Latest Updates
-
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!
ಬೇಸಿಗೆಯಲ್ಲಿ ತ್ವಚೆಯ ಸಮಸ್ಯೆಗೆ, ಎಳೆ ನೀರಿನ ಆರೈಕೆ!
ಉರಿ ಬಿಸಿಲು, ಅದರ ಮಧ್ಯೆ ಧೂಳು, ಎಲ್ಲವೂ ಸೇರಿ ಮುಖದ ಅಂದವನ್ನೇ ಕೆಡಿಸಿದೆ. ಒಂದು ಐದು ನಿಮಿಷ ಬಿಸಿನಲ್ಲಿ ನಿಂತರೂ ಧಾರಾಕಾರವಾಗಿ ಬೆವರು ಸುರಿಯಲು ಆರಂಭವಾಗುತ್ತದೆ. ಮುಖದಿಂದ ಸುರಿಯುತ್ತಿರುವ ಬೆವರನ್ನು ದೂರ ಮಾಡಲು ನಾವು ದಿನದಲ್ಲಿ ಹಲವಾರು ಬಾರಿ ನೀರಿನಿಂದ ಮುಖ ತೊಳೆದುಕೊಳ್ಳುತ್ತೇವೆ. ನೀರಿನಿಂದ ಮುಖ ತೊಳೆದುಕೊಂಡರೆ ಮೊಡವೆಗಳು ಬರುವುದು ತಪ್ಪುವುದು, ಮಾತ್ರವಲ್ಲದೆ ಮುಖಕ್ಕೆ ಪುನರ್ಜೀವನ ನೀಡಿದಂತಾಗುವುದು.

ಆದರೆ ಸೌಂದರ್ಯ ತಜ್ಞರ ಪ್ರಕಾರ ಬೇಸಿಗೆಯಲ್ಲಿ ಬೆವರಿನ ತ್ವಚೆ, ಮೊಡವೆ ಹಾಗೂ ಕಲೆಗಳಿಂದ ದೂರ ಉಳಿಯಬೇಕೆಂದರೆ ನಾವು ಎಳೆ ನೀರಿನಿಂದ ಮುಖ ತೊಳೆಯಬೇಕಂತೆ. ಬೇಸಿಗೆಯಲ್ಲಿ ನೀವು ಸಮುದ್ರ ತೀರಕ್ಕೆ ತಿರುಗಾಡಲು ಹೋಗುತ್ತಿದ್ದೀರಿ ಎಂದಾದರೆ ಆಗ ಖಂಡಿತವಾಗಿಯೂ ನೀವು ಎಳೆ ನೀರಿನಿಂದ ಮುಖ ತೊಳೆಯಿರಿ. ಯಾಕೆಂದರೆ ಸೂರ್ಯನ ತಾಪ, ಮರಳಿನ ಬಿಸಿ ಮತ್ತು ಬಿಸಿ ಗಾಳಿ ನಿಮ್ಮ ಮುಖದ ಮೇಲೆ ಕಲೆಗಳನ್ನು ಉಂಟು ಮಾಡಬಹುದು. ಇದನ್ನು ಹೋಗಲಾಡಿಬೇಕಾದರೆ ನೀವು ತೆಂಗಿನಕಾಯಿ ನೀರಿನಿಂದ ಮುಖ ತೊಳೆದು ಆರಾಮವಾಗಿರಿ.
ಕಲೆಗಳನ್ನು ನಿವಾರಿಸುವುದು
ಮುಖದ ಮೇಲೆ ಕಲೆಗಳು ಕಾಣಿಸುತ್ತಿದ್ದರೆ ಆಗ ಎಳೆ ನೀರಿನಿಂದ ಮುಖವನ್ನು ತೊಳೆಯಿರಿ. ಕಲೆಗಳನ್ನು ನಿವಾರಿಸುವ ಗುಣಗಳು ತೆಂಗಿನಕಾಯಿ ನೀರಿನಲ್ಲಿದೆ. ಇದರಲ್ಲಿರುವ ಆ್ಯಸಿಡ್ ಅಂಶಗಳು ಕಲೆಗಳನ್ನು ನಿವಾರಿಸುವುದು ಮತ್ತು ಚರ್ಮವು ಹೊಳಪು ಪಡೆಯಲು ನೆರವಾಗುವುದು.
ಮೊಡವೆಗಳ ನಿವಾರಣೆ
ಕಪ್ಪು ಕಲೆಗಳಿಂದ ಮುಕ್ತಿ
ಕಪ್ಪು ಕಲೆಗಳಿಂದ ನಿಮಗೆ ಮುಖ ತೋರಿಸಲು ಅಸಹ್ಯವಾಗುತ್ತಿದ್ದರೆ ತೆಂಗಿನಕಾಯಿ ನೀರನ್ನು ಬಳಸಿಕೊಂಡು ಕೆಲವು ದಿನದಲ್ಲೇ ಇದರ ಫಲಿತಾಂಶವನ್ನು ನೋಡಿ. ನಿಮ್ಮ ತ್ವಚೆಯು ಅಲರ್ಜಿಯನ್ನು ಹೊಂದಿದ್ದರೆ ತೆಂಗಿನಕಾಯಿ ನೀರಿಗೆ ಸ್ವಲ್ಪ ಅರಿಶಿನ ಹಾಕಿ ಮುಖ ತೊಳೆಯಿರಿ.
ನೆರಿಗೆ ಮಾಯ
ಒಂದು ಲೋಟ ಎಳೆ ನೀರಿಗೆ, ಒಂದು ಚಮಚ ಜೇನುತುಪ್ಪ ಹಾಕಿ. ಇದನ್ನು ಸರಿಯಾಗಿ ಕಲಸಿಕೊಳ್ಳಿ ಮತ್ತು ಫೇಸ್ ಪ್ಯಾಕ್ ಆಗಿ ಬಳಸಿಕೊಳ್ಳಿ. ಇದರಿಂದ ಮುಖದ ಮೇಲಿನ ನೆರಿಗೆಗಳು ಮಾಯವಾಗುವುದು. ಇದನ್ನು ನಿಯಮಿತವಾಗಿ ಬಳಸಿಕೊಂಡರೆ ನೆರಿಗೆಗಳು ಮುಖದಿಂದ ಮಾಯವಾಗಿ ತ್ವಚೆಯು ಹೊಳಪನ್ನು ಪಡೆಯುವುದು.
ಕಂದುಬಣ್ಣ ನಿವಾರಣೆ
ಬೇಸಿಗೆಯಲ್ಲಿ ಪ್ರತಿಯೊಬ್ಬರು ಎದುರಿಸುವಂತಹ ಸಾಮಾನ್ಯ ಸಮಸ್ಯೆಯೆಂದರೆ ಮುಖದ ಮೇಲೆ ಕಂದುಬಣ್ಣ ಮೂಡುವುದು. ನಿಂಬೆರಸ ಮತ್ತು ತೆಂಗಿನಕಾಯಿ ನೀರನ್ನು ಜತೆಯಾಗಿಸಿ ಬಳಸಿದರೆ ಮುಖದ ಮೇಲಿನ ಕಂದುಕಲೆಗಳು ಮಾಯವಾಗುವುದು. ಈ ಎರಡು ಸಾಮಗ್ರಿಗಳಲ್ಲಿ ಬ್ಲೀಚಿಂಗ್ ಸಾಮರ್ಥ್ಯವಿದೆ. ಇದು ಕಂದು ಕಲೆಗಳನ್ನು ನಿವಾರಿಸುವುದು.



Click it and Unblock the Notifications


