Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಒಣ ಚರ್ಮದ ಸಮಸ್ಯೆಗೆ 'ಹಣ್ಣುಗಳ ಫೇಸ್ ಪ್ಯಾಕ್' ಪ್ರಯತ್ನಿಸಿ ನೋಡಿ...
ಚರ್ಮ ನೋಡಿ ದೇಹದ ಆರೋಗ್ಯದ ಬಗ್ಗೆ ಹೇಳಬಹುದು ಎನ್ನುತ್ತಾರೆ. ಒಬ್ಬನ ಚರ್ಮವು ಒಳ್ಳೆಯ ರೀತಿಯಲ್ಲಿದ್ದರೆ ಆಗ ಆತನ ಆರೋಗ್ಯವು ಚೆನ್ನಾಗಿ ಇದೆ ಎನ್ನಬಹುದು. ಆದರೆ ದೇಹದಲ್ಲಿ ಕೆಲವೊಂದು ಬದಲಾವಣೆಗಳು ಆದಾಗ ಅದು ಚರ್ಮದಲ್ಲಿ ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ನೈಸರ್ಗಿಕ ತೇವಾಂಶ ಇಲ್ಲದೆ ಇರುವಂತಹ ಸಂದರ್ಭದಲ್ಲಿ ಒಣ ಚರ್ಮವು ಕಂಡುಬರುವುದು. ಸಂಪೂರ್ಣ ದೇಹವು ಇದರಿಂದ ಒಣಗದೆ ಇದ್ದರೂ ಕೆಲವೊಂದು ಭಾಗಗಳು ಒಣಗಿರುತ್ತದೆ.
ಇಂತಹ ಒಣಚರ್ಮವು ಕೆಲವು ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಚರ್ಮವು ಒಣಗಿದ್ದ ಕಡೆಗಳಲ್ಲಿ ತುರಿಸುವುದು ಮತ್ತು ಗಡುಸಾಗಿರುತ್ತದೆ. ತುರಿಸಿದರೆ ಬಿಳಿ ಬಣ್ಣದ ಗೆರೆ ಚರ್ಮದ ಮೇಲೆ ಮೂಡುತ್ತದೆ. ಒಣ ಚರ್ಮದ ಸಮಸ್ಯೆಯು ಕೆಲವೊಂದು ಸಲ ತೀವ್ರವಾಗಬಹುದು. ಇದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತಾ ಇರುತ್ತದೆ. ಇದಕ್ಕೆ ಕೆಲವೊಂದು ಕ್ರೀಮ್ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಇಂತಹ ಕ್ರೀಮ್ಗಳನ್ನು ಬಳಸಿಕೊಂಡು ಒಣ ಚರ್ಮ ನಿವಾರಣೆ ಮಾಡಬಹುದು.
ಆದರೆ ಇದಕ್ಕೆ ಉತ್ತಮ ಪರಿಹಾರವೆಂದರೆ ಮನೆಯಲ್ಲಿ ತಯಾರಿಸುವಂತಹ ಫೇಸ್ ಪ್ಯಾಕ್ ಬಳಸಿಕೊಳ್ಳುವುದು. ಹಣ್ಣುಗಳಿಂದ ತಯಾರಿಸುವಂತಹ ಫೇಸ್ ಪ್ಯಾಕ್ ಚರ್ಮಕ್ಕೆ ತೇವಾಂಶ ನೀಡುವುದು. ದೇಹದ ಯಾವುದೇ ಭಾಗಕ್ಕೆ ಈ ಪ್ಯಾಕ್ ಹಚ್ಚಿಕೊಳ್ಳಬಹುದು. ಒಳ್ಳೆಯ ಫಲಿತಾಂಶ ನೀಡಿದರೆ ಇದನ್ನು ಮುಂದೆ ಕೂಡ ಬಳಸಬಹುದು. ಹಣ್ಣುಗಳಿಂದ ಫೇಸ್ ಪ್ಯಾಕ್ ತಯಾರಿಸುವುದು ಹೇಗೆ ಮತ್ತು ಅದನ್ನು ಬಳಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿಕೊಳ್ಳಿ....

