Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಫಳ ಫಳ ಹೊಳೆಯುವ ಮುಖದ ಅಂದಕ್ಕೆ ಸರಳ ಟಿಪ್ಸ್
ಭಾರತೀಯರಾದ ನಮ್ಮೆಲ್ಲರ ಮೈಬಣ್ಣವೂ ಒಂದೇ ತೆರನಾಗಿಲ್ಲ ಎಂಬುದು ನಿಮಗೆಲ್ಲಾ ಗೊತ್ತಿರುವ ವಿಷಯವೇ. ಉತ್ತರ ಭಾರತದವರು ಹೆಚ್ಚಾಗಿ ಬೆಳ್ಳಗಿದ್ದರೆ ದಕ್ಷಿಣ ಮತ್ತು ಕರಾವಳಿ ಜನತೆ ಗೋಧಿಬಣ್ಣ ಮತ್ತು ಗಾಢವರ್ಣ ಪಡೆದಿರುತ್ತಾರೆ. ಬಿಸಿಲಿನ ಝಳ ಮತ್ತು ಉಪ್ಪಿನಂಶ ಹೆಚ್ಚಾಗಿರುವ ತೀರದ ಊರುಗಳಲ್ಲಿನ ಜನತೆ ಗೋಧಿಬಣ್ಣ ಹೊಂದಿದ್ದರೂ ಬಿಸಿಲಿಗೆ ಒಡ್ಡಿರುವ ಚರ್ಮದ ಭಾಗ ಗಾಢವರ್ಣ ಪಡೆದಿರುತ್ತದೆ.
ಸಾಮಾನ್ಯವಾಗಿ ಸೂರ್ಯನ ಕಿರಣಗಳಲ್ಲಿರುವ ಅಲ್ಟ್ರಾವಯೋಲೆಟ್ ಪ್ರಭಾವಳಿ ಇದಕ್ಕೆ ನೇರಕಾರಣವಾದರೆ ಆ ಪ್ರದೇಶದ ವಾತಾವರಣ ಹಾಗೂ ಗಾಳಿಯಲ್ಲಿರುವ ಉಪ್ಪಿನಂಶ ಇನ್ನೊಂದು ಕಾರಣ. ಹೀಗೆ ಅನೈಚ್ಛಿಕವಾಗಿ ಮುಖದ ಕಾಂತಿ, ಹಾಗೂ ದೇಹದ ಚರ್ಮ ಕಪ್ಪುಗೊಂಡವರು ತಮ್ಮ ನೈಸರ್ಗಿಕ ಬಣ್ಣವನ್ನು ಪಡೆಯಲು ಹಲವು ಚಿಕಿತ್ಸೆಗಳನ್ನು ಮಾಡಿ, ಕೊನೆಗೆ ಯಾವುದೇ ಫಲಿತಂಶಗಳು ಸಿಗದೇ, ಪೆಚ್ಚು ಮೋರೆ ಹಾಕಿ ಕುಳಿತುಕೊಳ್ಳುವ ಸರದಿ ನಿಮ್ಮದಾಗುತ್ತದೆ ಅಲ್ಲವೇ..? ಚಿಂತಿಸದಿರಿ ಬನ್ನಿ, ಇಂದು ನೈಸರ್ಗಿಕವಾಗಿ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸುವ ಕೆಲವೊಂದು ಪರಿಣಾಮಕಾರಿಯಾದ ಮನೆಮದ್ದನ್ನು ನೀಡುತ್ತಿದ್ದೇವೆ ಮುಂದೆ ಓದಿ...

ನೆನೆಸಿದ ಬಾದಾಮಿ
ರಾತ್ರಿಯಿಡೀ ಬಾದಾಮಿಗಳನ್ನು ತಣ್ಣನೆಯ ನೀರಿನಲ್ಲಿ ಮುಳುಗಿಸಿಟ್ಟು ಬೆಳಿಗ್ಗೆ ನುಣ್ಣಗೆ ಅರೆದು ಲೇಪನ ತಯಾರಿಸಿಕೊಳ್ಳಿ. (ಕಲ್ಲಿನ ಮೇಲೆ ತೇದಿ ತಯಾರಿಸಿದರೆ ಉತ್ತಮ ಪರಿಣಾಮ ದೊರಕುತ್ತದೆ). ಈ ಲೇಪನವನ್ನು ದಿನಕ್ಕೆರಡು ಬಾರಿ ತ್ವಚೆಗೆ ಹಚ್ಚುವುದರಿಂದ ನೈಸರ್ಗಿಕ ವರ್ಣವನ್ನು ಶೀಘ್ರವಾಗಿ ಪಡೆಯಬಹುದು.

