Latest Updates
-
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!
ಫಳ ಫಳ ಹೊಳೆಯುವ ಮುಖದ ಅಂದಕ್ಕೆ ಸರಳ ಟಿಪ್ಸ್
ಭಾರತೀಯರಾದ ನಮ್ಮೆಲ್ಲರ ಮೈಬಣ್ಣವೂ ಒಂದೇ ತೆರನಾಗಿಲ್ಲ ಎಂಬುದು ನಿಮಗೆಲ್ಲಾ ಗೊತ್ತಿರುವ ವಿಷಯವೇ. ಉತ್ತರ ಭಾರತದವರು ಹೆಚ್ಚಾಗಿ ಬೆಳ್ಳಗಿದ್ದರೆ ದಕ್ಷಿಣ ಮತ್ತು ಕರಾವಳಿ ಜನತೆ ಗೋಧಿಬಣ್ಣ ಮತ್ತು ಗಾಢವರ್ಣ ಪಡೆದಿರುತ್ತಾರೆ. ಬಿಸಿಲಿನ ಝಳ ಮತ್ತು ಉಪ್ಪಿನಂಶ ಹೆಚ್ಚಾಗಿರುವ ತೀರದ ಊರುಗಳಲ್ಲಿನ ಜನತೆ ಗೋಧಿಬಣ್ಣ ಹೊಂದಿದ್ದರೂ ಬಿಸಿಲಿಗೆ ಒಡ್ಡಿರುವ ಚರ್ಮದ ಭಾಗ ಗಾಢವರ್ಣ ಪಡೆದಿರುತ್ತದೆ.
ಸಾಮಾನ್ಯವಾಗಿ ಸೂರ್ಯನ ಕಿರಣಗಳಲ್ಲಿರುವ ಅಲ್ಟ್ರಾವಯೋಲೆಟ್ ಪ್ರಭಾವಳಿ ಇದಕ್ಕೆ ನೇರಕಾರಣವಾದರೆ ಆ ಪ್ರದೇಶದ ವಾತಾವರಣ ಹಾಗೂ ಗಾಳಿಯಲ್ಲಿರುವ ಉಪ್ಪಿನಂಶ ಇನ್ನೊಂದು ಕಾರಣ. ಹೀಗೆ ಅನೈಚ್ಛಿಕವಾಗಿ ಮುಖದ ಕಾಂತಿ, ಹಾಗೂ ದೇಹದ ಚರ್ಮ ಕಪ್ಪುಗೊಂಡವರು ತಮ್ಮ ನೈಸರ್ಗಿಕ ಬಣ್ಣವನ್ನು ಪಡೆಯಲು ಹಲವು ಚಿಕಿತ್ಸೆಗಳನ್ನು ಮಾಡಿ, ಕೊನೆಗೆ ಯಾವುದೇ ಫಲಿತಂಶಗಳು ಸಿಗದೇ, ಪೆಚ್ಚು ಮೋರೆ ಹಾಕಿ ಕುಳಿತುಕೊಳ್ಳುವ ಸರದಿ ನಿಮ್ಮದಾಗುತ್ತದೆ ಅಲ್ಲವೇ..? ಚಿಂತಿಸದಿರಿ ಬನ್ನಿ, ಇಂದು ನೈಸರ್ಗಿಕವಾಗಿ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸುವ ಕೆಲವೊಂದು ಪರಿಣಾಮಕಾರಿಯಾದ ಮನೆಮದ್ದನ್ನು ನೀಡುತ್ತಿದ್ದೇವೆ ಮುಂದೆ ಓದಿ...

ನೆನೆಸಿದ ಬಾದಾಮಿ
ರಾತ್ರಿಯಿಡೀ ಬಾದಾಮಿಗಳನ್ನು ತಣ್ಣನೆಯ ನೀರಿನಲ್ಲಿ ಮುಳುಗಿಸಿಟ್ಟು ಬೆಳಿಗ್ಗೆ ನುಣ್ಣಗೆ ಅರೆದು ಲೇಪನ ತಯಾರಿಸಿಕೊಳ್ಳಿ. (ಕಲ್ಲಿನ ಮೇಲೆ ತೇದಿ ತಯಾರಿಸಿದರೆ ಉತ್ತಮ ಪರಿಣಾಮ ದೊರಕುತ್ತದೆ). ಈ ಲೇಪನವನ್ನು ದಿನಕ್ಕೆರಡು ಬಾರಿ ತ್ವಚೆಗೆ ಹಚ್ಚುವುದರಿಂದ ನೈಸರ್ಗಿಕ ವರ್ಣವನ್ನು ಶೀಘ್ರವಾಗಿ ಪಡೆಯಬಹುದು.

