Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಸೌಂದರ್ಯ ವೃದ್ಧಿಸಬೇಕೇ? ಇಲ್ಲಿದೆ ನೋಡಿ ನೈಸರ್ಗಿಕ ಔಷಧಿ!
ವ್ಯಕ್ತಿಯೊಬ್ಬನ ತ್ವಚೆಯನ್ನು ನೋಡಿದ ತಕ್ಷಣ ಆತ ಆರೋಗ್ಯವಂತನಾಗಿದ್ದಾನೆಯಾ ಎಂದು ಹೇಳಬಹುದಂತೆ. ತ್ವಚೆಗೆ ಅಷ್ಟು ಮಹತ್ವವಿದೆ. ನಿಮ್ಮ ತ್ವಚೆಯಿಂದಲೇ ದೇಹದ ಸೌಂದರ್ಯವೂ ಎದ್ದು ಕಾಣುತ್ತದೆ. ಚರ್ಮದ ಆರೈಕೆ ಮಾಡಲು ಹಲವಾರು ರೀತಿಯ ಕ್ರೀಮ್, ಲೋಷನ್ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಕೆಲವರು ಇದನ್ನು ಬಳಸಿಕೊಂಡು ಚರ್ಮದ ಆರೈಕೆ ಮಾಡುತ್ತಾರೆ. ಆದರೆ ಇದರಲ್ಲಿ ಕೆಲವೊಂದು ರಾಸಾಯನಿಕಗಳನ್ನು ಬಳಸಿರುವುದರಿಂದ ಅದು ಮುಂದೆ ಚರ್ಮದ ಮೇಲೆ ದುಷ್ಪರಿಣಾಮವನ್ನು ಬೀರಬಹುದು.

ಚರ್ಮದಲ್ಲಿನ ನೆರಿಗೆ, ಕಲೆಗಳು ಮಾಯವಾಗಬಹುದಾದರೂ ಇದರ ಅಡ್ಡಪರಿಣಾಮಗಳ ಬಗ್ಗೆ ಯೋಚಿಸುವುದು ಅತೀ ಅಗತ್ಯ. ಇದಕ್ಕಾಗಿಯೇ ನಾವು ನೈಸರ್ಗಿಕ ಹಾಗೂ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಚರ್ಮದ ಆರೈಕೆ ಮಾಡಬಲ್ಲ ಮನೆಮದ್ದನ್ನು ನಿಮಗೆ ತಿಳಿಸಿಕೊಡಲಿದ್ದೇವೆ. ಮನೆಯಲ್ಲೇ ಮಾಡಿದ ಈ ಸೌಂದರ್ಯವರ್ಧಕಗಳನ್ನು ಬಳಸುವುದರಿಂದ ನಿಮ್ಮ ತ್ವಚೆ ಕಾಂತಿಯುತ ಮತ್ತು ಯೌವನಭರಿತವಾಗಿ ಕಾಣಬಹುದು. ಇಂತಹ ಬ್ಯೂಟಿ ಟಿಪ್ಸ್ ಯಾವಾಗಲೂ ನಿಮ್ಮ ಪಾಕೆಟ್ನಲ್ಲಿರಲಿ!