ಬಾಳೆಹಣ್ಣು
ಆ್ಯಂಟಿಆಕ್ಸಿಡೆಂಟ್ ಮತ್ತು ಫ್ಯಾಟೊಕೆಮಿಕಲ್ಸ್ ನ್ನು ಹೊಂದಿರುವ ಬಾಳೆಹಣ್ಣು ನೈಸರ್ಗಿಕವಾಗಿ ತೇವಾಂಶ ನೀಡುವುದು. ಚರ್ಮಕ್ಕೆ ಒಳ್ಳೆಯ ಫಲಿತಾಂಶ ನೀಡಬೇಕಾದರೆ ಜೇನುತುಪ್ಪ ಮತ್ತು ಆಲಿವ್ ತೈಲದೊಂದಿಗೆ ಇದರ ಮಿಶ್ರಣ ಮಾಡಿ ಬಳಸಿಕೊಳ್ಳಿ.

ಬೇಕಾಗುವ ಸಾಮಗ್ರಿಗಳು
*ಹಣ್ಣಾಗಿರುವ ಬಾಳೆಹಣ್ಣು ಒಂದು
*ಒಂದು ಚಮಚ ಆಲಿವ್ ತೈಲ
*ಒಂದು ಸಣ್ಣ ಪಾತ್ರೆ
*ಒಂದು ಬಾಳೆಹಣ್ಣನ್ನು ಸರಿಯಾಗಿ ಕಿವುಚಿಕೊಳ್ಳಿ ಮತ್ತು ಮಿಕ್ಸಿಗೆ ಇದನ್ನು ಹಾಕಿ. *ಬಾಳೆಹಣ್ಣಿನ ಪೇಸ್ಟ್ ಮಾಡಿ ಅದನ್ನು ಸಣ್ಣ ಪಾತ್ರೆಯಲ್ಲಿಡಿ.
*ಬಾಳೆಹಣ್ಣಿನ ಪೇಸ್ಟ್ಗೆ ಜೇನುತುಪ್ಪ ಮತ್ತು ಆಲಿವ್ ಎಣ್ಣೆ ಹಾಕಿ. ಈ ವೇಳೆ ಪೇಸ್ಟ್ ತೆಳು ಹಳದಿ ಬಣ್ಣಕ್ಕೆ ಬರುವುದು.
*ಈ ಪೇಸ್ಟ್ ಅನ್ನು ಒಣಚರ್ಮವಿರುವ ಭಾಗಕ್ಕೆ ಮೇಲ್ಮುಖವಾಗಿ ಹಚ್ಚಿಕೊಳ್ಳಿ.
*ಹತ್ತು ನಿಮಿಷ ತನಕ ಈ ಪ್ಯಾಕ್ ಒಣಚರ್ಮದ ಭಾಗದಲ್ಲಿ ಇರಲಿ.
ಹತ್ತು ನಿಮಿಷ ಬಿಟ್ಟು ತಂಪು ನೀರು ಅಥವಾ ಹಾಲಿನಿಂದ ತೊಳೆಯಿರಿ.

ಮುಳ್ಳು ಸೌತೆಕಾಯಿ
ಮುಳ್ಳು ಸೌತೆಯಲ್ಲಿರುವಂತಹ ರಸವು ಒಣಚರ್ಮಕ್ಕೆ ಒಳ್ಳೆಯ ತೇವಾಂಶ ನೀಡುವುದು. ಮುಳ್ಳುಸೌತೆಕಾಯಿಯ ರಸ ಹಚ್ಚಿಕೊಂಡರೆ ಒಳ್ಳೆಯ ಫಲಿತಾಂಶ ಪಡೆಯಬಹುದು. ಆದರೆ ಈ ರಸಕ್ಕೆ ಅಲೋವೆರಾ ಜೆಲ್ ಹಾಕಿಕೊಂಡರೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ.

