ ಮುಚ್ಚುತ್ತವೆ. ಇದು ಕಣ್ಣುಗಳಿಗೂ ಆರಾಮವನ್ನು ನೀಡುತ್ತದೆ.
* ಚರ್ಮದಲ್ಲಿ ನೆರಿಗೆ ಮೂಡದೇ ಇರಲು ತಣ್ಣೀರಿಗಿಂತ ಇನ್ನೊಂದು ನೆರಿಗೆನಿವಾರಕವಿಲ್ಲ. ಅಷ್ಟೇ ಅಲ್ಲ ಚರ್ಮದ ಸೆಳೆತ ಹೆಚ್ಚಿಸಿ ತಾರುಣ್ಯ ಮತ್ತು ಕಾಂತಿಯನ್ನು ಹೆಚ್ಚಿಸುತ್ತದೆ. ನಿತ್ಯವೂ ಬೆಳಿಗ್ಗೆದ್ದ ತಕ್ಷಣ ಪ್ರಥಮವಾಗಿ ತಣ್ಣೀರಿನಿಂದ ತೊಳೆದುಕೊಳ್ಳುವ ಮೂಲಕ ವಯಸ್ಸಾಗುವುದನ್ನೂ ನಿಧಾನಗೊಳಿಸಬಹುದು.
* ಸೂರ್ಯನ ಪ್ರಖರ ಕಿರಣಗಳ ಪ್ರಭಾವವನ್ನು ಕಡಿಮೆಗೊಳಿಸಬಹುದು. ಏಕೆಂದರೆ ರಾತ್ರಿ ತೆರೆದುಕೊಂಡಿದ್ದ ಸೂಕ್ಷ್ಮರಂಧ್ರಗಳು ಬಿಗಿಯಾಗಿ ಮುಚ್ಚಿದ್ದ ಕಾರಣ ಸೂರ್ಯನ ಕಿರಣಗಳಿಗೆ ಚರ್ಮದ ಸೂಕ್ಷ್ಮಸಂವೇದಿ ಒಳಪದರಕ್ಕೆ ತಲುಪಲು ಸಾಧ್ಯವಾಗುವುದಿಲ್ಲ. ತನ್ಮೂಲಕ ಚರ್ಮ ಹಾನಿಯಿಂದ ರಕ್ಷಿಸಲ್ಪಡುತ್ತದೆ.
*ಬಿಸಿನೀರಿಗಿಂತಲೂ ತಣ್ಣೀರೇ ಉತ್ತಮ
ಬಿಸಿನೀರಿನಿಂದ ಮುಖ ತೊಳೆದುಕೊಳ್ಳುವಾಗ ಕೊಂಚ ಆಹ್ಲಾದಕರ ಎನಿಸಿದರೂ ಮುಖದ ಚರ್ಮಕ್ಕೆ ತಣ್ಣೀರೇ ಅತ್ಯಂತ ಸೂಕ್ತವಾಗಿದೆ. ಏಕೆಂದರೆ ಮುಖದ ಚರ್ಮ ಅತ್ಯಂತ ಸೂಕ್ಷ್ಮಸಂವೇದಿಯಾಗಿದ್ದು ತಾಪಮಾನಕ್ಕೆ ಅತಿಹೆಚ್ಚಾಗಿ ಸ್ಪಂದಿಸುತ್ತದೆ. ಬಿಸಿನೀರಿನಿಂದ ಚರ್ಮದ ಸೂಕ್ಷ್ಮ ರಂಧ್ರಗಳು ಹೆಚ್ಚು ಸ್ಪಂದಿಸಿ ಹೆಚ್ಚಾಗಿ ತೆರೆದುಕೊಳ್ಳುತ್ತವೆ. ದೊಡ್ಡದಾಗಿ ತೆರೆದ ರಂಧ್ರಗಳು ಇನ್ನೂ ದೊಡ್ಡ ಧೂಳಿನ ಕಣಗಳಿಗೆ ಆಹ್ವಾನ ನೀಡುತ್ತದೆ.
ಜೊತೆಗೇ ಹೆಚ್ಚಿನ ಪ್ರಮಾಣದ ಮತ್ತು ಆಳವಾಗಿ ಕುಳಿತುಕೊಳ್ಳಲು ನಾವೇ ರತ್ನಗಂಬಳಿ ಹಾಸಿ ಬೇಡದ ಅತಿಥಿಗಳನ್ನು ಕರೆದಂತಾಗುತ್ತದೆ. ಚರ್ಮ ಸಡಿಲವಾಗಿ ನೆರಿಗೆಗಳು ಶೀಘ್ರವಾಗಿ ಆವರಿಸುತ್ತವೆ. ಬದಲಿಗೆ ತಣ್ಣೀರಿನಿಂದ ತೊಳೆದುಕೊಳ್ಳುವ ಮೂಲಕ ಈ ರಂಧ್ರಗಳು ಇನ್ನಷ್ಟು ಕಿರಿದಾಗಿ ಧೂಳಿನ ಕಣಗಳ ಪ್ರವೇಶಕ್ಕೆ ಪ್ರವೇಶವಿಲ್ಲ ಎಂಬ ಫಲಕ ತೋರಿಸುತ್ತವೆ. ಇದರಿಂದ ಚರ್ಮ ತನ್ನ ಸಹಜ ಸೆಳೆತವನ್ನು ಪಡೆದು ನೆರಿಗೆಗಳಿಂದ ಮುಕ್ತವಾಗಿರುತ್ತದೆ.



Click it and Unblock the Notifications