ಬಾದಾಮಿ ಹುಡಿ, ಜೇನು ಮತ್ತು ಬಿಸಿ ಹಾಲಿನ ಮಿಶ್ರಣವನ್ನು ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ನಿಮ್ಮ ತ್ವಚೆಯ ಬಣ್ಣ ಹೊಳೆಯುವುದು. ಇದು ಒಣಗಿರುವ ಚರ್ಮಕ್ಕೆ ತೇವಾಂಶವನ್ನು ನೀಡಿ ಚರ್ಮ ಕಾಂತಿಯನ್ನು ಪಡೆಯಲು ನೆರವಾಗುವುದು. ನೆಲಕಡಲೆ ಮತ್ತು ಹಾಲಿನ ಮಿಶ್ರಣವನ್ನು ಹಚ್ಚಿಕೊಂಡರೆ ಜಿಡ್ಡಿನ ಚರ್ಮದವರು ಕಾಂತಿಯನ್ನು ಪಡೆಯಬಹುದಾಗಿದೆ. ಬಾದಾಮಿ ಎಣ್ಣೆಯಲ್ಲಿದೆ 6 ಸೌಂದರ್ಯವರ್ಧಕ ಗುಣಗಳು
ನೆಲಕಡಲೆ, ಲಿಂಬೆರಸ, ಹಳದಿ ಮತ್ತು ಮೊಸರಿನಿಂದ ಮಾಡಿರುವ ಪೇಸ್ಟ್ನ್ನು ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಚರ್ಮವು ಬಿಳಿ ಬಣ್ಣವನ್ನು ಪಡೆದು ಹೊಳೆಯುವುದು. ಕುದಿಸದೆ ಇರುವ ಹಾಲನ್ನು ಚರ್ಮಕ್ಕೆ ಹಚ್ಚಿಕೊಂಡು ಮಸಾಜ್ ಮಾಡಿಕೊಂಡರೆ ಕಾಂತಿ ಬರುವುದು. ಇದು ತುಂಬಾ ಸಾಂಪ್ರದಾಯಿಕ ಹಾಗೂ ಪರಿಣಾಮಕಾರಿ ಸೌಂದರ್ಯ ವರ್ಧಕ ವಿಧಾನವಾಗಿದೆ. ಸಾಸಿವೆ ಹುಡಿ ಮತ್ತು ಹಾಲಿನ ಮಿಶ್ರಣವನ್ನು ಚರ್ಮಕ್ಕೆ ಹಚ್ಚಿಕೊಂಡರೆ ಕಲೆಗಳು ನಿವಾರಣೆಯಾಗುವುದು.
ಸೂರ್ಯನ ಕಿರಣಗಳಿಂದ ಸುಟ್ಟ ಚರ್ಮಕ್ಕೆ ಇಲ್ಲಿ ಕೆಲವೊಂದು ಮದ್ದುಗಳನ್ನು ಸೂಚಿಸಲಾಗಿದೆ. ಚರ್ಮದ ಮೇಲೆ ಸೂರ್ಯನ ಕಿರಣಗಳಿಂದ ಸುಟ್ಟ ಕಲೆಗಳು ಆಗಿದ್ದರೆ ಅಲೋವೆರಾದ ಜ್ಯೂಸ್ ನಿಂದ ಚರ್ಮವನ್ನು ಉಜ್ಜಿಕೊಳ್ಳಿ. ಆ್ಯಪಲ್ ಸೀಡರ್ ವಿನೇಗರ್ ಕೂಡ ಸೂರ್ಯನಿಂದ ಸುಟ್ಟ ಚರ್ಮಕ್ಕೆ ಅತ್ಯಂತ ನೈಸರ್ಗಿಕ ಮದ್ದು. ಎರಡು ಚಮಚ ಮಜ್ಜಿಗೆ ಮತ್ತು ಸ್ವಲ್ಪ ಟೊಮೆಟೊ ರಸವನ್ನು ಹಾಕಿಕೊಂಡು ಮೈಗೆ ಹಚ್ಚಿಕೊಂಡರೆ
ಸೂರ್ಯನಿಂದ ಸುಟ್ಟ ಚರ್ಮಗಳು ನಿವಾರಣೆಯಾಗುವುದು. ನೆರಿಗೆಯನ್ನು ದೂರ ಮಾಡಲು ಹಲವಾರು ರೀತಿಯ ವಿಧಾನಗಳಿವೆ. ತೆಂಗಿನ ಎಣ್ಣೆಯನ್ನು ಮೈಗೆ ಚೆನ್ನಾಗಿ ತಿಕ್ಕಿಕೊಳ್ಳಬೇಕು. ಅನಾನಸಿನ ಸಿಪ್ಪೆಯನ್ನು ಚರ್ಮಕ್ಕೆ ಸರಿಯಾಗಿ ತಿಕ್ಕಿಕೊಂಡರೆ ನೆರಿಗೆಗೆಳು ದೂರವಾಗಿ ಚರ್ಮವು ಕಾಂತಿಯುತವಾಗುವುದು. ಮೊಟ್ಟೆಯ ಬಿಳಿಭಾಗದ ಚಿಕಿತ್ಸೆ-ಮುಖದ ನೆರಿಗೆ ಮಂಗಮಾಯ!



Click it and Unblock the Notifications


