Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಬ್ಯೂಟಿ ಟಿಪ್ಸ್: 'ಖರ್ಜೂರ' ಹಣ್ಣಿನ ಫೇಸ್ ಪ್ಯಾಕ್
ಖರ್ಜೂರ ನಮ್ಮ ತ್ವಚೆಗೂ ಉತ್ತಮ ಆರೈಕೆ ನೀಡುತ್ತದೆ ಎಂದು ಹೆಚ್ಚಿನವರಿಗೆ ಗೊತ್ತಿರಲಿಕ್ಕಿಲ್ಲ. ಇದರ ಮುಖಲೇಪ ತಯಾರಿಸಿ ಹಚ್ಚಿಕೊಳ್ಳುವ ಮೂಲಕ ಘಾಸಿಗೊಂಡಿದ್ದ ಚರ್ಮ ಮತ್ತೆ ತನ್ನ ಪೂರ್ವ ಸ್ಥಿತಿಯನ್ನು ತಲುಪುತ್ತದೆ ಅಲ್ಲದೇ ಕಾಂತಿಯೂ ಹೆಚ್ಚುತ್ತದೆ
ಸಿಹಿಯಾದ ಗಾಢಕಂದು ಬಣ್ಣದ ಸಿಹಿಯಾದ ಖರ್ಜೂರ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿವೆ ಎಂಬುದು ಈಗಾಗಲೇ ಸಾಬೀತು ಆಗಿದೆ. ಇದರ ಸೇವನೆಯಿಂದ ಆರೋಗ್ಯ ವೃದ್ಧಿಸುವುದು ಮಾತ್ರವಲ್ಲ, ರಕ್ತ ಶುದ್ಧೀಕರಣ, ಮಲಬದ್ಧತೆ ಇಲ್ಲವಾಗುವ ಉಪಯೋಗಗಳೂ ಇವೆ.
ಆದರೆ ಖರ್ಜೂರ ನಮ್ಮ ತ್ವಚೆಗೂ ಉತ್ತಮ ಆರೈಕೆ ನೀಡುತ್ತದೆ ಎಂದು ಹೆಚ್ಚಿನವರಿಗೆ ಗೊತ್ತಿರಲಿಕ್ಕಿಲ್ಲ. ಇದರ ಮುಖಲೇಪ ತಯಾರಿಸಿ ಹಚ್ಚಿಕೊಳ್ಳುವ ಮೂಲಕ ಘಾಸಿಗೊಂಡಿದ್ದ ಚರ್ಮ ಮತ್ತೆ ತನ್ನ ಪೂರ್ವ ಸ್ಥಿತಿಯನ್ನು ತಲುಪುತ್ತದೆ ಅಲ್ಲದೇ ಕಾಂತಿಯೂ ಹೆಚ್ಚುತ್ತದೆ. ದಿನಂಪ್ರತಿ ಸಿಹಿಸಿಹಿ ಖರ್ಜೂರ ಸೇವಿಸಿದರೆ, ಅಪಾರ ಲಾಭ!
ಈ ಮುಖಲೇಪದಲ್ಲಿ (ಫೇಸ್ ಪ್ಯಾಕ್) ಉತ್ತಮ ಪ್ರಮಾಣದ ವಿಟಮಿನ್ B5 ಇದೆ. ಈ ಪೋಷಕಾಂಶ ದೇಹದಲ್ಲಿ ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುತ್ತದೆ. ಚರ್ಮ ಸಡಿಲವಾಗಲೂ, ನೆರಿಗೆ ಬೀಳಲೂ ಈ ಕಣಗಳೇ ಮುಖ್ಯ ಕಾರಣವಾಗಿದ್ದು ಈ ಕಣಗಳನ್ನು ನಿಷ್ಟೇಷ್ಠಿತಗೊಳಿಸುವ ಮೂಲಕ ಚರ್ಮದ ಸೆಳೆತವನ್ನು ಹೆಚ್ಚಿಸುತ್ತದೆ. ಬನ್ನಿ, ಈ ಮುಖಲೇಪವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ.....

ಹಂತ 1
ಸುಮಾರು ಮೂರರಿಂದ ಐದು ಚೆನ್ನಾಗಿ ಹಣ್ಣಾದ ಖರ್ಜೂರಗಳ ಬೀಜ ನಿವಾರಿಸಿ ಇದನ್ನು ತಣ್ಣೀರಿನಲ್ಲಿ ಚೆನ್ನಾಗಿ ತೊಳೆದು ಹೊರ ಭಾಗದಲ್ಲಿ ಅಂಟಿಕೊಂಡಿದ್ದ ಮರಳು, ಧೂಳನ್ನು ನಿವಾರಿಸಿ.

