Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಬೇಸಿಗೆಯಲ್ಲಿ ತ್ವಚೆಯ ಸಮಸ್ಯೆಗೆ, ಎಳೆ ನೀರಿನ ಆರೈಕೆ!
ಉರಿ ಬಿಸಿಲು, ಅದರ ಮಧ್ಯೆ ಧೂಳು, ಎಲ್ಲವೂ ಸೇರಿ ಮುಖದ ಅಂದವನ್ನೇ ಕೆಡಿಸಿದೆ. ಒಂದು ಐದು ನಿಮಿಷ ಬಿಸಿನಲ್ಲಿ ನಿಂತರೂ ಧಾರಾಕಾರವಾಗಿ ಬೆವರು ಸುರಿಯಲು ಆರಂಭವಾಗುತ್ತದೆ. ಮುಖದಿಂದ ಸುರಿಯುತ್ತಿರುವ ಬೆವರನ್ನು ದೂರ ಮಾಡಲು ನಾವು ದಿನದಲ್ಲಿ ಹಲವಾರು ಬಾರಿ ನೀರಿನಿಂದ ಮುಖ ತೊಳೆದುಕೊಳ್ಳುತ್ತೇವೆ. ನೀರಿನಿಂದ ಮುಖ ತೊಳೆದುಕೊಂಡರೆ ಮೊಡವೆಗಳು ಬರುವುದು ತಪ್ಪುವುದು, ಮಾತ್ರವಲ್ಲದೆ ಮುಖಕ್ಕೆ ಪುನರ್ಜೀವನ ನೀಡಿದಂತಾಗುವುದು.

ಆದರೆ ಸೌಂದರ್ಯ ತಜ್ಞರ ಪ್ರಕಾರ ಬೇಸಿಗೆಯಲ್ಲಿ ಬೆವರಿನ ತ್ವಚೆ, ಮೊಡವೆ ಹಾಗೂ ಕಲೆಗಳಿಂದ ದೂರ ಉಳಿಯಬೇಕೆಂದರೆ ನಾವು ಎಳೆ ನೀರಿನಿಂದ ಮುಖ ತೊಳೆಯಬೇಕಂತೆ. ಬೇಸಿಗೆಯಲ್ಲಿ ನೀವು ಸಮುದ್ರ ತೀರಕ್ಕೆ ತಿರುಗಾಡಲು ಹೋಗುತ್ತಿದ್ದೀರಿ ಎಂದಾದರೆ ಆಗ ಖಂಡಿತವಾಗಿಯೂ ನೀವು ಎಳೆ ನೀರಿನಿಂದ ಮುಖ ತೊಳೆಯಿರಿ. ಯಾಕೆಂದರೆ ಸೂರ್ಯನ ತಾಪ, ಮರಳಿನ ಬಿಸಿ ಮತ್ತು ಬಿಸಿ ಗಾಳಿ ನಿಮ್ಮ ಮುಖದ ಮೇಲೆ ಕಲೆಗಳನ್ನು ಉಂಟು ಮಾಡಬಹುದು. ಇದನ್ನು ಹೋಗಲಾಡಿಬೇಕಾದರೆ ನೀವು ತೆಂಗಿನಕಾಯಿ ನೀರಿನಿಂದ ಮುಖ ತೊಳೆದು ಆರಾಮವಾಗಿರಿ.
ಕಲೆಗಳನ್ನು ನಿವಾರಿಸುವುದು
ಮುಖದ ಮೇಲೆ ಕಲೆಗಳು ಕಾಣಿಸುತ್ತಿದ್ದರೆ ಆಗ ಎಳೆ ನೀರಿನಿಂದ ಮುಖವನ್ನು ತೊಳೆಯಿರಿ. ಕಲೆಗಳನ್ನು ನಿವಾರಿಸುವ ಗುಣಗಳು ತೆಂಗಿನಕಾಯಿ ನೀರಿನಲ್ಲಿದೆ. ಇದರಲ್ಲಿರುವ ಆ್ಯಸಿಡ್ ಅಂಶಗಳು ಕಲೆಗಳನ್ನು ನಿವಾರಿಸುವುದು ಮತ್ತು ಚರ್ಮವು ಹೊಳಪು ಪಡೆಯಲು ನೆರವಾಗುವುದು.
ಮೊಡವೆಗಳ ನಿವಾರಣೆ
ಕಪ್ಪು ಕಲೆಗಳಿಂದ ಮುಕ್ತಿ
ಕಪ್ಪು ಕಲೆಗಳಿಂದ ನಿಮಗೆ ಮುಖ ತೋರಿಸಲು ಅಸಹ್ಯವಾಗುತ್ತಿದ್ದರೆ ತೆಂಗಿನಕಾಯಿ ನೀರನ್ನು ಬಳಸಿಕೊಂಡು ಕೆಲವು ದಿನದಲ್ಲೇ ಇದರ ಫಲಿತಾಂಶವನ್ನು ನೋಡಿ. ನಿಮ್ಮ ತ್ವಚೆಯು ಅಲರ್ಜಿಯನ್ನು ಹೊಂದಿದ್ದರೆ ತೆಂಗಿನಕಾಯಿ ನೀರಿಗೆ ಸ್ವಲ್ಪ ಅರಿಶಿನ ಹಾಕಿ ಮುಖ ತೊಳೆಯಿರಿ.
ನೆರಿಗೆ ಮಾಯ
ಒಂದು ಲೋಟ ಎಳೆ ನೀರಿಗೆ, ಒಂದು ಚಮಚ ಜೇನುತುಪ್ಪ ಹಾಕಿ. ಇದನ್ನು ಸರಿಯಾಗಿ ಕಲಸಿಕೊಳ್ಳಿ ಮತ್ತು ಫೇಸ್ ಪ್ಯಾಕ್ ಆಗಿ ಬಳಸಿಕೊಳ್ಳಿ. ಇದರಿಂದ ಮುಖದ ಮೇಲಿನ ನೆರಿಗೆಗಳು ಮಾಯವಾಗುವುದು. ಇದನ್ನು ನಿಯಮಿತವಾಗಿ ಬಳಸಿಕೊಂಡರೆ ನೆರಿಗೆಗಳು ಮುಖದಿಂದ ಮಾಯವಾಗಿ ತ್ವಚೆಯು ಹೊಳಪನ್ನು ಪಡೆಯುವುದು.
ಕಂದುಬಣ್ಣ ನಿವಾರಣೆ
ಬೇಸಿಗೆಯಲ್ಲಿ ಪ್ರತಿಯೊಬ್ಬರು ಎದುರಿಸುವಂತಹ ಸಾಮಾನ್ಯ ಸಮಸ್ಯೆಯೆಂದರೆ ಮುಖದ ಮೇಲೆ ಕಂದುಬಣ್ಣ ಮೂಡುವುದು. ನಿಂಬೆರಸ ಮತ್ತು ತೆಂಗಿನಕಾಯಿ ನೀರನ್ನು ಜತೆಯಾಗಿಸಿ ಬಳಸಿದರೆ ಮುಖದ ಮೇಲಿನ ಕಂದುಕಲೆಗಳು ಮಾಯವಾಗುವುದು. ಈ ಎರಡು ಸಾಮಗ್ರಿಗಳಲ್ಲಿ ಬ್ಲೀಚಿಂಗ್ ಸಾಮರ್ಥ್ಯವಿದೆ. ಇದು ಕಂದು ಕಲೆಗಳನ್ನು ನಿವಾರಿಸುವುದು.



Click it and Unblock the Notifications



