Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಕಪ್ಪುವರ್ಣಕ್ಕೆ ಗುಡ್ ಬೈ - ಗೌರವ ವರ್ಣಕ್ಕೆ ಹಾಯ್, ಹಾಯ್....
ಬೆಳ್ಳಗಾಗಬೇಕು ಎಂಬುದು ಗೋಧಿಬಣ್ಣದವರೆಲ್ಲರ ಇಚ್ಛೆ. ಒಂದು ವೇಳೆ ನಿಮ್ಮ ಚರ್ಮವೂ ಬಿಸಿಲು ಅಥವಾ ಇನ್ನಾವುದೋ ಕಾರಣದಿಂದ ಸಹಜವರ್ಣ ಕಳೆದುಕೊಂಡು ಗಾಢವಾಗಿದ್ದರೆ ಇದನ್ನು ಸರಿಪಡಿಸಲು ಬಹಳ ಹಳೆಯ ವಿಧಾನವೊಂದಿದೆ. ಎಷ್ಟೋ ವರ್ಷಗಳಿಂದ ಈ ವಿಧಾನವನ್ನು ನಮ್ಮ ಹಿರಿಯರು ಅನುಸರಿಸಿಕೊಂಡು ಬರುತ್ತಿದ್ದಾರೆ, ಆದರೆ ಹೆಚ್ಚಿನವರಿಗೆ ಇದು ಗೊತ್ತಿಲ್ಲ!
ಗೌರವರ್ಣದ ಜನರು ಸ್ವಾಭಾವಿಕವಾಗಿಯೇ ಇತರರ ಗಮನ ಸೆಳೆಯುತ್ತಾರೆ. ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ಕೃತಕ ಎಂದು ಗೊತ್ತಿರುವ ಕಾರಣ ಆತ್ಮವಿಶ್ವಾಸದಿಂದ ಮುಂದೆ ಬರಲು ಸಾಧ್ಯವಿಲ್ಲ. ಜಾಹೀರಾತಿಗೆ ಮರುಳಾಗಿ ಸೌಂದರ್ಯ ಕಳೆದುಕೊಳ್ಳಬೇಡಿ!

ಬದಲಿಗೆ ನಿಜವಾದ ಬಣ್ಣ, ಸ್ವಾಭಾವಿಕವಾದ ಮತ್ತು ಕಾಂತಿಯುಕ್ತ ತ್ವಚೆ ನೀಡುವ ಆತ್ಮವಿಶ್ವಾಸ ಯಾವುದೇ ದುಬಾರಿ ಶೃಂಗಾರಕ್ಕಿಂತ ಅಮೂಲ್ಯ. ಬನ್ನಿ, ನಿಮ್ಮ ತ್ವಚೆ ನೈಸರ್ಗಿಕ ಕಾಂತಿ ಪಡೆಯಲು ಈ ಹಳೆಯ ವಿಧಾನವನ್ನು ಬಳಸಿ, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ.
ಈ ವಿಧಾನ ಅನುಸರಿಸಲು ಎಲ್ಲಿಯೂ ಹೋಗಬೇಕಾಗಿಲ್ಲ, ಇದಕ್ಕೆ ಬೇಕಾಗಿರುವ ಸಾಮಾಗ್ರಿಗಳು ಅಲಭ್ಯವೂ ಅಲ್ಲ. ಬನ್ನಿ, ಸುಲಭವಾಗಿ ಮನೆಯಲ್ಲಿಯೇ ತಯಾರಿಸಿಕೊಳ್ಳಬಹುದಾದ, ಇದುವರೆಗೆ ಕೆಲವೇ ಜನರ ಗೌರವರ್ಣದ ಗುಟ್ಟಾಗಿದ್ದ ಈ ವಿಧಾನವನ್ನು ಈಗ ನೋಡೋಣ:
ಅಗತ್ಯವಿರುವ ಸಾಮಾಗ್ರಿಗಳು:
*ನೆಲ್ಲಿಕಾಯಿ: ಎರಡು.
*ಪಪ್ಪಾಯಿ ಹಣ್ಣು: ನಾಲ್ಕೈದು ತೊಳೆಗಳು. ಊಹೆಗೂ ನಿಲುಕದ ಪಪ್ಪಾಯಿಯ ಪವರ್ಗೆ ಬೆರಗಾಗಲೇಬೇಕು!
ತಯಾರಿಸುವ ವಿಧಾನ:
* ಮೇಲೆ ತಿಳಿಸಿದ ಸಾಮಾಗ್ರಿಗಳನ್ನು ಮಿಕ್ಸಿಯ ಬ್ಲೆಂಡರಿನಲ್ಲಿ ಚೆನ್ನಾಗಿ ಗೊಟಾಯಿಸಿ.
* ಈ ಲೇಪನವನ್ನು ಒಂದು ಬೋಗುಣಿಯಲ್ಲಿ ಸಂಗ್ರಹಿಸಿ
* ಈಗ ತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ಈ ಲೇಪನವನ್ನು ತೆಳುವಾಗಿ ಹಚ್ಚಿ
* ಹಚ್ಚುವ ಸಮಯದಲ್ಲಿ ನಯವಾಗಿ ಮಸಾಜ್ ಮಾಡಿ.
* ಕೆಲವು ನಿಮಿಷ ಮಸಾಜ್ ಮಾಡಿದ ಬಳಿಕ ಲೇಪವನ್ನು ಒಣಗಲು ಬಿಡಿ.
* ಸುಮಾರು ಹದಿನೈದು ನಿಮಿಷಗಳ ಬಳಿಕ ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ. ವಾರಕ್ಕೆ ಎರಡು ಅಥವಾ ಮೂರು ಬಾರಿ ಈ ವಿಧಾನವನ್ನು ಅನುಸರಿಸಿ.



Click it and Unblock the Notifications