ಪುದೀನಾ ಹಾಗೂ ಮೊಸರು
ಕೆಲವು ಪುದೀನಾ ಎಲೆಗಳನ್ನು ಮಿಕ್ಸಿಗೆ ಹಾಕಿ ಅರೆದು ಅದಕ್ಕೆ ಸ್ವಲ್ಪ ಮೊಸರು ಸೇರಿಸಿಕೊಂಡು, ಫೇಸ್ ಪ್ಯಾಕ್ ರೀತಿ ಮಾಡಿಕೊಂಡು, ಪ್ರತಿದಿನ ಮುಖಕ್ಕೆ ಹಚ್ಚಿಕೊಳ್ಳಿ, ಇದರಿಂದ ಮುಖದ ಮೇಲಿನ ಕಪ್ಪು ಕಲೆಗಳು ನಿವಾರಣೆಯಾಗುವುದರ ಜೊತೆಗೆ, ಮುಖ ಇನ್ನಷ್ಟು ಕಾಂತಿಯುಕ್ತಗೊಳ್ಳುತ್ತದೆ.

ತುಳಸಿ ಎಲೆಯ ಚಿಕಿತ್ಸೆ
ಹಬೆಯಾಡುತ್ತಿರುವ ಬಿಸಿನೀರಿಗೆ ಸುಮಾರು ಒಂದು ಮುಷ್ಟಿಯಷ್ಟು ತುಳಸಿ ಎಲೆಗಳನ್ನು ಕೈಯಲ್ಲಿಯೇ ಸಾಕಷ್ಟು ಹಿಚುಕಿ ಸೇರಿಸಿ ಕೊಂಚ ಹೊತ್ತು ಮುಚ್ಚಳ ಮುಚ್ಚಿಡಿ. ಸುಮಾರು ಐದು ನಿಮಿಷಗಳ ಬಳಿಕ ಈ ಹಬೆಯನ್ನು ಮುಖದ ಚರ್ಮಕ್ಕೆ ಒಡ್ಡುವುದರಿಂದ ಚರ್ಮವನ್ನು ಸ್ವಚ್ಛಗೊಳಿಸುವುದು ಮಾತ್ರವಲ್ಲ, ಮೊಡವೆಗಳಿಗೆ ಕಾರಣವಾಗುವ ಚರ್ಮದಡಿಯ ಕೊಳಕನ್ನೂ ಮೂಲದಿಂದ ಕಿತ್ತೆಸೆಯುತ್ತದೆ.

ಕಡಲೆಹಿಟ್ಟು ಹಾಗೂ ತುಳಸಿಎಲೆ
ಒಂದು ದೊಡ್ಡಚಮಚ ಕಡಲೆಹಿಟ್ಟಿನಲ್ಲಿ ಒಂದು ಹಿಡಿಯಷ್ಟು ತುಳಸಿ ಎಲೆಗಳನ್ನು ಸ್ವಲ್ಪ ನೀರು ಹಾಕಿ ಅರೆಯಿರಿ. ನೀರಿನ ಬದಲು ಗುಲಾಬಿ ನೀರು ಸೇರಿಸಿದರೆ ಈ ಮುಖಲೇಪ ಇನ್ನಷ್ಟು ಉತ್ತಮಗೊಳ್ಳುತ್ತದೆ. ಮುಖಕ್ಕೆ ಹಚ್ಚುವಷ್ಟು ಗಾಢತೆ ಬಂದ ಬಳಿಕ ಮುಖ, ಕುತ್ತಿಗೆ, ಕೈಗಳಿಗೆ ಹಚ್ಚಿ ಸುಮಾರು ಅರ್ಧ ಗಂಟೆ ಕಾಲ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ, ಸೋಪು ಉಪಯೋಗಿಸಬೇಡಿ.

