Latest Updates
-
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಮುಖದ ಅಂದ-ಚೆಂದ ಹೆಚ್ಚಿಸುವ ಕಿತ್ತಳೆ ಸಿಪ್ಪೆಯ ಫೇಸ್ ಪ್ಯಾಕ್
ನಿಮಗೆ ಮೊಡವೆಯ ತೊಂದರೆ ಇದೆಯೇ? ಮುಖದ ಕಾಂತಿಯೂ ಕುಂದಿದೆಯೇ? ಇದುವರೆಗೆ ನಡೆಸಿದ ಪ್ರಯತ್ನ ಅಷ್ಟೊಂದು ಫಲಕಾರಿಯಾಗಿಲ್ಲವೇ? ಹಾಗಾದರೆ ಕಿತ್ತಳೆ ಸಿಪ್ಪೆಯ ಆರೈಕೆ ನಿಮ್ಮ ಮೊಡವೆಗಳನ್ನು ನಿವಾರಿಸಬಹುದು.
ಇದಕ್ಕೆ ಕೊಂಚ ಪೂರ್ವ ತಯಾರಿ ಅಗತ್ಯ. ಕೆಲವು ಕಿತ್ತಳೆ ಸಿಪ್ಪೆಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಚಿಕ್ಕದಾಗಿ ಪುಡಿ ಮಾಡಿ ಕೊಂಚ ನೀರಿನೊಂದಿಗೆ ಕಡೆದು ಅಥವಾ ಅರೆದು ಮುಖಕ್ಕೆ ಹಚ್ಚಿಕೊಳ್ಳುವ ಮೂಲಕ ಮೊಡವೆಗಳು ಶೀಘ್ರವಾಗಿ ಕಲೆಯಿಲ್ಲದೇ ಮಾಯವಾಗುತ್ತವೆ. ಕೆಲವೇ ವಾರಗಳಲ್ಲಿ ನಿಮ್ಮ ಮುಖ ಮೊಡವೆಯ ಕುರುಹೂ ಇಲ್ಲದೇ ಕಾಂತಿಯುಕ್ತವಾಗುತ್ತದೆ.

ಇನ್ನೊಂದು ವಿಧಾನದಲ್ಲಿ ಎರಡು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಕಿತ್ತಳೆ ಸಿಪ್ಪೆಯ ಪುಡಿಯನ್ನು ಚೆನ್ನಾಗಿ ಬೆರೆಸಿ ಮೂಗಿನ ಪಕ್ಕ ಮತ್ತು ಮೂಗಿನ ತುದಿಯ ಭಾಗದಲ್ಲಿ ಆವರಿಸಿರುವ ಬ್ಲಾಕ್ ಹೆಡ್ಗಳ ಮೇಲೆ ತೆಳುವಾಗಿ ಹಚ್ಚಿ ವೃತ್ತಾಕಾರದ ಮಸಾಜ್ ಮೂಲಕ ಹಚ್ಚಿ. ಹದಿನೈದು ನಿಮಿಷ ಬಿಟ್ಟು ಉಗುರುಬೆಚ್ಚನಯೆ ನೀರಿನಿಂದ ತೊಳೆದುಕೊಳ್ಳಿ. ಇದರಿಂದ ಬ್ಲಾಕ್ ಹೆಡ್ ನಿವಾರಣೆಯಾಗುತ್ತದೆ. ಕಿತ್ತಳೆ- ಬಾಳೆಹಣ್ಣಿನ ಸಿಪ್ಪೆಯ ಪವರ್ಗೆ ಬೆರಗಾಗಲೇಬೇಕು..!
*ಮುಖದ ಕಾಂತಿಗೆ
ಒಂದು ಚಿಕ್ಕಚಮಚ ಮೊಸರು, ಅರ್ಧ ಚಿಕ್ಕಚಮಚ ಜೇನು ಮತ್ತು ಒಂದು ಚಿಕ್ಕಚಮಚ ಕಿತ್ತಳೆಸಿಪ್ಪೆಯ ಪುಡಿ ಬೆರೆಸಿ ನಯವಾದ ಲೇಪನ ತಯಾರಿಸಿ. ಈ ಲೇಪನವನ್ನು ತೆಳುವಾಗಿ ಮುಖಕ್ಕೆ ಲೇಪಿಸಿ ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ ಹಾಗೂ ಕಲೆಗಳು ಇಲ್ಲವಾಗುತ್ತವೆ. ಒಂದು ವೇಳೆ ನಿಮ್ಮ ಚರ್ಮ ಒಣಚರ್ಮವಾಗಿದ್ದರೆ ಈ ಲೇಪನದಲ್ಲಿ ಮೂರು ಹನಿ ಆಲಿವ್ ಅಥವಾ ಕೊಬ್ಬರಿ ಎಣ್ಣೆಯನ್ನು ಸೇರಿಸಿ.
*ಒಂದು ದೊಡ್ಡಚಮಚ ಜೇನು, ಅರ್ಧ ಚಿಕ್ಕ ಚಮಚ ಕಿತ್ತಳೆ ಸಿಪ್ಪೆಯ ರಸ, ಅರ್ಧ ಚಿಕ್ಕಚಮಚ ಲಿಂಬೆರಸ ಸೇರಿಸಿ ಮುಖಲೇಪ ತಯಾರಿಸಿ. ಈ ಲೇಪನವನ್ನು ಈಗತಾನೇ ತೊಳೆದ ಮುಖಕ್ಕೆ ತೆಳುವಾಗಿ ಲೇಪಿಸಿ ಹದಿನೈದು ನಿಮಿಷ ಬಿಟ್ಟು ಬಳಿಕ ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ. ಈ ವಿಧಾನದಿಂದ ಮುಖದ ಕಾಂತಿ ಹೆಚ್ಚುತ್ತದೆ. ಕಿತ್ತಳೆ ಸಿಪ್ಪೆಯಿಂದ ಹೆಚ್ಚಿಸಿ ಮುಖದ ಬಿಳುಪು
ಮುಖದ ನೆರಿಗೆಗಳಿಗೆ
ಸುಮಾರು ಒಂದು ದೊಡ್ಡಚಮಚ ಕಿತ್ತಳೆ ಸಿಪ್ಪೆಯ ಪುಡಿಗೆ ಅರ್ಧ ಚಿಕ್ಕಚಮದ ಅರಿಶಿನಪುಡಿ ಮತ್ತು ಅರ್ಧ ಚಿಕ್ಕಚಮಚ ಜೇನು ಸೇರಿಸಿ ಚೆನ್ನಾಗಿ ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ಹಚ್ಚಿ ಇಪ್ಪತ್ತು ನಿಮಿಷ ಒಣಗಲು ಬಿಡಿ. ಬಳಿಕ ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ. ಈ ವಿಧಾನದಿಂದ ಮುಖದ ನೆರಿಗೆಗಳು ಇಲ್ಲವಾಗುತ್ತವೆ. ಸರ್ವ ವಿಧದಲ್ಲೂ ಪ್ರಯೋಜನಕಾರಿಯಾಗಿರುವ ಕಿತ್ತಳೆ ಸಿಪ್ಪೆ



Click it and Unblock the Notifications