ಹಂತ 2
ಅರ್ಧ ಕಪ್ ಹಾಲನ್ನು ಚಿಕ್ಕ ಉರಿಯಲ್ಲಿ ಐದು ನಿಮಿಷ ಬಿಸಿಮಾಡಿ. ಬಳಿಕ ಉರಿ ಆರಿಸಿ ಇದರಲ್ಲಿ ಖರ್ಜೂರವನ್ನು ಚಿಕ್ಕ ಚಿಕ್ಕ ತುಂಡುಗಳಾಗಿಸಿ ಮುಳುಗಿಸಿ ಅರ್ಧ ಗಂಟೆ ಹಾಗೇ ನೆನೆಯಲು ಬಿಡಿ.

ಹಂತ 3
ಈ ಖರ್ಜೂರದ ತುಂಡುಗಳನ್ನು ಸೋಸಿ ತೆಗೆದು ಕೊಂಚ ಹಾಲಿನ ಜೊತೆಗೆ ನುಣ್ಣಗೆ ಅರೆಯಿರಿ.

ಹಂತ 4
ಇದಕ್ಕೆ ಒಂದು ದೊಡ್ಡ ಚಮಚ ಗೋಧಿರವೆ ಅಥವಾ ಚಿರೋಟಿ ರವೆಯನ್ನು ಮಿಶ್ರಣ ಮಾಡಿ ಚೆನ್ನಾಗಿ ಗೊಟಾಯಿಸಿ. ಇದು ದಪ್ಪನೆಯ ಜೇನಿನಷ್ಟು ದಪ್ಪಗಿರಬೇಕು ಅಷ್ಟು ಮಾತ್ರ ಹಾಲನ್ನು ಬೆರೆಸಿ. ಬಳಿಕ ಒಂದು ದೊಡ್ಡ ಚಮಚ ಜೇನು ಮತ್ತು ಕೆಲವು ಹನಿ ಪ್ರಿಮ್ರೋಸ್ ಎಣ್ಣೆಯನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.

ಹಂತ 5
ಲೇಪನ ತಯಾರಾದ ಬಳಿಕ ಮುಖವನ್ನು ತಣ್ಣೀರಿನಿಂದ ಚೆನ್ನಾಗಿ ತೊಳೆದುಕೊಂಡು ಟವೆಲ್ಲಿನಿಂದ ಒತ್ತಿ ಒರೆಸಿಕೊಳ್ಳಿ. ಬಳಿಕ ಈ ಲೇಪನವನ್ನು ಮುಖ ಮತ್ತು ಕುತ್ತಿಗೆಯ ಮೇಲೆ ದಪ್ಪನಾಗಿ ಹಚ್ಚಿಕೊಳ್ಳಿ. ಈ ಲೇಪನ ಸುಮಾರು ಮೂವತ್ತು ನಿಮಿಷಗಳ ಕಾಲ ಹಾಗೇ ಒಣಗಲು ಬಿಡಿ.

ಹಂತ 6
ಬಳಿಕ ಮುಖದ ಮೇಲೆ ತಣ್ಣೀರಿನಿಂದ ಪ್ರೋಕ್ಷಳಿಸಿ. ಕೆಲವು ಕ್ಷಣಗಳ ಬಳಿಕ ಈ ಲೇಪನ ಸಡಿಲವಾಗುತ್ತದೆ. ಈಗ ಬೆರಳಿನಿಂದ ವೃತ್ತಾಕಾರದಲ್ಲಿ ಮಸಾಜ್ ಮಾಡುತ್ತಾ ನಡುನಡುವೆ ನೀರನ್ನು ಎರಚಿಕೊಳ್ಳುತ್ತಾ ತೊಳೆದುಕೊಳ್ಳಿ. ಲೇಪನ ಪೂರ್ಣವಾಗಿ ತೊಳೆದು ಹೋದ ಬಳಿಕ ಟವೆಲ್ಲಿನಿಂದ ಒತ್ತಿ ಒರೆಸಿಕೊಳ್ಳಿ.

ವಾರಕ್ಕೊಂದು ಬಾರಿ ಪುನರಾವರ್ತಿಸಿ
ಈ ವಿಧಾನವನ್ನು ವಾರಕ್ಕೊಂದು ಬಾರಿ ಪುನರಾವರ್ತಿಸಿ. ಕೆಲವೇ ವಾರಗಳಲ್ಲಿ ನಿಮ್ಮ ಚರ್ಮದ ಬಣ್ಣ ಪ್ರಖರಗೊಳ್ಳುವುದನ್ನೂ ನೆರಿಗೆಗಳು ಮಾಯವಾಗುವುದನ್ನೂ ಕಾಣಬಹುದು. ಒಂದು ವೇಳೆ ನಿಮ್ಮಲ್ಲಿಯೂ ಉತ್ತಮವಾದ ಮಾಹಿತಿ ಇದ್ದರೆ ನಮ್ಮೊಂದಿಗೆ ಖಂಡಿತಾ ಹಂಚಿಕೊಳ್ಳಿ.



Click it and Unblock the Notifications