ಅನ್ನ ಬಸಿದ ನೀರು, ಮೊಸರು ಮತ್ತು ರೋಸ್ ವಾಟರ್
ನಾಲ್ಕು ದೊಡ್ಡಚಮಚ ಅನ್ನಬಸಿದ ನೀರು (ಬೆಳ್ತಿಗೆ ಅನ್ನ), ಒಂದು ದೊಡ್ಡ ಚಮಚ ಮೊಸರು ಮತ್ತು ಕೆಲವು ಹನಿ ಗುಲಾಬಿನೀರನ್ನು ಸೇರಿಸಿ ಹದವಾಗಿ ಮಿಶ್ರಣ ಮಾಡಿಕೊಳ್ಳಿ. ಈ ಲೇಪನವನ್ನು ವೃತ್ತಾಕಾರದಲ್ಲಿ ಮಸಾಜ್ ಮಾಡುತ್ತಾ ಮುಖಕ್ಕೆ ಹಚ್ಚಿಕೊಳ್ಳಿ. ಸುಮಾರು ಮೂವತ್ತು ನಿಮಿಷಗಳ ಕಾಲ ಮಸಾಜ್ ಮುಂದುವರೆಸಿ. ಇದು ಕ್ಷಿಪ್ರವಾಗಿ ಮುಖದ ಊತವನ್ನು ನಿವಾರಿಸುತ್ತದೆ ಹಾಗೂ ಮುಖದ ಸೌಂದರ್ಯವನ್ನು ವೃದ್ದಿಸುತ್ತದೆ. ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವುದು ಅನಿವಾರ್ಯವಾಗಿದ್ದು ಹೆಚ್ಚಿನ ಸಮಯ ಇಲ್ಲದಿದ್ದರೆ ಈ ವಿಧಾನ ಹೆಚ್ಚು ಸೂಕ್ತವಾಗಿದೆ.

ಸೌತೆ, ಲಿಂಬೆ ಮತ್ತು ಮೊಟ್ಟೆಯ ಬಿಳಿಭಾಗದ ಫೇಸ್ ಪ್ಯಾಕ್
ಒಂದು ಇಡಿಯ ಸೌತೆಕಾಯಿಯ ಸಿಪ್ಪೆ ಸುಲಿದು ಬೀಜ ನಿವಾರಿಸಿ ನುಣ್ಣಗೆ ಅರೆಯಿರಿ. ಇದಕ್ಕೆ ಒಂದು ಲಿಂಬೆಯ ರಸ ಮತ್ತು ಒಂದು ಮೊಟ್ಟೆಯ ಬಿಳಿಭಾಗವನ್ನು ಪ್ರತ್ಯೇಕಿಸಿ ಬೆರೆಸಿ ನಯವಾದ ಮಿಶ್ರಣ ತಯಾರಿಸಿ. ತಾಜಾ ಇದ್ದಂತೆಯೇ ಈಗತಾನೇ ಕೊಂಚ ಬಿಸಿನೀರಿನಲ್ಲಿ ತೊಳೆದಿರುವ ಮುಖದ ಮೇಲೆ ಏಕಪ್ರಕಾರವಾಗಿ ಹಚ್ಚಿ. ಕಣ್ಣುಗಳ ಒಳಗೆ ಹೋಗದಂತೆ ಎಚ್ಚರವಹಿಸಿ. ಹತ್ತು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಿ. ಈ ಲೇಪವನ್ನು ಫ್ರಿಜ್ಜಿನಲ್ಲಿಟ್ಟರೂ ಒಂದು ದಿನದ ಹೆಚ್ಚು ಕಾಲ ಬಳಸಲು ಸಾಧ್ಯವಿಲ್ಲದ ಕಾರಣ ಎರಡನೆಯ ದಿನ ಅಗತ್ಯವಿದ್ದರೆ ಹೊಸದಾಗಿಯೇ ತಯಾರಿಸಿಕೊಳ್ಳಬೇಕು.



Click it and Unblock the Notifications