ಪುದೀನಾ ಹಾಗೂ ಮೊಸರು
ಕೆಲವು ಪುದೀನಾ ಎಲೆಗಳನ್ನು ಮಿಕ್ಸಿಗೆ ಹಾಕಿ ಅರೆದು ಅದಕ್ಕೆ ಸ್ವಲ್ಪ ಮೊಸರು ಸೇರಿಸಿಕೊಂಡು, ಫೇಸ್ ಪ್ಯಾಕ್ ರೀತಿ ಮಾಡಿಕೊಂಡು, ಪ್ರತಿದಿನ ಮುಖಕ್ಕೆ ಹಚ್ಚಿಕೊಳ್ಳಿ, ಇದರಿಂದ ಮುಖದ ಮೇಲಿನ ಕಪ್ಪು ಕಲೆಗಳು ನಿವಾರಣೆಯಾಗುವುದರ ಜೊತೆಗೆ, ಮುಖ ಇನ್ನಷ್ಟು ಕಾಂತಿಯುಕ್ತಗೊಳ್ಳುತ್ತದೆ.

ತುಳಸಿ ಎಲೆಯ ಚಿಕಿತ್ಸೆ
ಹಬೆಯಾಡುತ್ತಿರುವ ಬಿಸಿನೀರಿಗೆ ಸುಮಾರು ಒಂದು ಮುಷ್ಟಿಯಷ್ಟು ತುಳಸಿ ಎಲೆಗಳನ್ನು ಕೈಯಲ್ಲಿಯೇ ಸಾಕಷ್ಟು ಹಿಚುಕಿ ಸೇರಿಸಿ ಕೊಂಚ ಹೊತ್ತು ಮುಚ್ಚಳ ಮುಚ್ಚಿಡಿ. ಸುಮಾರು ಐದು ನಿಮಿಷಗಳ ಬಳಿಕ ಈ ಹಬೆಯನ್ನು ಮುಖದ ಚರ್ಮಕ್ಕೆ ಒಡ್ಡುವುದರಿಂದ ಚರ್ಮವನ್ನು ಸ್ವಚ್ಛಗೊಳಿಸುವುದು ಮಾತ್ರವಲ್ಲ, ಮೊಡವೆಗಳಿಗೆ ಕಾರಣವಾಗುವ ಚರ್ಮದಡಿಯ ಕೊಳಕನ್ನೂ ಮೂಲದಿಂದ ಕಿತ್ತೆಸೆಯುತ್ತದೆ.

ಕಡಲೆಹಿಟ್ಟು ಹಾಗೂ ತುಳಸಿಎಲೆ
ಒಂದು ದೊಡ್ಡಚಮಚ ಕಡಲೆಹಿಟ್ಟಿನಲ್ಲಿ ಒಂದು ಹಿಡಿಯಷ್ಟು ತುಳಸಿ ಎಲೆಗಳನ್ನು ಸ್ವಲ್ಪ ನೀರು ಹಾಕಿ ಅರೆಯಿರಿ. ನೀರಿನ ಬದಲು ಗುಲಾಬಿ ನೀರು ಸೇರಿಸಿದರೆ ಈ ಮುಖಲೇಪ ಇನ್ನಷ್ಟು ಉತ್ತಮಗೊಳ್ಳುತ್ತದೆ. ಮುಖಕ್ಕೆ ಹಚ್ಚುವಷ್ಟು ಗಾಢತೆ ಬಂದ ಬಳಿಕ ಮುಖ, ಕುತ್ತಿಗೆ, ಕೈಗಳಿಗೆ ಹಚ್ಚಿ ಸುಮಾರು ಅರ್ಧ ಗಂಟೆ ಕಾಲ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ, ಸೋಪು ಉಪಯೋಗಿಸಬೇಡಿ.