ಬೇಕಾಗುವ ಸಾಮಗ್ರಿಗಳು
*ಒಂದು ಕಪ್ ಮುಳ್ಳುಸೌತೆ ರಸ
*2 ಚಮಚ ತಾಜಾ ಅಲೋವೆರಾ ಜೆಲ್
*ಒಂದು ಸ್ವಚ್ಛವಾಗಿರುವ ಸಣ್ಣ ಪಾತ್ರೆ.
*ಮುಳ್ಳುಸೌತೆ ರಸ ತೆಗೆಯಲು ಇದನ್ನು ಮಿಕ್ಸಿಗೆ ಹಾಕಿಕೊಂಡು ರುಬ್ಬಿಕೊಳ್ಳಿ. ಇದನ್ನು ಸೋಸಿಕೊಂಡು ರಸ ತೆಗೆಯಿರಿ.
*ಸಣ್ಣ ಪಾತ್ರೆಗೆ ಸೌತೆಕಾಯಿ ರಸ ಹಾಕಿ ಮತ್ತು ಇದಕ್ಕೆ ಅಲೋವೆರಾ ಹಾಕಿ ಮಿಶ್ರಣ ಮಾಡಿಕೊಳ್ಳಿ.
*ಇದನ್ನು ಒಣಚರ್ಮವಿರುವ ಜಾಗಕ್ಕೆ ಹಚ್ಚಿಕೊಳ್ಳಿ ಮತ್ತು ಸ್ವಚ್ಛ ನೀರಿನಿಂದ ತೊಳೆಯುವ ಮೊದಲು 15 ನಿಮಿಷ ಕಾಲ ಹಾಗೆ ಬಿಡಿ.

ಪಪ್ಪಾಯಿ
ಪಪ್ಪಾಯಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪ್ರತಿಯೊಬ್ಬರಿಗೂ ತಿಳಿದಿದೆ. ಅದೇ ಪಪ್ಪಾಯಿಯಲ್ಲಿ ಆ್ಯಂಟಿಆಕ್ಸಿಡೆಂಟ್, ಫ್ಲಾವನಾಯ್ಡ್, ಪಾಂಟೊಥೆನಿಕ್ ಆಮ್ಲ, ವಿಟಮಿನ್ ಬಿ ಮತ್ತು ಹಲವಾರು ರೀತಿಯ ಖನಿಜಾಂಶಗಳು ಪಪ್ಪಾಯಿಯಲ್ಲಿದೆ. ಇದು ಚರ್ಮಕ್ಕೆ ತೇವಾಂಶ ನೀಡುವುದು. ಇಷ್ಟು ಮಾತ್ರವಲ್ಲದೆ ವಯಸ್ಸಾಗುವ ಲಕ್ಷಣ, ನೆರಿಗೆ ಮತ್ತು ಕಪ್ಪು ಕಲೆಗಳಿಂದ ಮುಕ್ತಿ ನೀಡುವುದು.

ಬೇಕಾಗುವ ಸಾಮಗ್ರಿಗಳು
*1 ಚಮಚ ದಪ್ಪ ಮೊಸರು
*3-5 ಹನಿ ಲಿಂಬೆರಸ
*2 ಚಮಚ ಪಪ್ಪಾಯಿ ತಿರುಳು
*1 ಚಮಚ ಮುಲ್ತಾನಿ ಮಿಟ್ಟಿ
*1 ಚಮಚ ಜೇನುತುಪ್ಪ
1 ಸ್ವಚ್ಛ ಸಣ್ಣ ಪಾತ್ರೆ
ಪಪ್ಪಾಯಿ ತಿರುಳು ಮತ್ತು ಮೊಸರನ್ನು ಜತೆ ಸೇರಿಸಿಕೊಂಡು ಮಿಶ್ರಣ ಮಾಡಿಕೊಳ್ಳಿ. ಇದಕ್ಕೆ ಜೇನುತುಪ್ಪ, ಲಿಂಬೆರಸ ಮತ್ತು ಮುಲ್ತಾನಿ ಮಿಟ್ಟಿ ಸೇರಿಸಿಕೊಳ್ಳಿ. ಇದನ್ನು ಮಿಶ್ರಣ ಮಾಡಿ ಮೃಧುವಾದ ಪೇಸ್ಟ್ ಮಾಡಿಕೊಳ್ಳಿ. ಒಣ ಚರ್ಮವಿರುವ ಜಾಗಕ್ಕೆ ಬ್ರಷ್ ಅಥವಾ ಕೈಯಿಂದ ಪಪ್ಪಾಯಿ ಫೇಸ್ ಪ್ಯಾಕ್ ಹಚ್ಚಿಕೊಳ್ಳಿ. ಒಣಚರ್ಮವು ಈ ಫೇಸ್ ಪ್ಯಾಕ್ ನ್ನು ಹೀರಿಕೊಳ್ಳಲು ಬಿಡಿ. ಸ್ವಲ್ಪ ಸಮಯ ಬಿಟ್ಟು ಒಣಗಿದ ಬಳಿಕ ತಣ್ಣೀರಿನಿಂದ ತೊಳೆಯಿರಿ.



Click it and Unblock the Notifications