ಅನ್ನ ಬಸಿದ ನೀರು, ಮೊಸರು ಮತ್ತು ರೋಸ್ ವಾಟರ್
ನಾಲ್ಕು ದೊಡ್ಡಚಮಚ ಅನ್ನಬಸಿದ ನೀರು (ಬೆಳ್ತಿಗೆ ಅನ್ನ), ಒಂದು ದೊಡ್ಡ ಚಮಚ ಮೊಸರು ಮತ್ತು ಕೆಲವು ಹನಿ ಗುಲಾಬಿನೀರನ್ನು ಸೇರಿಸಿ ಹದವಾಗಿ ಮಿಶ್ರಣ ಮಾಡಿಕೊಳ್ಳಿ. ಈ ಲೇಪನವನ್ನು ವೃತ್ತಾಕಾರದಲ್ಲಿ ಮಸಾಜ್ ಮಾಡುತ್ತಾ ಮುಖಕ್ಕೆ ಹಚ್ಚಿಕೊಳ್ಳಿ. ಸುಮಾರು ಮೂವತ್ತು ನಿಮಿಷಗಳ ಕಾಲ ಮಸಾಜ್ ಮುಂದುವರೆಸಿ. ಇದು ಕ್ಷಿಪ್ರವಾಗಿ ಮುಖದ ಊತವನ್ನು ನಿವಾರಿಸುತ್ತದೆ ಹಾಗೂ ಮುಖದ ಸೌಂದರ್ಯವನ್ನು ವೃದ್ದಿಸುತ್ತದೆ. ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವುದು ಅನಿವಾರ್ಯವಾಗಿದ್ದು ಹೆಚ್ಚಿನ ಸಮಯ ಇಲ್ಲದಿದ್ದರೆ ಈ ವಿಧಾನ ಹೆಚ್ಚು ಸೂಕ್ತವಾಗಿದೆ.

ಸೌತೆ, ಲಿಂಬೆ ಮತ್ತು ಮೊಟ್ಟೆಯ ಬಿಳಿಭಾಗದ ಫೇಸ್ ಪ್ಯಾಕ್
ಒಂದು ಇಡಿಯ ಸೌತೆಕಾಯಿಯ ಸಿಪ್ಪೆ ಸುಲಿದು ಬೀಜ ನಿವಾರಿಸಿ ನುಣ್ಣಗೆ ಅರೆಯಿರಿ. ಇದಕ್ಕೆ ಒಂದು ಲಿಂಬೆಯ ರಸ ಮತ್ತು ಒಂದು ಮೊಟ್ಟೆಯ ಬಿಳಿಭಾಗವನ್ನು ಪ್ರತ್ಯೇಕಿಸಿ ಬೆರೆಸಿ ನಯವಾದ ಮಿಶ್ರಣ ತಯಾರಿಸಿ. ತಾಜಾ ಇದ್ದಂತೆಯೇ ಈಗತಾನೇ ಕೊಂಚ ಬಿಸಿನೀರಿನಲ್ಲಿ ತೊಳೆದಿರುವ ಮುಖದ ಮೇಲೆ ಏಕಪ್ರಕಾರವಾಗಿ ಹಚ್ಚಿ. ಕಣ್ಣುಗಳ ಒಳಗೆ ಹೋಗದಂತೆ ಎಚ್ಚರವಹಿಸಿ. ಹತ್ತು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಿ. ಈ ಲೇಪವನ್ನು ಫ್ರಿಜ್ಜಿನಲ್ಲಿಟ್ಟರೂ ಒಂದು ದಿನದ ಹೆಚ್ಚು ಕಾಲ ಬಳಸಲು ಸಾಧ್ಯವಿಲ್ಲದ ಕಾರಣ ಎರಡನೆಯ ದಿನ ಅಗತ್ಯವಿದ್ದರೆ ಹೊಸದಾಗಿಯೇ ತಯಾರಿಸಿಕೊಳ್ಳಬೇಕು.



Click it and Unblock the Notifications